ಚೆಂದದ ಬೊಂಬೆ ತಯಾರಿಸಿ ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದ ಸರ್ಕಾರಿ ಶಾಲಾ ವಿದ್ಯಾರ್ಥಿನಿ ಚಂದನಾ
ಮೈಸೂರು, ಫೆಬ್ರವರಿ 11: ಕಲೆ ಎಂಬುದು ಒಬ್ಬರ ಸ್ವತ್ತಲ್ಲ. ಕಲ್ಪನಾ ಲೋಕದ ಬಣ್ಣ ಬಣ್ಣದ ಕಲ್ಪನೆಗಳಿಗೆ ರೂಪ ನೀಡುವ ಕಲೆ. ಆಸಕ್ತರ ಸೃಜನಶೀಲತೆಯ ಮೂಸೆಯಲ್ಲಿ ಅರಳುವ ಸುಂದರವಾದ ಹೂವು. ಅಂತಹ ವಿಶೇಷವಾದ ಕಲೆಯಲ್ಲಿ ತನ್ನೊಳಗೆ ಅಡಗಿದ್ದ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಿ ರಾಷ್ಟ್ರಮಟ್ಟದ ದೃಶ್ಯ ಕಲೋತ್ಸವದಲ್ಲಿ ಮೈಸೂರು ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಚಂದನಾ ಪ್ರಶಸ್ತಿ ಗಿಟ್ಟಿಸಿಕೊಂಡಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಕಲೆ, ಸಂಶೋಧನೆಗಳನ್ನು ಬೆಂಬಲಿಸುವ ಮತ್ತು ಪ್ರೋತ್ಸಾಹಿಸುವ ಭಾರತ ಸರ್ಕಾರದ ಸಂಸ್ಥೆಯಾದ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತು (ಎನ್.ಸಿ.ಇ.ಆರ್.ಟಿ) ವತಿಯಿಂದ ಬೆಂಗಳೂರಿನ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯಲ್ಲಿ ಜನವರಿ 15 ಮತ್ತು 16ರಂದು ಎರಡು ದಿನಗಳ ಕಾಲ ರಾಷ್ಟ್ರಮಟ್ಟದ ದೃಶ್ಯಕಲೋತ್ಸವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ರಾಷ್ಟ್ರಮಟ್ಟದಲ್ಲಿ ದ್ವಿತೀಯ ಸ್ಥಾನ
ಕೋವಿಡ್-19 ವಿಶ್ವವ್ಯಾಪಿ ಹರಡುತ್ತಿರುವ ಕಾರಣ ಈ ಬಾರಿಯ ಸ್ಪರ್ಧೆಯು ಆನ್ ಲೈನ್ ಮುಖಾಂತರ ವರ್ಚುವಲ್ ಆಗಿ ನಡೆಯಿತು. ಈ ಸ್ಪರ್ಧೆಯಲ್ಲಿ ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 36 ರಾಜ್ಯಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅದರಲ್ಲಿ ಎಚ್.ಡಿ.ಕೋಟೆ ತಾಲ್ಲೂಕಿನ ಜಿ.ಬಿ.ಸರಗೂರು ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಚಂದನಾ ಎ. ಭಾಗವಹಿಸಿ, ವ್ಯರ್ಥ ವಸ್ತುಗಳನ್ನು ಬಳಸಿಕೊಂಡು ಬೊಂಬೆ, ಆಟಿಕೆ ತಯಾರಿಸುವ ಮೂಲಕ ರಾಷ್ಟ್ರಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿರುವುದು ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ.

ಸೋರೆಕಾಯಿ ಬೊಂಬೆಗೆ ಜೀವಕೊಟ್ಟ ಕಲೆಗಾತಿ
ನಮ್ಮ ಸುತ್ತಮುತ್ತ ಪ್ರಕೃತಿದತ್ತವಾಗಿ ದೊರಕುವ ಉಪಯೋಗಕ್ಕೆ ಬಾರದ ಅನೇಕ ವಸ್ತುಗಳನ್ನು ನಾವು ತ್ಯಾಜ್ಯಗಳೆಂದೆ ಪರಿಗಣಿಸುತ್ತೇವೆ. ಆದರೆ ಅವುಗಳನ್ನೆ ಬಳಸಿಕೊಂಡು ಅದಕ್ಕೊಂದು ಜೀವ ನೀಡಿದ ಕಲೆಗಾತಿಯೇ ಈ ವಿದ್ಯಾರ್ಥಿನಿ ಚಂದನಾ ಎ. ಇವರು ಕಹಿಸೋರೆಯನ್ನು ಬಳಸಿಕೊಂಡು ಬೊಂಬೆ ಹಾಗೂ ಆಟಿಕೆ ತಯಾರಿಸುತ್ತಿದ್ದ ಪರಿಗೆ ದೆಹಲಿಯಿಂದ ವೀಕ್ಷಿಸುತ್ತಿದ್ದ ತೀರ್ಪುಗಾರರು ಆಶ್ಚರ್ಯ ಸೂಚಿಸಿದ್ದಾರೆ. ಅಚಲವಾದ ಪ್ರಯತ್ನ, ಪ್ರತಿಭೆಯಿಂದ ಈ ಕಲಾ ವಿದ್ಯಾರ್ಥಿಯ ಕುಂಚದಲ್ಲಿ ಅರಳಿದ ಕಲಾಕೃತಿಗಳು ಕಲಾಪ್ರಿಯರ ಮೆಚ್ಚುಗೆಗೆ ಪಾತ್ರವಾಗಿವೆ.

ಆಕರ್ಷಕ ಬೊಂಬೆಯಾಗಿ ಜೀವ ತುಂಬಲಾಗಿದೆ
ವಿಶ್ವದಾದ್ಯಂತ ಚನ್ನಪಟ್ಟಣ ಬೊಂಬೆಗಳು ಪ್ರಸಿದ್ಧಿ ಪಡೆದಿವೆ. ಸಾಮಾನ್ಯವಾಗಿ ಚನ್ನಪಟ್ಟಣದಲ್ಲಿ ಬೊಂಬೆಗಳು ಹಾಗೂ ಆಟಿಕೆಗಳನ್ನು ಮರದಿಂದ ತಯಾರಿಸಲಾಗುತ್ತದೆ. ಆದರೆ ಈ ವಿದ್ಯಾರ್ಥಿನಿಯು ತನ್ನ ಮನೆಯ ಸುತ್ತಲೂ ಸಂಗ್ರಹಿಸಿದ ಸೋರೆಕಾಯಿಗಳಿಂದ ತಯಾರಿಸಿದ ಬೊಂಬೆಗಳು, ಆಟಿಕೆಗಳು ವಿಶೇಷ ಆಕರ್ಷಣೆಗೆ ಪಾತ್ರವಾಗಿವೆ. ಈ ವಿದ್ಯಾರ್ಥಿನಿಯು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಆರು ವಿಧವಾದ ಆಟಿಕೆ ತಯಾರಿಸಿದ್ದು, ಎಲ್ಲಾ ಬೊಂಬೆಗಳಿಗೆ ಸೋರೆಕಾಯನ್ನೇ ಬಳಕೆ ಮಾಡಲಾಗಿದೆ. ಅಜ್ಜ, ಅಜ್ಜಿ, ಬ್ಯಾಲೆನ್ಸಿಂಗ್ ಡಾಲ್, ಕೋಳಿ, ಗೂಬೆ, ಜಿರಾಫೆಯಂತಹ ಆಟಿಕೆಯನ್ನು ಸೋರೆಕಾಯಿಂದ ವಿನ್ಯಾಸಗೊಳಿಸಿ ಆಕರ್ಷಕ ಬೊಂಬೆಯಾಗಿ ಜೀವ ತುಂಬಲಾಗಿದೆ. ಈ ಆರು ಬೊಂಬೆಗಳು ವಿದ್ಯಾರ್ಥಿನಿ ಚಂದನಾ ಅವರ ಪ್ರಶಸ್ತಿಗೆ ಕಾರಣವಾಗಿದ್ದು, 20 ಸಾವಿರ ನಗದು ಬಹುಮಾನ, ಒಂದು ಮೇಡಲ್ ಹಾಗೂ ಟ್ರೋಫಿಯನ್ನು ತಂದು ಕೊಟ್ಟಿವೆ. ಬೊಂಬೆ ತಯಾರಿಸುವ ಎಲ್ಲಾ ವಿಧಾನವನ್ನು ಸೂಕ್ಷ್ಮವಾಗಿ ಪರಿಶೀಲಸಿ, ಪ್ರತಿಯೊಂದಕ್ಕೂ ವಿವರಣೆ ಪಡೆದು ಪ್ರಶಸ್ತಿಯನ್ನು ನೀಡಲಾಗಿದೆ.

ಗ್ರಾಮೀಣ ಪ್ರದೇಶದ ಮಕ್ಕಳು ರಾಷ್ಟ್ರಮಟ್ಟದಲ್ಲಿ
ಈ ಬಗ್ಗೆ ಶಾಲೆಯ ಚಿತ್ರಕಲಾ ಶಿಕ್ಷಕಿ ಸಂಗೀತ ಕೆ. ಅವರು ಮಾತನಾಡಿ, ಕಳೆದ 2015 ರಿಂದಲೂ ಈ ಸ್ಪರ್ಧೆಯಲ್ಲಿ ಶಾಲೆಯ ವತಿಯಿಂದ ಭಾಗವಹಿಸಲಾಗುತ್ತಿದೆ. ಆದರೆ ಈ ಬಾರಿ ತುಂಬಾ ಶ್ರಮವಹಿಸಿದ್ದು, ವಿದ್ಯಾರ್ಥಿನಿಯ ಗ್ರಾಮದಲ್ಲಿ ವಿದ್ಯುತ್ ಹಾಗೂ ಇನ್ನಿತರ ಸಮಸ್ಯೆ ಇದ್ದಿದ್ದರಿಂದ ನಮ್ಮ ಮನೆಗೆ ಕರೆಹಿಸಿಕೊಂಡು, ಸ್ವಂತ ಖರ್ಚಿನಲ್ಲಿ ಅಗತ್ಯವಿರುವ ಸಾಮಾಗ್ರಿಗಳನ್ನು ಕೊಡಿಸಿದೆ. ಇದಕ್ಕೆ ಪೂರಕವಾಗಿ ಶಾಲೆಯ ವಾತಾವರಣವು ಚೆನ್ನಾಗಿದೆ. ನಮ್ಮ ಕ್ಷೇತ್ರ ಶಿಕ್ಷಣಾಧಿಕಾರಿ ರೇವಣ್ಣ, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲೆಯ ಮುಖ್ಯೋಪಾಧ್ಯಯರು ಹಾಗೂ ಸಹೋದ್ಯೋಗಿಗಳ ಬೆಂಬಲದಿಂದ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಸಿಕ್ಕಿದೆ ಎಂದು ಅವರು ಮಾಹಿತಿ ನೀಡಿದರು. ಈ ಬಗ್ಗೆ ಮಾತನಾಡಿದ ಶಾಲೆಯ ಚಿತ್ರಕಲಾ ಶಿಕ್ಷಕಿ ಸಂಗೀತಾ, ಗ್ರಾಮೀಣ ಪ್ರದೇಶದ ಮಕ್ಕಳು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವುದು ಹೆಮ್ಮೆಯ ಸಂಗತಿ. ಹಳ್ಳಿಯ ಮಕ್ಕಳು, ಅದರಲ್ಲೂ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಪ್ರತಿಭೆಯನ್ನು ಎಲ್ಲರೂ ಪ್ರೋತ್ಸಾಹಿಸಿ, ಮಕ್ಕಳಲ್ಲಿರುವ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಬೇಕಿದೆ ಎಂದರು.

ನನ್ನನ್ನು ಸ್ವಾವಲಂಬಿಯನ್ನಾಗಿಸಿದೆ
ಚಂದನಾ ಮಾತನಾಡಿ, ನಾನು ತಯಾರಿಸುವ ಬೊಂಬೆಗಳ ಹಾಗೂ ಆಟಿಕೆಗಳು ಪರಿಸರ ಸ್ನೇಹಿ ಮತ್ತು ಮರುಬಳಕೆಯ ಉತ್ಪನ್ನವಾಗಿರುವುದರ ಜೊತೆಗೆ, ಇದು ನನ್ನನ್ನು ಸ್ವಾವಲಂಬಿಯನ್ನಾಗಿಸಿದೆ. ಇಂತಹ ವಿಶಿಷ್ಟವಾದ ಮತ್ತು ಸ್ಥಳೀಯ ಕಲಾ ಪ್ರಕಾರಗಳು ಅಳಿದುಹೋಗದಂತೆ ಉತ್ತೇಜಿಸಲು ಮತ್ತು ಸಂರಕ್ಷಿಸಲು ಪ್ರಯತ್ನಿಸಿದ್ದೇನೆ. ಮಾರ್ಗದರ್ಶನ ನೀಡಿದ ನಮ್ಮ ಶಿಕ್ಷಕಿ ಸಂಗೀತಾ ಕೆ. ಹಾಗೂ ಪ್ರೋತ್ಸಾಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications