ಆಗಸ್ಟ್ ಅಂತ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ ಎಂದ ಸಿಎಂ ಸಿದ್ದರಾಮಯ್ಯ
ಮೈಸೂರು, ಆಗಸ್ಟ್, 12: ಗೃಹಲಕ್ಷ್ಮೀ ಯೋಜನೆಗೆ ಈವರೆಗೆ 1.6 ಕೋಟಿ ಜನ ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿ ಕಾರ್ಯಕ್ಕೆ ಯಾವುದೇ ಸಮಯ ನಿಗದಿ ಇಲ್ಲ. ಈ ತಿಂಗಳಲ್ಲಿ ನೋಂದಣಿ ಮಾಡಿಸುವವರ ಸಂಖ್ಯೆ ಹೆಚ್ಚಬಹುದು. ಈ ತಿಂಗಳ ಅಂತ್ಯಕ್ಕೆ ಯೋಜನೆ ಜಾರಿಗೆ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 40% ಕಮಿಷನ್ ಬಗ್ಗೆ ತನಿಖೆಯಾಗದೇ ಬಿಲ್ ಬಿಡುಗಡೆ ಮಾಡಲು ಹೇಗೆ ಸಾಧ್ಯ? ಇದೀಗ ತನಿಖೆ ಪ್ರಗತಿಯಲ್ಲಿದೆ. ತಪ್ಪು ಮಾಡದೇ ಇರುವವರಿಗೆ ಬಿಲ್ನಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ. ತಪ್ಪು ಮಾಡಿರುವವರಿಗೆ ಆ ಬಗ್ಗೆ ಭಯ ಇರುತ್ತದೆ. ಬಿಜೆಪಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಬಿಜೆಪಿಯವರಿಗೆ ಏನು ವಿಚಾರ ಇಲ್ಲದೇ ಇರುವುದರಿಂದ ಈ ಬಗ್ಗೆ ಹೋರಾಟ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂದರು.

40% ಕಮಿಷನ್ನಿಂದಾಗಿಯೇ ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಅಂದು ನಾವು ಮಾಡಿರುವ ಆರೋಪವನ್ನು ಈಗ ಸಾಬೀತು ಮಾಡಬೇಕಿದೆ. ಇದೇ ಕಾರಣದಿಂದ ನಾಲ್ಕು ಟೀಂ ತನಿಖೆ ಮಾಡುತ್ತಿವೆ. ನಡೆದಿರುವ ಕಾಮಗಾರಿಗಳೆಲ್ಲಾ ಮೂರು ವರ್ಷದ ಹಿಂದೆ ಮುಕ್ತಾಯವಾಗಿವೆ. ಈಗ ಬಿಲ್ಗಾಗಿ ಆತುರ ಪಟ್ಟರೆ ಹೇಗೆ? ಎಂದು ಪ್ರಶ್ನಿಸಿದರು.
ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿಗಾಗಿ ಒಂದು ಸಮಿತಿ ಮಾಡಿದ್ದೇವೆ. ಶಾಸಕರಿಗೂ ಇದರಲ್ಲಿ ಸ್ಥಾನ ಕೊಡಬೇಕಿದೆ. ಯಾವ ಅನುಪಾತದಲ್ಲಿ ಇದನ್ನು ಹಂಚಿಕೆ ಮಾಡಬೇಕು ಎಂಬ ಬಗ್ಗೆ ಸಮಿತಿ ತೀರ್ಮಾನ ಮಾಡುತ್ತದೆ ಎಂದರು.
ಇನ್ನು ವಾರ್ಡ್ಗಳ ಪುನರ್ ವಿಂಗಡಣೆ ವಿಚಾರದಲ್ಲಿ ನ್ಯಾಯಾಲಯ ಗಡುವು ನೀಡಿದೆ. ಗಡುವಿನೊಳಗೆ ವರದಿಗಳು ಸಿದ್ಧವಾಗಲಿವೆ. ಅದನ್ನು ಕೋರ್ಟ್ಗೆ ನಾವು ನೀಡುತ್ತೇವೆ. ಚುನಾವಣೆ ವಿಚಾರದಲ್ಲಿ ನಾವು ಯಾವುತ್ತೂ ಹಿಂದೆ ಬಿದ್ದಿಲ್ಲ. ಬಿಜೆಪಿಯವರು ಚುನಾವಣೆಗಳನ್ನು ಮುಂದೂಡುತ್ತಿದ್ದರು. ನಾವು ಆ ರೀತಿ ಮಾಡುವುದಿಲ್ಲ. ನ್ಯಾಯಾಲಯದ ನಿರ್ದೇಶನದಂತೆ ನಡೆಯುತ್ತೇವೆ ಎಂದರು.
ನನ್ನ ಹುಟ್ಟುಹಬ್ಬ ಆಗಸ್ಟ್ 3 ಅಲ್ಲ, ಆಗಸ್ಟ್ 12 ಅಲ್ಲ. ಎರಡೂ ಕೂಡ ತಪ್ಪು ದಿನಾಂಕಗಳು. ಒಂದು ನನ್ನ ಮೇಷ್ಟ್ರು ಬರೆಸಿರೋದು. ಇನ್ನೊಂದು ನಮ್ಮ ಅಪ್ಪ ಯಾವುದೋ ಒಂದು ಡೇಟ್ ಬರೆಸಿರೋದು. ಹೀಗಾಗಿ ಎರಡೂ ದಿನಾಂಕಗಳು ತಪ್ಪು. ನನ್ನ ಜನ್ಮ ದಿನಾಂಕ ನನಗೇ ಸರಿಯಾಗಿ ಗೊತ್ತಿಲ್ಲ. ಹೀಗಾಗಿ ನನಗೆ ಯಾವ ಆಸಕ್ತಿಯೂ ಇಲ್ಲ ಎಂದು ಹೇಳಿದರು.
ಸಿಜೆ ಹೊರಗಿಟ್ಟು ಚುನಾವಣಾ ಆಯುಕ್ತರ ನೇಮಕ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಇದೊಂದು ಷಡ್ಯಂತ್ರವಾಗಿದೆ. ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಾಧೀಶರನ್ನು ಹೊರಗಿಟ್ಟು ತಮಗೆ ಬೇಕಾದವರನ್ನು ಚುನಾವಣಾ ಆಯುಕ್ತರನ್ನಾಗಿ ಮಾಡಿಕೊಳ್ಳಲು ಹೊರಟಿದ್ದಾರೆ. ಐಪಿಸಿ ಸೇರಿದಂತೆ ಕೆಲವು ಕಾನೂನುಗಳನ್ನು ತಿದ್ದುಪಡಿ ಮಾಡಲು ಹೊರಟಿದ್ದಾರೆ. ಐಪಿಸಿ 1861ರಲ್ಲಿ ರಚನೆಯಾದ ಕಾನೂನು. ಏನು ಮಾಡುತ್ತಾರೋ ಕಾದುನೋಡೋಣ ಎಂದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ?












Click it and Unblock the Notifications