Mysuru: ಮೈಸೂರು ದಸರಾ ಆನೆಗಳಿಗೆ ಅದ್ದೂರಿ ಬೀಳ್ಕೊಡುಗೆ
ಮೈಸೂರು ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಗಜಪಡೆಗೆ ಅರಮನೆ ಆವರಣದಿಂದ ಅದ್ಧೂರಿಯಾಗಿ ಬೀಳ್ಕೊಡಲಾಯಿತು. ಬೀಳ್ಕೊಡುಗೆ ದಿನ ಗಜಪಡೆ ವೀಕ್ಷಿಸಲು ಪ್ರವಾಸಿಗರ ತಂಡ ಕೂಡ ಜಮಾಯಿಸಿತ್ತು. ಸೋಮವಾರ ಬೆಳಗ್ಗೆಯಿಂದಲೇ ಅಭಿಮನ್ಯು ಸೇರಿದಂತೆ ದಸರಾ ಆನೆಗಳನ್ನು ವೀಕ್ಷಿಸಲು ಸಾಕಷ್ಟು ಜನರು ಆಗಮಿಸಿದ್ದರು. ಕೆಲವರು ಆನೆಯ ಬಳಿ ನಿಂತು ಫೋಟೊ ತೆಗೆಸಿಕೊಂಡರು. ಬಳಿಕ ಆನೆಗಳಿಗೆ ಸ್ನಾನ ಮಾಡಿಸುವುದನ್ನು ನೋಡಿ ಸಂಭ್ರಮಿಸಿದರು.
ದಸರಾದಲ್ಲಿ ಭಾಗವಹಿಸಿದ್ದ 14 ಆನೆಗಳಿಗೆ ಪುರೋಹಿತ ಪ್ರಹ್ಲಾದರಾವ್ ನೇತೃತ್ವದಲ್ಲಿ ಅರಮನೆ ಮಂಡಳಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿದರು. ನಂತರ ಬೂದುಗುಂಬಳ ಒಡೆದು ದೃಷ್ಟಿ ತೆಗೆದು ಆನೆಗಳಿಗೆ ನಾನಾ ಹಣ್ಣು ಹಂಪಲು ಹಾಗೂ ಬೆಲ್ಲ ನೀಡಲಾಯಿತು. ಪೂಜೆ ಬಳಿಕ ಮಾವುತರು ಹಾಗೂ ಕಾವಾಡಿಗರ ಕುಟುಂಬ ವರ್ಗದವರಿಗೆ ಉಪಾಹಾರ ನೀಡಿ ಆನೆಗಳೊಂದಿಗೆ ಅವರನ್ನು ಬೀಳ್ಕೊಡಲಾಯಿತು.

ಮೊದಲ ತಂಡದಲ್ಲಿ ಮತ್ತಿಗೋಡು ಆನೆ ಶಿಬಿರದ ಕ್ಯಾಪ್ಟನ್ ಅಭಿಮನ್ಯು, ಭೀಮ, ಏಕಲವ್ಯ, ರಾಂಪುರ ಆನೆ ಶಿಬಿರದ ರೋಹಿತ್, ದೊಡ್ಡಹರವೆ ಆನೆ ಶಿಬಿರದ ಲಕ್ಷ್ಮೀ, ವರಲಕ್ಷ್ಮೀ, ಕೊಡಗು ಜಿಲ್ಲೆಯ ದುಬಾರೆ ಶಿಬಿರದ ಧನಂಜಯ, ಗೋಪಿ, ಕಂಜನ್ ಅರಮನೆಗೆ ಬಂದಿದ್ದವು. ಎರಡನೇ ತಂಡದಲ್ಲಿ ಕೊಡಗು ಜಿಲ್ಲೆಯ ದುಬಾರೆ ಆನೆ ಶಿಬಿರದಿಂದ ಗಂಡಾನೆಗಳಾದ ಪ್ರಶಾಂತ, ಸುಗ್ರೀವ, ಮತ್ತಿಗೋಡು ಆನೆ ಶಿಬಿರದ ಮಹೇಂದ್ರ, ರಾಮಪುರ ಆನೆ ಶಿಬಿರದ ಹೆಣ್ಣಾನೆ ಹಿರಣ್ಯಾ, ಲಕ್ಷ್ಮೀ ಆನೆ ಆಗಮಿಸಿದ್ದವು.
"ಅಭಿಮನ್ಯು ಅಂಬಾರಿ ಹೊತ್ತು ಜಂಬೂ ಸವಾರಿ ಯಶಸ್ಸುಗೊಳಿಸಿದ್ದು, ಎಲ್ಲಾ ಆನೆಗಳೂ ಅತ್ಯುತ್ತಮವಾಗಿ ಸ್ಪಂದಿಸಿವೆ. ಅರ್ಜುನನ ಅನುಪಸ್ಥಿತಿ ಕಾಡದಂತೆ ಧನಂಜಯ ತನ್ನ ಕಾರ್ಯ ನಿಭಾಯಿಸಿದ್ದಾನೆ. ಧನಂಜಯ, ಮಹೇಂದ್ರನನ್ನು ಅಂಬಾರಿ ಆನೆಯಾಗಿ ಗುರುತಿಸಿದ್ದು, ಮುಂದಿನ ದಿನಗಳಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು" ಎಂದು ಸಿಎಫ್ ಮಾಲತಿಪ್ರಿಯಾ ತಿಳಿಸಿದ್ದಾರೆ.
ಅದ್ದೂರಿ ದಸರಾ ಸಂಪನ್ನ
ರಾಜ್ಯದಲ್ಲಿ ಉತ್ತಮ ಮಳೆಯಾದ ಪರಿಣಾಮ ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆ ಮಾಡಲಾಗಿದೆ. ದಸರಾ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಯುವ ದಸರಾ, ಯುವ ಸಂಭ್ರಮ, ರೈತ ದಸರಾ, ಮಕ್ಕಳ ದಸರಾ ಸಾಕಷ್ಟು ಗಮನ ಸೆಳೆದವು. ಮೈಸೂರನ್ನು ಜಗಮಗಿಸುವ ವಿದ್ಯುತ್ ದೀಪಾಲಂಕಾರಗಳಿಂದ ಸಿಂಗರಿಸಲಾಗಿತ್ತು, ದೀಪಾಲಂಕಾರ ನೋಡಿ ಸಿಎಂ ಸಿದ್ದರಾಮಯ್ಯನವರೇ ಮೆಚ್ಚಿಕೊಂಡಿದ್ದರು. ಈ ಬಾರಿ ವಿಶೇಷವಾಗಿ ಡ್ರೋನ್ ಶೋ ಕೂಡ ಆಯೋಜನೆ ಮಾಡಿದ್ದು, ದಸರಾ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿತ್ತು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications