ಶಿವರಾತ್ರಿ ಪ್ರಯುಕ್ತ 11 ಕೆ.ಜಿ ತೂಕದ ಚಿನ್ನದ ಮುಖವಾಡ ಸಮರ್ಪಣೆ
ಮೈಸೂರು, ಫೆಬ್ರವರಿ 12 : ಸಾಂಸ್ಕೃತಿಕ ನಗರಿ ಮೈಸೂರು ಜನ ಶಿವರಾತ್ರಿಯ ಆಗಮನಕ್ಕೆ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ನಾಳೆ ನಡೆಯುವ ಶಿವನ ಆರಾಧನಾ ಕೈಂಕರ್ಯಕ್ಕೆ ಹಾಗೂ ವಿಶೇಷ ಪೂಜೆಗೆ ಅರಮನೆ ಆವರಣದಲ್ಲಿರುವ ತ್ರಿನೇಶ್ವರ ದೇವಾಲಯಕ್ಕೆ ಜಿಲ್ಲಾಡಳಿತದ ವತಿಯಿಂದ ಚಿನ್ನದ ಕೊಳಗವನ್ನು ಹಸ್ತಾಂತರಿಸಲಾಯಿತು.
ಮೈಸೂರು ಜಿಲ್ಲಾಡಳಿತ ತನ್ನ ಸುಪರ್ದಿಯಲ್ಲಿದ್ದ 11 ಕೆಜಿ ತೂಕದ ಚಿನ್ನದ ಮುಖವಾಡವನ್ನು ಇಂದು ದೇವಾಲಯದ ಅರ್ಚಕರಿಗೆ ನೀಡಿದೆ. ನಾಳೆ ವೈಭವೋಪೇತ ಮಹಾಶಿವರಾತ್ರಿ ನಡೆಯಲಿದ್ದು, ಈ ಪ್ರಯುಕ್ತ ತ್ರಿನೇಶ್ವರ ದೇವಸ್ಥಾನದಲ್ಲಿ ಬರೆದ ಸಿದ್ಧತೆಗೆ ಅಣಿಯಾಗುತ್ತಿದೆ.

ಶಿವಲಿಂಗಕ್ಕೆ ವರ್ಷಕ್ಕೆ ಒಂದೇ ಬಾರಿ ಚಿನ್ನದ ಲೇಪಿತ ಕೊಳಗವನ್ನು ತೋಡಿಸಲಾಗುತ್ತಿದ್ದು, ಸೋಮವಾರ ಬೆಳಗ್ಗೆ ತ್ರಿನೇಶ್ವರ ದೇವಸ್ಥಾನದ ಅರ್ಚಕರಿಗೆ ಚಿನ್ನದ ಲೇಪಿತ ಕೊಳಗವನ್ನು ಕೊಂಡೊಯ್ದು ನೀಡಿದೆ. ಮಂಗಳವಾರ ಬೆಳಗ್ಗೆ ಅದಕ್ಕೆ ಧಾರ್ಮಿಕ ವಿಧಿವಿಧಾನಗಳು ನಡೆಯಲಿದ್ದು, ಜಿಲ್ಲಾಡಳಿತ ದೇವಾಲಯಕ್ಕೆ ಭೇಟಿ ನೀಡಿ ದೇವರ ಕೊಳಗವನ್ನು ದೇವಾಲಯದ ಅರ್ಚಕರಿಗೆ ಹಸ್ತಾಂತರಿಸಿದೆ.

ಕೊಳಗದ ಹಿನ್ನೆಲೆ
ಶಿವನ ಮುಖವಾಡವನ್ನು ಹೋಲುವ ಈ ಕೊಳಗ ಜಯಚಾಮರಾಜೇಂದ್ರ ಒಡೆಯರ್ ಅವರು ತಮ್ಮ ಪುತ್ರ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಹುಟ್ಟಿದ ಸಂದರ್ಭದಲ್ಲಿ ದೇವಾಲಯಕ್ಕೆ ಉಡುಗೊರೆಯಾಗಿ ನೀಡಿದ್ದರು. ಅಂದಿನಿಂದ ಪ್ರತಿ ಶಿವರಾತ್ರಿಯಂದು ಈ ಕೊಳಗವನ್ನು ಶಿವನ ಮೂರ್ತಿಗೆ ತೊಡಿಸಿ ಪೂಜೆಗೈಯಲಾಗುತ್ತದೆ.

ಇತ್ತ 101 ಶಿವ ಮೂರ್ತಿಗೂ ಪೂಜೆ
ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿದ 4ನೇ ವಾರ್ಡ್ ನ ರಾಮಾನುಜ ರಸ್ತೆಯಲ್ಲಿರುವ ಗುರುಕುಲ ಟ್ರಸ್ಟ್ ನ 101 ಶಿವಲಿಂಗಗಳನ್ನು ಶಿವರಾತ್ರಿ ಪ್ರಯುಕ್ತ ಶುಚಿಗೊಳಿಸಲಾಯಿತು. ಶಿವರಾತ್ರಿ ಪ್ರಯುಕ್ತ ಎಲ್ಲೆಲ್ಲೂ ಸಡಗರ ಸಂಭ್ರಮಗಳು ಮನೆ ಮಾಡಿದ್ದು, ಶಿವ ದೇವಾಲಯ ಮತ್ತು ಶಿವನ ಪ್ರತಿಮೆಗಳಿರುವ ಕಡೆ ವಿಶೇಷ ಗಮನ ವಹಿಸಿ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ. ಮೈಸೂರಿನ ರಾಮಾನುಜ ರಸ್ತೆಯಲ್ಲಿರುವ 101 ಶಿವಲಿಂಗಗಳ ಮೇಲೆ ನೀರು ಹರಿಸಿ ಅವುಗಳ ಮೇಲಿದ್ದ ಧೂಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications