ಮೈಸೂರಿನಲ್ಲಿ ಡಿಕೆಶಿಗೆ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ
ಮೈಸೂರು, ನವೆಂಬರ್ 7: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮೈಸೂರಿಗೆ ತಮ್ಮ ಬೆಂಬಲಿಗರ ಜತೆ ಇಂದು ಮಧ್ಯಾಹ್ನ ರೈಲಿನಲ್ಲಿ ಬಂದಿಳಿದಿದ್ದು, ಮೈಸೂರಿನಲ್ಲಿ ಅವರ ಅಭಿಮಾನಿಗಳು, ಬೆಂಬಲಿಗರು ಭವ್ಯ ಸ್ವಾಗತ ನೀಡಿದರು.
ಡಿಕೆಶಿ 2 ದಿನ ಮೈಸೂರು, ಮಂಡ್ಯದಲ್ಲಿ ಟೆಂಪಲ್ ರನ್: ಟಿಪ್ಪು ಮಸೀದಿಗೂ ಭೇಟಿ
ದೇವಾಲಯಗಳ ಭೇಟಿಗಾಗಿ ಅವರು 2ನೇ ಬಾರಿಗೆ ಮೈಸೂರಿಗೆ ಬಂದಿದ್ದು, ಮೈಸೂರಿನ ಚಾಮುಂಡೇಶ್ವರಿ ಬೆಟ್ಟ, ಸುತ್ತೂರು ಮಠ, ನಂಜನಗೂಡು ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಲು ಮೈಸೂರಿಗೆ ರೈಲಿನಲ್ಲಿ ಆಗಮಿಸಿದರು. ರೈಲಿನಲ್ಲಿ ಮೈಸೂರಿಗೆ ಬಂದಿಳಿಯುತ್ತಿದ್ದಂತೆಯೇ ಅವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಅವರಿಗೆ ಸೇಬಿನ ಹಾರ ಹಾಕುವ ಮೂಲಕ ಭವ್ಯ ಸ್ವಾಗತ ನೀಡಿದರು. ಬಳಿಕ ತೆರೆದ ವಾಹನದಲ್ಲಿ ಕರೆ ತಂದರು. ಈ ವೇಳೆ ಎಲ್ಲ ಅಭಿಮಾನಿಗಳತ್ತ ಡಿ.ಕೆ.ಶಿವಕುಮಾರ್ ಕೈಬೀಸುತ್ತ, ಕೈಮುಗಿಯುತ್ತ ಬರುತ್ತಿರುವುದು ಕಂಡು ಬಂತು.
ಡಿ. ಕೆ. ಶಿವಕುಮಾರ್ ಭೇಟಿಯಾದ ಬಿಜೆಪಿ ನಾಯಕ ಎಸ್. ಎಂ. ಕೃಷ್ಣ
ಹುಣಸೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಂಜು, ಕಿಸಾನ್ ಘಟಕದ ಸದಸ್ಯರು ಡಿಕೆಶಿಗೆ ಸಾಥ್ ನೀಡಿದರು. ಈ ವೇಳೆ ಮಾಜಿ ಸಂಸದ ಆರ್.ಧ್ರುವನಾರಾಯಣ್, ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಶಾಸಕ ತನ್ವೀರ್ ಸೇಠ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.