ಮದುವೆಗೆ ಒಂದು ದಿನ ಮುಂಚೆ ಪ್ರೇಯಸಿಯೊಂದಿಗೆ ವರ ಪರಾರಿ; ನಿಂತ ಮದುವೆ
ಮೈಸೂರು, ಡಿಸೆಂಬರ್ 9: ಇತ್ತೀಚೆಗೆ ವಧು ಅಥವಾ ವರ ಮದುವೆಗೆ ಮುನ್ನವೇ ಪರಾರಿ ಆಗುವುದು ಮಾಮೂಲಿ ಆಗಿ ಬಿಟ್ಟಿದೆ. ಈಗ ಮೈಸೂರಿನ ವರ ಮಹಾಶಯನೋರ್ವ, ಮದುವೆಯ ಮುನ್ನಾ ದಿನ ವಧುವಿಗೆ ಕೈಕೊಟ್ಟು ಪ್ರೇಯಸಿಯ ಜೊತೆ ಪರಾರಿಯಾದ ಘಟನೆ ನಡೆದಿದೆ.
ಮೈಸೂರಿನ ಕೆ.ಆರ್.ಮೊಹಲ್ಲಾದ ಒಂದನೇ ಕ್ರಾಸ್ ನ ನಿವಾಸಿ ಈಶ್ವರ್ ಮತ್ತು ವರಲಕ್ಷ್ಮಿ ದಂಪತಿಯ ಪುತ್ರಿ ಸಿಂಚನ ಅವರ ವಿವಾಹವು ಕೆ.ಆರ್.ಮೊಹಲ್ಲಾದ ಸುಣ್ಣದ ಕೇರಿ 4ನೇ ಕ್ರಾಸ್ ನಿವಾಸಿ ತಾಂಡೇಶ್ ಮತ್ತು ಮೀನಾ ದಂಪತಿಯ ಪುತ್ರ ಉಮೇಶ್ ಟಿ.ಎಂಬಾತನೊಂದಿಗೆ ವಿವಾಹ ನಿಶ್ಚಯವಾಗಿತ್ತು.
ಮಂಗಳವಾರ ಸಂಜೆ 7 ಗಂಟೆಗೆ ನಾರಾಯಣ ಶಾಸ್ತ್ರೀ ರಸ್ತೆಯಲ್ಲಿರುವ ಶ್ರೀಮಹದೇಶ್ವರ ದೇವಸ್ಥಾನದ ನಾಯಕರ ಸಮುದಾಯ ಭವನದಲ್ಲಿ ಆರತಕ್ಷತೆ ಇತ್ತು. ಬುಧವಾರ ಮಧ್ಯಾಹ್ನ 1.45 ರಿಂದ 2.15 ರವರೆಗೆ ಧಾರಾ ಮುಹೂರ್ತವಿತ್ತು. ಆದರೆ ಮಂಗಳವಾರ ಬೆಳ್ಳಂಬೆಳಿಗ್ಗೆಯೇ ವರ ಮಹಾಶಯ, ತನ್ನ ಪ್ರೇಯಸಿಯೊಂದಿಗೆ ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಆರತಕ್ಷತೆ ರದ್ದಾಗಿದೆ.

ಈಗ ವಧುವಿನ ಕುಟುಂಬಸ್ಥರು ಕಂಗಾಲಾಗಿ ಕುಳಿತಿದ್ದಾರೆ. ಮದುವೆಗೆಂದು ದೂರದ ಊರುಗಳಿಂದ ನೆಂಟರಿಷ್ಟರು ಆಗಮಿಸಿದ್ದು, ಅವರಿಗೆ ಮುಖ ತೋರಿಸುವುದು ಹೇಗೆ ಎಂದು ವರನ ಪೋಷಕರು ಅಲವತ್ತುಕೊಂಡರೆ, ವಧುವಿನ ಪೋಷಕರು ಮಗಳ ವಿವಾಹ ನಿಂತಿದ್ದಕ್ಕೆ ಕೆ.ಆರ್ ಪೊಲೀಸ್ ಠಾಣೆಯಲ್ಲಿ ವರ ಉಮೇಶ್ ವಿರುದ್ಧ ದೂರು ದಾಖಲಿಸಿದ್ದಾರೆ.

ವಧು-ವರರು ತಮ್ಮ ಇಷ್ಟವನ್ನು ಮೊದಲೇ ತಿಳಿಸಿಬಿಟ್ಟರೆ ಎರಡೂ ಕುಟುಂಬಗಳ ಸಹಸ್ರಾರು ರುಪಾಯಿ ಮದುವೆ ವೆಚ್ಚ, ಉತ್ಸಾಹ ವ್ಯರ್ಥ, ನೆಂಟರುಗಳು, ಸಂಬಂಧಿಕರು ಕೆಲಸ ಕಾರ್ಯ ಬಿಟ್ಟು ಮದುವೆಗೆ ಆಗಮಿಸುವ ವೆಚ್ಚ ಎಲ್ಲವೂ ಉಳಿಯುತ್ತದೆ. ಇಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications