ಮೈಸೂರು ಕೋ-ಆಪರೇಟಿವ್ ಬ್ಯಾಂಕ್ ಸೂಪರ್ ಸೀಡ್
ಮೈಸೂರು, ಆಗಸ್ಟ್ 24: 'ದಿ ಮೈಸೂರು ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್'ನ್ನು ಸೂಪರ್ ಸೀಡ್ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಸಹಕಾರ ಸಂಘಗಳ ಸಹಾಯಕ ನಿಬಂಧಕ ರಂಗಸ್ವಾಮಿ, ಬ್ಯಾಂಕ್ ಅಧ್ಯಕ್ಷ ಬಿ.ಕೆ. ಪ್ರಕಾಶ್ ಹಾಗೂ ಎಲ್ಲಾ ನಿರ್ದೇಶಕರು ಹಣಕಾಸು ಅಕ್ರಮ ಮತ್ತು ಅವ್ಯವಹಾರದಲ್ಲಿ ತೊಡಗಿದ್ದಾರೆ. ಬ್ಯಾಂಕ್ ಗೆ ಲಕ್ಷಾಂತರ ರೂಪಾಯಿ ಹಣ ವಂಚಿಸಿದ್ದಾರೆಂದು ಆರೋಪಿಸಿ ಬ್ಯಾಂಕಿನ ನಿವೃತ್ತ ಮ್ಯಾನೇಜರ್ ಈಶ್ವರ್ ಎಂಬುವವರು ಸಹಕಾರ ಇಲಾಖೆಗೆ ದೂರು ನೀಡಿದ್ದರು.

ಎರಡು ವರ್ಷಗಳ ಹಿಂದೆ ನೀಡಿದ ದೂರಿನ ವಿಚಾರಣೆ ನಡೆಸಿದ ಇಲಾಖೆ, ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದೆ.
ಬ್ಯಾಂಕ್ ಅಧ್ಯಕ್ಷ ಬಿಕೆ ಪ್ರಕಾಶ್ ಸೇರಿ 12 ನಿರ್ದೇಶಕರನ್ನು ಸರಕಾರ ವಜಾ ಮಾಡಿದೆ.












Click it and Unblock the Notifications