ಕರ್ನಾಟಕ ರಾಜ್ಯ ಮುಕ್ತ ವಿವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ
ಮೈಸೂರು, ಮೇ 28 : ವಿವಿಧ ಕಾರಣಕ್ಕಾಗಿ ಮಾನ್ಯತೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2011-12 ಮತ್ತು 2012-13 ಸಾಲಿನ ವಿದ್ಯಾರ್ಥಿಗಳಿಗೆ ಸದ್ಯ ಸಿಹಿ ಸುದ್ದಿಯೊಂದು ಲಭ್ಯವಾಗಿದೆ.
ಯುಜಿಸಿಯಿಂದ ಮಾನ್ಯತೆ ಸಿಕ್ಕ ಬಳಿಕ ಹಲವಾರು ಸಕಾರಾತ್ಮಕ ಕಾರ್ಯಕ್ರಮ ಅನುಷ್ಠಾನಕ್ಕೆ ಬರುತ್ತಿದೆ. ಇದೀಗ ಅದೇ ಸಾಲಿನಲ್ಲಿ ಪ್ರವೇಶಾತಿ ಪಡೆದು ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ, ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ಸಿಗದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಸಾವಿರಾರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮರು ಪರೀಕ್ಷೆಗೆ ಅವಕಾಶ ಕಲ್ಪಿಸುವ ಈ ಪ್ರಮುಖ ತೀರ್ಮಾನವನ್ನು ರಾಜ್ಯ ಮುಕ್ತ ವಿವಿ ತೆಗೆದುಕೊಂಡಿದೆ ಎಂದು ಮುಕ್ತ ವಿವಿ ಕುಲಪತಿ ಪ್ರೊ.ಡಿ.ಶಿವಲಿಂಗಯ್ಯ ತಿಳಿಸಿದರು.
ರಾಜ್ಯ ಮುಕ್ತ ವಿವಿ ಆನ್ ಲೈನ್ ಅಡ್ಮಿಷನ್ಗೆ ಭರಪೂರ ಸ್ಪಂದನೆ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವವಿದ್ಯಾನಿಲಯದಲ್ಲಿ ಜಾರಿಯಲ್ಲಿದ್ದ ನಿಯಮಾವಳಿಗಳ ಪ್ರಕಾರ ಹಾಗೂ ಕರ್ನಾಟಕ ಸರಕಾರದ ಆದೇಶದಂತೆ ಪರೀಕ್ಷೆ ಬರೆಯಲು ಅವಕಾಶ ಕೊಡುವ ಉದ್ದೇಶದಿಂದ ಅಂತರ್ ಗೃಹ 2011-12, 2012-13 ನೇ ಸಾಲಿನ ಬಿ.ಎ, ಬಿ.ಕಾಮ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಈ ಸಂಬಂಧ ಅಧಿಕೃತ ಪ್ರಕಟಣೆ ಸಹ ಹೊರಡಿಸಲಾಗುತ್ತದೆ ಎಂದರು.
2018-19ನೇ ಸಾಲಿಗೆ ದಾಖಲಾಗಿದ್ದ ವಿದ್ಯಾರ್ಥಿಗಳೊಂದಿಗೆ ಪರೀಕ್ಷೆ ಬರೆಯುವರಿಗೆ, ಜುಲೈನಲ್ಲಿ ಪರೀಕ್ಷೆಗಳು ನಡೆಯಲಿದ್ದು, ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಮಾಹಿತಿ ನೀಡಿದರು. ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ)ವು ಸಂಶೋಧನಾ ಕಾರ್ಯಕ್ಕೂ ಅವಕಾಶ ನೀಡಿದ್ದಾಗಿ ತಿಳಿಸಿದ ಅವರು, 2008 ಹಾಗೂ 2012ನೇ ಸಾಲಿನಲ್ಲಿ ನೋಂದಣಿಯಾಗಿದ್ದ 118 ಪಿಎಚ್.ಡಿ ವಿದ್ಯಾರ್ಥಿಗಳು ಸಂಶೋಧನಾ ಕಾರ್ಯ ಮುಂದುವರಿಸಬಹುದು ಎಂದರು.
ಕೆಎಸ್ಓಯು ವಿದ್ಯಾರ್ಥಿಗಳಿಂದ ಮತದಾನ ಬಹಿಷ್ಕಾರ ಚಿಂತನೆ
ಮುಕ್ತ ವಿಶ್ವವಿದಾನಿಲಯದಲ್ಲಿ ಪ್ರವೇಶಾತಿ ಪಡೆದ ಸ್ನಾತಕ ಹಾಗೂ ಸ್ನಾತಕೋತ್ತರ ವಿಧ್ಯಾರ್ಥಿಗಳಿಗೆ ಈ ಬಾರಿ ಕೌಶಲ್ಯಾಭಿವೃದ್ಧಿ ತರಬೇತಿ ಕಡ್ಡಾಯಗೊಳಿಸಲಾಗಿದೆ. ಸ್ನಾತಕ ವಿಧ್ಯಾರ್ಥಿಗಳಿಗೆ ಮೂರು ಹಂತಗಳ ಕೌಶಲ್ಯಾಭಿವೃದ್ಧಿ ಶಿಕ್ಷಣಕ್ರಮವಿದ್ದು, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಎರಡು ಹಂತಗಳ ಕೌಶಲ್ಯಾಭಿವೃದ್ಧಿ ಶಿಕ್ಷಣ ಕ್ರಮವಿರುತ್ತದೆ. ಒಂದೊಂದು ಹಂತಗಳಿಗೆ ಒಂದೊಂದು ವರ್ಷದಲ್ಲಿ ತರಬೇತಿ ನೀಡಲಾಗುತ್ತದೆ. ಮೊದಲನೇ ಹಂತದ ಕೌಶಲ್ಯಾಭಿವೃದ್ಧಿ ಶಿಕ್ಷಣ ಕ್ರಮದ ವೇಳಾಪಟ್ಟಿ ಮುಕ್ತ ವಿವಿ ಅಂತರ್ಜಾಲದಲ್ಲಿ ಪ್ರಕಟಿಸಲಾಗಿದೆ ಎಂದರು.
5 ವರ್ಷದ ಬಳಿಕ ಕರ್ನಾಟಕ ರಾಜ್ಯ ಮುಕ್ತ ವಿವಿ ಘಟಿಕೋತ್ಸವ ಸಮಾರಂಭ
ಕೆಎಸ್ ಒಯು ವೆಬ್ಸೈಟ್ ಅನ್ನು 2019-20ನೇ ಸಾಲಿನ ದಾಖಲಾತಿ ಅರ್ಜಿ ಆಹ್ವಾನದ ಬಳಿಕ 31,270 ಮಂದಿ ವೀಕ್ಷಿಸಿದ್ದಾರೆ. ಈ ಪೈಕಿ 77 ಮಂದಿ ಈಗಾಗಲೇ ಪೂರ್ಣ ಶುಲ್ಕ ನೀಡಿ ವಿವಿಧ ಕೋರ್ಸ್ ಗಳಿಗೆ ದಾಖಲಾಗಿದ್ದಾರೆ. 759 ಮಂದಿ ನೋಂದಣಿ ಶುಲ್ಕ ಪಾವತಿಸಿದ್ದಾರೆ. ಕಳೆದ ಬಾರಿಗಿಂತಲೂ ಹೆಚ್ಚಿನ ದಾಖಲಾತಿ ಆಗುವುದು ಖಚಿತ ಎಂದು ಅವರು ಹೇಳಿದರು.