ಹುಣಸೂರಿನಲ್ಲಿ ಕೊಟ್ಟಿಗೆಗೆ ನುಗ್ಗಿ ಮೇಕೆ ಎಳೆದೊಯ್ದ ಹುಲಿ: ಆತಂಕದಲ್ಲಿ ಗ್ರಾಮಸ್ಥರು
ಮೈಸೂರು, ಮೇ. 25: ಸಾಂಸ್ಕೃತಿಕ ರಾಜಧಾನಿ ಮೈಸೂರು ಭಾಗದಲ್ಲಿ ಹುಲಿ ಹಾವಳಿ ಹೆಚ್ಚಾಗಿದೆ. ಹುಣಸೂರು ತಾಲೂಕಿನಲ್ಲಿ ಹುಲಿ ದಾಳಿಗೆ ಮೇಕೆಯೊಂದು ಬಲಿಯಾಗಿದೆ. ಹಳ್ಳಿಯ ಕೊಟ್ಟಿಗೆಗೆ ನುಗ್ಗಿದ ಹುಲಿಯೊಂದು ಮೇಕೆಯನ್ನು ಕೊಂದು ಎಳೆದೊಯ್ದು ತಿಂದು ಹಾಕಿರುವ ಘಟನೆ ಸಿಂಡೇನಹಳ್ಳಿ ಗ್ರಾಮದಲ್ಲಿ ಗುರುವಾರ ವರದಿಯಾಗಿದೆ.
ನಾಗರಹೊಳೆ ಉದ್ಯಾನದಂಚಿನ ಹುಣಸೂರು ತಾಲೂಕಿನ ಸಿಂಡೇನಹಳ್ಳಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಹುಲಿ ಮೇಕೆಯನ್ನು ಎಳೆದೊಯ್ದು ತಿಂದಿರುವ ಘಟನೆ ನಡೆದಿದ್ದು, ಈ ಘಟನೆಯಿಂದ ಗ್ರಾಮಸ್ಥರು ಭಯ ಭೀತರಾಗಿದ್ದಾರೆ. ಸಿಂಡೇನಹಳ್ಳಿ ಗ್ರಾಮದ ಸತೀಶ್ ಎಂಬುವವರ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಮೇಕೆಯ ಮೇಲೆ, ಗುರುವಾರ ಬೆಳಗಿನ ಜಾವ ಹುಲಿ ದಾಳಿ ನಡೆಸಿ ಸಂಪೂರ್ಣ ತಿಂದು ಹಾಕಿದೆ.

ಸಿಂಡೇನಹಳ್ಳಿ ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆಯ ಸಿಬ್ಬಂದಿ, ಸ್ಥಳ ಮಹಜರು ನಡೆಸಿದ್ದಾರೆ. ಹುಲಿ ದಾಳಿ ನಡೆಸಿರುವ ಜಾಗದಲ್ಲಿ ಹುಲಿಯ ಹೆಜ್ಜೆ ಗುರುತುಗಳು ಕಂಡಿ ಬಂದಿವೆ, ಇದನ್ನುಕುಡ ಅಧಿಕಾರಿಗಳಿಗೆ ಗ್ರಾಮಸ್ಥರು ತೋರಿಸಿದ್ದಾರೆ. ಈ ಭಾಗದಲ್ಲಿ ಈಗಾಗಲೆ ಜೋಳ, ಶುಂಠಿ ನಾಟಿ ಮಾಡಿದ್ದು, ಕೆಲವೇ ದಿನಗಳಲ್ಲಿ ಬೆಳೆ ಎತ್ತರಕ್ಕೆ ಬೆಳೆಯಲಿದೆ. ಆಗ ಹುಲಿ ಹಿಡಿಯುವುದು ಮತ್ತಷ್ಟು ಕಷ್ಟವಾಗಲಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಬೆಳೆ ಬೆಳೆಯುವ ಮುನ್ನ ಈಗಲೇ ಹುಲಿ ಹೆಜ್ಜೆ ಪತ್ತೆಮಾಡಿ ಹುಲಿಯನ್ನು ಸೆರೆ ಹಿಡಿಯಬಹುದು, ಬೆಳೆ ಬೆಳೆದ ನಂತರದಲ್ಲಿ ಹುಲಿಯನ್ನು ಪತ್ತೆ ಮಾಡುವುದೇ ಕಷ್ಟವಾಗಲಿದೆ. ಬುಧವಾರ ರೈತರ ಜಮೀನಿನಲ್ಲಿ ಹುಲಿ ಓಡಾಡಿರುವ ಹೆಜ್ಜೆ ಗುರಿತಿದೆ. ಗುರುವಾರ ಬೆಳಗ್ಗೆ ಮನೆ ಮುಂದೆ ಓಡಾಡಿ, ಕೊಟ್ಟಿಗೆಗೆ ನುಗ್ಗಿ ಮೇಕೆ ಕೊಂದು ಹಾಕಿದೆ ಹೀಗಾಗಿ ಆದಷ್ಟು ಬೇಗ ಹುಲಿ ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನಾಗರಹೊಳೆ ಉದ್ಯಾನದಂಚಿನ ಈ ಭಾಗದಲ್ಲಿ ಆಗಾಗ ಹುಲಿ, ಚಿರತೆಗಳು ಜನ ಜಾನುವಾರುಗಳ ಮೇಲೆ ದಾಳಿ ನಡೆಸಿ ಕಾಡಂಚಿನ ಜನರನ್ನು ಭಯಭೀತಿಗೊಳಿಸುತ್ತಿವೆ. ಈ ಭಾಗದಲ್ಲಿ ಗಿರಿಜನ ಹಾಡಿಗಳು ಸೇರಿದಂತೆ ಹತ್ತಾರು ಗ್ರಾಮಗಳಿದ್ದು, ಹುಲಿಯ ಭಯದಿಂದ ಜನರು ಓಡಾಡಲು ಹೆದರುತ್ತಿದ್ದಾರೆ. ಹೀಗಾಗಿ ಹುಲಿ ಹಿಡಿಯಲು ಬೋನಿಟ್ಟು ಹುಲಿ ಸೆರೆಹಿಡಿದು, ಈ ಭಾಗದ ಜನರು ನೆಮ್ಮದಿಯಿಂದ ಬದುಕಲು ಅವಕಾಶ ಕಲ್ಪಿಸಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications