ಕರ್ನಾಟಕ ರಾಜ್ಯ ಮುಕ್ತ ವಿವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ
ಮೈಸೂರು, ಮೇ 28 : ವಿವಿಧ ಕಾರಣಕ್ಕಾಗಿ ಮಾನ್ಯತೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2011-12 ಮತ್ತು 2012-13 ಸಾಲಿನ ವಿದ್ಯಾರ್ಥಿಗಳಿಗೆ ಸದ್ಯ ಸಿಹಿ ಸುದ್ದಿಯೊಂದು ಲಭ್ಯವಾಗಿದೆ.
ಯುಜಿಸಿಯಿಂದ ಮಾನ್ಯತೆ ಸಿಕ್ಕ ಬಳಿಕ ಹಲವಾರು ಸಕಾರಾತ್ಮಕ ಕಾರ್ಯಕ್ರಮ ಅನುಷ್ಠಾನಕ್ಕೆ ಬರುತ್ತಿದೆ. ಇದೀಗ ಅದೇ ಸಾಲಿನಲ್ಲಿ ಪ್ರವೇಶಾತಿ ಪಡೆದು ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ, ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ಸಿಗದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಸಾವಿರಾರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮರು ಪರೀಕ್ಷೆಗೆ ಅವಕಾಶ ಕಲ್ಪಿಸುವ ಈ ಪ್ರಮುಖ ತೀರ್ಮಾನವನ್ನು ರಾಜ್ಯ ಮುಕ್ತ ವಿವಿ ತೆಗೆದುಕೊಂಡಿದೆ ಎಂದು ಮುಕ್ತ ವಿವಿ ಕುಲಪತಿ ಪ್ರೊ.ಡಿ.ಶಿವಲಿಂಗಯ್ಯ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವವಿದ್ಯಾನಿಲಯದಲ್ಲಿ ಜಾರಿಯಲ್ಲಿದ್ದ ನಿಯಮಾವಳಿಗಳ ಪ್ರಕಾರ ಹಾಗೂ ಕರ್ನಾಟಕ ಸರಕಾರದ ಆದೇಶದಂತೆ ಪರೀಕ್ಷೆ ಬರೆಯಲು ಅವಕಾಶ ಕೊಡುವ ಉದ್ದೇಶದಿಂದ ಅಂತರ್ ಗೃಹ 2011-12, 2012-13 ನೇ ಸಾಲಿನ ಬಿ.ಎ, ಬಿ.ಕಾಮ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಈ ಸಂಬಂಧ ಅಧಿಕೃತ ಪ್ರಕಟಣೆ ಸಹ ಹೊರಡಿಸಲಾಗುತ್ತದೆ ಎಂದರು.

2018-19ನೇ ಸಾಲಿಗೆ ದಾಖಲಾಗಿದ್ದ ವಿದ್ಯಾರ್ಥಿಗಳೊಂದಿಗೆ ಪರೀಕ್ಷೆ ಬರೆಯುವರಿಗೆ, ಜುಲೈನಲ್ಲಿ ಪರೀಕ್ಷೆಗಳು ನಡೆಯಲಿದ್ದು, ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಮಾಹಿತಿ ನೀಡಿದರು. ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ)ವು ಸಂಶೋಧನಾ ಕಾರ್ಯಕ್ಕೂ ಅವಕಾಶ ನೀಡಿದ್ದಾಗಿ ತಿಳಿಸಿದ ಅವರು, 2008 ಹಾಗೂ 2012ನೇ ಸಾಲಿನಲ್ಲಿ ನೋಂದಣಿಯಾಗಿದ್ದ 118 ಪಿಎಚ್.ಡಿ ವಿದ್ಯಾರ್ಥಿಗಳು ಸಂಶೋಧನಾ ಕಾರ್ಯ ಮುಂದುವರಿಸಬಹುದು ಎಂದರು.
ಮುಕ್ತ ವಿಶ್ವವಿದಾನಿಲಯದಲ್ಲಿ ಪ್ರವೇಶಾತಿ ಪಡೆದ ಸ್ನಾತಕ ಹಾಗೂ ಸ್ನಾತಕೋತ್ತರ ವಿಧ್ಯಾರ್ಥಿಗಳಿಗೆ ಈ ಬಾರಿ ಕೌಶಲ್ಯಾಭಿವೃದ್ಧಿ ತರಬೇತಿ ಕಡ್ಡಾಯಗೊಳಿಸಲಾಗಿದೆ. ಸ್ನಾತಕ ವಿಧ್ಯಾರ್ಥಿಗಳಿಗೆ ಮೂರು ಹಂತಗಳ ಕೌಶಲ್ಯಾಭಿವೃದ್ಧಿ ಶಿಕ್ಷಣಕ್ರಮವಿದ್ದು, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಎರಡು ಹಂತಗಳ ಕೌಶಲ್ಯಾಭಿವೃದ್ಧಿ ಶಿಕ್ಷಣ ಕ್ರಮವಿರುತ್ತದೆ. ಒಂದೊಂದು ಹಂತಗಳಿಗೆ ಒಂದೊಂದು ವರ್ಷದಲ್ಲಿ ತರಬೇತಿ ನೀಡಲಾಗುತ್ತದೆ. ಮೊದಲನೇ ಹಂತದ ಕೌಶಲ್ಯಾಭಿವೃದ್ಧಿ ಶಿಕ್ಷಣ ಕ್ರಮದ ವೇಳಾಪಟ್ಟಿ ಮುಕ್ತ ವಿವಿ ಅಂತರ್ಜಾಲದಲ್ಲಿ ಪ್ರಕಟಿಸಲಾಗಿದೆ ಎಂದರು.
ಕೆಎಸ್ ಒಯು ವೆಬ್ಸೈಟ್ ಅನ್ನು 2019-20ನೇ ಸಾಲಿನ ದಾಖಲಾತಿ ಅರ್ಜಿ ಆಹ್ವಾನದ ಬಳಿಕ 31,270 ಮಂದಿ ವೀಕ್ಷಿಸಿದ್ದಾರೆ. ಈ ಪೈಕಿ 77 ಮಂದಿ ಈಗಾಗಲೇ ಪೂರ್ಣ ಶುಲ್ಕ ನೀಡಿ ವಿವಿಧ ಕೋರ್ಸ್ ಗಳಿಗೆ ದಾಖಲಾಗಿದ್ದಾರೆ. 759 ಮಂದಿ ನೋಂದಣಿ ಶುಲ್ಕ ಪಾವತಿಸಿದ್ದಾರೆ. ಕಳೆದ ಬಾರಿಗಿಂತಲೂ ಹೆಚ್ಚಿನ ದಾಖಲಾತಿ ಆಗುವುದು ಖಚಿತ ಎಂದು ಅವರು ಹೇಳಿದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications