ಅರಮನೆಯ ಸೌಂದರ್ಯಕ್ಕೆ ಮಾರುಹೋದ ರಾಜ್ಯಪಾಲ ವಜುಭಾಯಿ ವಾಲಾ
ಮೈಸೂರು, ಸೆಪ್ಟೆಂಬರ್.6: ದೇಶದ ಅದ್ಭುತಗಳಲ್ಲಿ ಒಂದಾಗಿರುವ ದೇಶ-ವಿದೇಶಗಳ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಆಕರ್ಷಿಸುವ ಸಾಂಸ್ಕೃತಿಕ ನಗರಿಯ ಹಿರಿಮೆ ಐತಿಹಾಸಿಕ ಮೈಸೂರು ಅರಮನೆಗೆ ರಾಜ್ಯಪಾಲ ವಜುಭಾಯಿ ರುಢಾಬಾಯಿ ವಾಲಾ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿದರು.
ಇಂಡೋ ಸಾರ್ಸ್ ನಿಕ್ ಶೈಲಿಯಲ್ಲಿ ನಿರ್ಮಿಸಿರುವ ಶತಮಾನ ಪೂರೈಸಿರುವ ಅಂಬಾವಿಲಾಸ ಅರಮನೆಯ ವಿನ್ಯಾಸ, ಸೌಂದರ್ಯವನ್ನು ವೀಕ್ಷಿಸಿದ ಅವರು, ಅರಮನೆಯೊಳಗಿನ ಕಲ್ಯಾಣ ಮಂಟಪ, ದರ್ಬಾರ, ಸಭಾಂಗಣದಲ್ಲಿನ ಕಲಾತ್ಮಕತೆ, ವಾಸ್ತುಶಿಲ್ಪ, ಪೇಂಟಿಂಗ್ಸ್ ನೋಡಿ ಮನಸೋತರು.
ಕರ್ನಾಟಕದ ರಾಜ್ಯಪಾಲರಾಗಿ ಸುಮಾರು 4 ವರ್ಷಗಳ ಹಿಂದೆ ನೇಮಕಗೊಂಡಿರುವ ಅವರು ಮೈಸೂರು ನಗರಕ್ಕೆ ಹಲವಾರು ಬಾರಿ ಭೇಟಿ ನೀಡಿದ್ದರೂ ಅರಮನೆಯನ್ನು ವೀಕ್ಷಿಸಿರಲಿಲ್ಲವಂತೆ.

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪಂಜಿನ ಕವಾಯಿತು ಮೆರವಣಿಗೆಯ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಗೌರವ ರಕ್ಷೆ ಸ್ವೀಕರಿಸುತ್ತಿದ್ದರೂ ಒಮ್ಮೆಯೂ ಅರಮನೆ ನೋಡಿರಲಿಲ್ಲವಂತೆ.
ಅರಮನೆಗೆ ಆಗಮಿಸಿದ ರಾಜ್ಯಪಾಲ ವಾಜುಬಾಯಿ ರುಢಾಬಾಯಿ ವಾಲಾ ಅವರನ್ನು ಅರಮನೆ ಮಂಡಳಿ ಪರವಾಗಿ ಉಪನಿರ್ದೇಶಕ ಟಿ.ಎಸ್. ಸುಬ್ರಮಣ್ಯ ಅವರು ಸ್ವಾಗತಿಸಿದರು. ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಮೈಸೂರು ಮಲ್ಲಿಗೆ ಹಾರ ಹಾಕಿ ಗೌರವಿಸಿದರು.
ಅರಮನೆಯ ಸೌಂದರ್ಯಕ್ಕೆ ಮನಸೋತ ರಾಜ್ಯಪಾಲರು ದಸರಾ ಆರಂಭವಾದ ಮೇಲೆ ಒಂದು ದಿನ ಅರಮನೆಗೆ ಆಗಮಿಸಿ ಚಿನ್ನದ ಸಿಂಹಾಸನ ವೀಕ್ಷಿಸುವ ಇಚ್ಛೆಯನ್ನೂ ವ್ಯಕ್ತಪಡಿಸಿದರು. ಈ ಸಂಬಂಧ ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರ ಗಮನಕ್ಕೂ ತರುವಂತೆ ಸೂಚಿಸಿದರು .
ಇದೇ ವೇಳೆ ರಾಜ್ಯಪಾಲರಿಗೆ ಅರಮನೆಯ ಇತಿಹಾಸ, ದಸರಾ ಹಿನ್ನೆಲೆ, ಕಾರ್ಯಕ್ರಮಗಳ ಮಾಹಿತಿಯನ್ನು ನೀಡಿದ್ದಾಗಿ ಸುಬ್ರಮಣ್ಯ ತಿಳಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications