ಮಹಾ ಶಿವರಾತ್ರಿ ಆಚರಣೆಗೆ ಸಜ್ಜಾದ ಮೈಸೂರು, ದೇವಾಲಯಗಳಲ್ಲಿ ವಿಶೇಷ ಪೂಜೆ
ಮೈಸೂರು, ಮಾರ್ಚ್ 3:ಮಹಾ ಶಿವರಾತ್ರಿ ಆಚರಣೆಗೆ ನಗರ ಸಜ್ಜಾಗಿದೆ. ಶಿವನ ಆರಾಧಕರು ಈಗಾಗಲೇ ತಮ್ಮ ತಮ್ಮ ನಿವಾಸಗಳಲ್ಲಿ ಭರದಿಂದ ಸಿದ್ಧತೆ ನಡೆಸಿದ್ದಾರೆ. ಶಿವರಾತ್ರಿ ನಿಮಿತ್ತ ನಡೆಸುವ ಉಪವಾಸಕ್ಕೆ ಅಗತ್ಯವಾಗಿ ಬೇಕಾದ ಹಣ್ಣುಹಂಪಲುಗಳ ಖರೀದಿಯಲ್ಲಿ ಜನರು ತೊಡಗಿದ್ದಾರೆ.
ಕರಬೂಜ ಹಾಗೂ ಕಲ್ಲಂಗಡಿ ಹಣ್ಣುಗಳಿಗೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿದೆ.ನಗರದಲ್ಲಿರುವ ಶಿವಮಂದಿರಗಳು ವಿಶೇಷ ಪೂಜೆ ಪುನಸ್ಕಾರಗಳಿಗೆ ಅಣಿಗೊಂಡಿವೆ. ರಾಮಾನುಜ ರಸ್ತೆಯಲ್ಲಿರುವ ಕಾಮಕಾಮೇಶ್ವರಿ ದೇವಾಲಯ ಹಾಗೂ ಇದರ ಎದುರು ಇರುವ ನೂರೊಂದು ಶಿವಲಿಂಗಗಳ ದೇವಾಲಯದಲ್ಲಿ ಜನಜಾತ್ರೆಯೇ ಸೇರಲಿದೆ.
ಇದರ ಜೊತೆಗೆ, ದಿವಾನ್ಸ್ ರಸ್ತೆಯಲ್ಲಿರುವ ಅಮೃತೇಶ್ವರ ದೇವಸ್ಥಾನ, ವಾಣಿವಿಲಾಸ ಮೊಹಲ್ಲಾದ ಚಂದ್ರಮೌಳೀಶ್ವರ ದೇವಸ್ಥಾನ, ಬೋಗಾದಿ ರಿಂಗ್ ರಸ್ತೆಯಲ್ಲಿರುವ ನಾಗೇಶ್ವರ ಭೋಗೇಶ್ವರಸ್ವಾಮಿ ದೇವಾಲಯ, ಕುಂಬಾರಕೊಪ್ಪಲಿನ ಮಹದೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆಯಲಿವೆ.

ಅವಧೂತ ದತ್ತಪೀಠದಲ್ಲಿ, ಚಾಮುಂಡಿಬೆಟ್ಟದ ಮಹಾಬಲೇಶ್ವರ ದೇಗುಲದಲ್ಲೂ ಭಕ್ತರು ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬರಲಿದ್ದಾರೆ. ನಂಜನಗೂಡಿನ ನಂಜುಂಡೇಶ್ವರ ದೇವಾಲಯವೂ ಶಿವರಾತ್ರಿಗೆ ಸಿದ್ಧಗೊಂಡಿದೆ. ರಾಜ್ಯದಾದ್ಯಂತ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. ಜಾಗರಣೆಗಾಗಿಯೇ ದೇವಾಲಯಗಳಲ್ಲಿ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ.
ಚಿನ್ನದ ಕೊಳಗಧಾರಣೆ
ಅರಮನೆಯ ಜಯಮಾರ್ತಾಂಡ ದ್ವಾರದ ಪಕ್ಕದಲ್ಲಿರುವ ತ್ರಿನಯನೇಶ್ವರ ದೇಗುಲದಲ್ಲಿನ ಶಿವಲಿಂಗಕ್ಕೆ ಚಿನ್ನದ ಕೊಳಗಧಾರಣೆ ನಡೆಯಲಿದೆ. ನಾಳೆ ನಸುಕಿನ 5.30ಕ್ಕೆ ವಿಶೇಷ ಪೂಜಾವಿಧಿಗಳು ಆರಂಭವಾಗಲಿವೆ. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಹುಟ್ಟಿದ ಸಂದರ್ಭದಲ್ಲಿ ದೇವಾಲಯಕ್ಕೆ ಈ ಕೊಳಗವನ್ನು ಉಡುಗೊರೆಯಾಗಿ ನೀಡಲಾಗಿತ್ತು. ಇದೇ ವೇಳೆ ಮೈಸೂರು ಜಿಲ್ಲಾಡಳಿತದ ಖಜಾನೆಯಲ್ಲಿದ್ದ ಇದೇ ಚಿನ್ನದ ಮುಖವಾಡವನ್ನು ಮಹಾಶಿವರಾತ್ರಿ ಪ್ರಯುಕ್ತ ಅರಮನೆ ಆವರಣದಲ್ಲಿರುವ ತ್ರಿನೇಶ್ವರಸ್ವಾಮಿ ದೇವಾಲಯಕ್ಕೆ ಹಸ್ತಾಂತರಿಸಲಾಯಿತು.

ಮುಜರಾಯಿ ಇಲಾಖೆ ಶಿವರಾತ್ರಿ ಇಡೀ ದಿನ ಭಕ್ತರಿಗೆ ತ್ರಿನೇಶ್ವರ ಲಿಂಗದ ದರ್ಶನದ ಮಾಡಲು ಅವಕಾಶ ಮಾಡಿಕೊಡಲಿದೆ. ಶಿವರಾತ್ರಿ ದಿನ ಅನೇಕ ಭಕ್ತರು ಜಾಗರಣೆ ಮಾಡುತ್ತಾರೆ. ಹೀಗಾಗಿ ಅಂದಿನ ದಿನ ಶಿವನ ದೇವಾಲಯಗಳು ರಾತ್ರಿಯಿಡೀ ತೆರೆದಿರುತ್ತದೆ. ಅದೇ ರೀತಿ ತ್ರಿನೇಶ್ವರ ದೇವಾಲಯಲೂ ತೆರೆದಿರುತ್ತದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications