ಜನ ನನನ್ನು ಏಕೆ ಸೋಲಿಸಬೇಕು ಎಂದು 5 ಕಾರಣಗಳನ್ನು ನೀಡಿ: ಸಿಎಂ ಸಿದ್ದುಗೆ ಪ್ರತಾಪ್ ಸಿಂಹ ಸವಾಲು
ಮೈಸೂರು, ಸೆಪ್ಟೆಂಬರ್, 03: ಈ ಬಾರಿ ಎಂಪಿ ಚುನಾವಣೆಯಲ್ಲಿ ಪ್ರತಾಪ್ ಸಿಂಹನನ್ನು ಸೋಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಜನ ನನ್ನನ್ನು ಏಕೆ ಸೋಲಿಸಬೇಕು ಎಂಬುದಕ್ಕೆ ಅವರು ಕಾರಣ ನೀಡಲಿ ಎಂದು ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯಗೆ ಮೈಸೂರಿನಲ್ಲಿ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ ಕುವೆಂಪುನಗರದಲ್ಲೋ, ಸರಸ್ವತಿಪುರಂನಲ್ಲೋ, ಸಿದ್ದಾರ್ಥ ಬಡಾವಣೆಯಲ್ಲೋ ಬಂದು ಸಿಎಂ ಈ ರೀತಿ ಹೇಳೋಕೆ ಆಗಲ್ಲ. ಉದಯಗಿರಿಯಲ್ಲಿ ಹೋಗಿ ಕೈ ಮುಗಿದು ನನ್ನನ್ನು ಸೋಲಿಸಲು ಕರೆ ಕೊಟ್ಟಿದ್ದಾರೆ. ಕೈಮಗಿದು ಪ್ರತಾಪ್ ಸಿಂಹನನ್ನು ಸೋಲಿಸಿ ಎಂದು ಕೇಳುವ ದಯನೀಯ ಸ್ಥಿತಿ ಸಿಎಂಗೆ ಬರಬಾರದಿತ್ತು. ಅಷ್ಟಕ್ಕೂ ನನ್ನನ್ನು ಜನರು ಏಕೆ ಸೋಲಿಸಬೇಕು ಎಂಬುದಕ್ಕೆ ಐದು ಕಾರಣಗಳನ್ನು ನೀಡಲಿ ಎಂದು ಸವಾಲು ಹಾಕಿದರು.

ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ಹೈವೆ ಮಾಡಿಸಿದ್ದು ನನ್ನ ತಪ್ಪಾ? ಗ್ರೇಟರ್ ಮೈಸೂರು ಮಾಡಲು ಹೊರಟ್ಟಿದ್ದು ತಪ್ಪಾ? ವಿಮಾನ ನಿಲ್ದಾಣ ಅಭಿವೃದ್ಧಿ ಮಾಡಲು ಹೊರಟ್ಟಿದ್ದು, ಚಾಮುಂಡಿ ಬೆಟ್ಟದ ಅಭಿವೃದ್ಧಿ ಮಾಡುತ್ತಿರುವುದು ತಪ್ಪಾ? ಎಂದು ಪ್ರಶ್ನಿಸುವ ಮೂಲಕ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
40 ವರ್ಷದಿಂದ ಸಿದ್ದರಾಮಯ್ಯ ರಾಜಕೀಯದಲ್ಲಿದ್ದಾರೆ. ಅವರು ಮೈಸೂರಿಗೆ ಮಾಡಿರುವ ಕೆಲಸ ಏನು ಎಂಬುದನ್ನು ಹೇಳಲಿ. ಕೆಲಸ ಮಾಡಿದವನನ್ನು ಸೋಲಿಸಬೇಕು ಅಂತಾ ಕೈ ಮುಗಿದು ಸಿಎಂ ಕೇಳಿದರೆ ಜನ ಅದನ್ನು ಒಪ್ಪುತ್ತಾರಾ? ಎಂದರು. ಅಲ್ಲದೆ ಸಿದ್ದರಾಮಯ್ಯ ಅವರಿಗೆ ಬಡವರ ಮಕ್ಕಳು ಉದ್ಧಾರವಾಗಬಾರದು. ಅವರ ಮಕ್ಕಳು ಮಾತ್ರ ರಾಜಕಾರಣ ಮಾಡುತ್ತಾ ಇರಬೇಕು ಅಷ್ಟೇ. ಸಿದ್ದರಾಮಯ್ಯ ಪ್ರತಿ ಬಾರಿಯೂ ಮೋದಿ ವಿರುದ್ಧ ಮಾತಾಡುತ್ತಾರೆ. ಇದು ಒಂಥರಾ ಆಕಾಶದ ಕಡೆ ಮುಖ ಮಾಡಿ ಉಗಿದಂತೆ ಎಂದು ಟೀಕಿಸಿದರು.
-
Samarth Shamanur: ದಾವಣಗೆರೆ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಫೈಟ್ ಅಂತ್ಯ: ಶಾಮನೂರು ಕುಟುಂಬದ ಕುಡಿ ಸಮರ್ಥ್ ಕಣಕ್ಕೆ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಕರ್ನಾಟಕದಲ್ಲಿ ಜೀವ ಬಲಿ ಪಡೆಯುತ್ತಿರುವ ಖಾಸಗಿ ಬಸ್ಗಳು: 6 ವರ್ಷಗಳಲ್ಲಿ 3,823 ಅಪಘಾತ ಪ್ರಕರಣಗಳು ವರದಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications