ಕಿಡಿಗೇಡಿಗಳಿಗೆ ಅಡ್ಡೆಯಾಯ್ತು ನವಿಲೂರ ವಸತಿಗೃಹ
ಮೈಸೂರು, ಜನವರಿ 20: ಪಿರಿಯಾಪಟ್ಟಣ ತಾಲೂಕು ನಂದಿನಾಥಪುರ ಗ್ರಾಮದ ಆರೋಗ್ಯ ಕೇಂದ್ರ ವ್ಯಾಪ್ತಿಗೆ ಬರುವ ನವಿಲೂರು ಗ್ರಾಮದಲ್ಲಿ ಆರೋಗ್ಯ ಸಹಾಯಕಿಯರಿಗಾಗಿ ನಿರ್ಮಿಸಿರುವ ವಸತಿಗೃಹಗಳನ್ನು ಸಂಬಂಧಿಸಿದ ಇಲಾಖೆಗೆ ವಹಿಸದೇ ಇರುವ ಕಾರಣ ಕಿಡಿಗೇಡಿಗಳ, ಪುಂಡು ಪೋಕರಿಗಳ ಪಾಲಾಗುತ್ತಿದೆ.
ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರ ಮತ್ತು ಆರೋಗ್ಯ ಕಾಪಾಡುವ ಸಲುವಾಗಿ ಸರ್ಕಾರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆದಿದ್ದು ಇಲ್ಲಿ ಕಾರ್ಯನಿರ್ವಹಿಸುವ ಆರೋಗ್ಯ ಸಹಾಯಕಿಯರಿಗೆ ಅನುಕೂಲವಾಗುವಂತೆ ವಸತಿಗೃಹಗಳನ್ನು ನಿರ್ಮಿಸಲಾಗಿದೆ. ಅದರಂತೆ ನವಿಲೂರು ಗ್ರಾಮದಲ್ಲಿ ನಿರ್ಮಿಸಲಾಗಿದೆ. ಆದರೆ ಇಲ್ಲಿ ಕಿಡಿಗೇಡಿಗಳ ಹಾವಳಿ ಹೆಚ್ಚಾಗಿದ್ದು, ವಸತಿಗೃಹಕ್ಕೆ ಕಲ್ಲು ಹೊಡೆಯುವುದು, ಕಿಟಿಕಿ ಬಾಗಿಲು ಮುರಿಯುವುದು ಮುಂತಾದ ಕೃತ್ಯಗಳನ್ನು ಮಾಡುತ್ತಿದ್ದಾರೆ. ಅಲ್ಲದೆ ಮೂಲಸೌಲಭ್ಯ ಮತ್ತು ಭದ್ರತೆಯಿಲ್ಲದ ಕಾರಣ ಈ ವಸತಿಗೃಹಗಳಿಗೆ ಸಹಾಯಕಿಯರು ಬಂದಿಲ್ಲ ಎನ್ನಲಾಗಿದೆ.[ಮಲೆನಾಡಿನ ಆತಿಥ್ಯ, ಮನ ಮೆಚ್ಚುವ ಪರಿಸರಕ್ಕೆ 'ಅಮ್ತಿ ಹೋಂ ಸ್ಟೇ']

ನವಿಲೂರು, ಆಯರಬೀಡು, ಆಲನಹಳ್ಳಿ, ಭೂತನಹಳ್ಳಿ, ಸುತ್ತಮುತ್ತಲ ಗ್ರಾಮದಲ್ಲಿ ಕೂಲಿ ಕಾರ್ಮಿಕರೆ ಹೆಚ್ಚು ವಾಸಿಸುತ್ತಿದ್ದು, ಗರ್ಭಿಣಿ ಸ್ತ್ರೀಯರಿಗೆ ಮತ್ತು ಮಕ್ಕಳಿಗೆ ಆರೋಗ್ಯದ ಅರಿವು ಮೂಡಿಸುವ ಕಾರ್ಯವನ್ನು ಮಹಿಳಾ ಆರೋಗ್ಯ ಸಹಾಯಕಿಯರು ಮಾಡುತ್ತಿದ್ದಾರೆ. ಅವರ ಅನುಕೂಲಕ್ಕೆ ನವಿಲೂರಿನಲ್ಲಿ ಕಳೆದ 15 ವರ್ಷಗಳ ಹಿಂದೆ ವಸತಿ ನಿರ್ಮಿಸಿದ್ದರೂ ಅದು ಉಪಯೋಗಕ್ಕೆ ಬಾರದಂತಾಗಿದೆ. ಆದರೆ ವಸತಿಗೃಹಕ್ಕೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸದ ಕಾರಣ ಯಾರೂ ಕೂಡ ಇದರಲ್ಲಿ ವಾಸ್ತವ್ಯ ಹೂಡಲು ಮುಂದೆ ಬರುತ್ತಿಲ್ಲ. ಇದರಿಂದ ವಸತಿ ಗೃಹದ ಸುತ್ತ ಗಿಡಗಂಟಿ ಬೆಳೆದಿದ್ದು ಪಾಳು ಬಿದ್ದಿವೆ.
ಈಗಿನ ಪರಿಸ್ಥಿತಿಯಲ್ಲಿ ನವಿಲೂರಲ್ಲಿರುವ ವಸತಿ ಗೃಹದಲ್ಲಿ ವಾಸ್ತವ್ಯ ಹೂಡಲು ಯಾವುದೇ ಆರೋಗ್ಯ ಸಹಾಯಕಿಯರಿಗೆ ಧೈರ್ಯ ಬರುತ್ತಿಲ್ಲ. ಜತೆಗೆ ಅವರಿಗೆ ರಕ್ಷಣೆ, ಅಗತ್ಯ ಸೌಲಭ್ಯ ಇಲ್ಲದ ಕಾರಣ ಇಲ್ಲಿ ಜೀವನ ಸಾಗಿಸುವುದು ಕಷ್ಟ ಸಾಧ್ಯವಾಗಿದೆ.ಇನ್ನು ಮುಂದೆಯಾದರೂ ಸಂಬಂಧಿಸಿದವರು ಇತ್ತ ಗಮನಹರಿಸಿ ಈ ವಸತಿಗೃಹಗಳನ್ನು ದುರಸ್ತಿಪಡಿಸಿ ವಾಸ್ತವ್ಯಕ್ಕೆ ಅನುಕೂಲ ಮಾಡಿಕೊಡಬೇಕಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications