Gruhalakshmi Scheme: ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಅಂದೇ ಬರುತ್ತೆ ಖಾತೆಗೆ ಹಣ
ರಾಜ್ಯ ಸರಕಾರದ ಐದು ಮಹಾತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ಚಾಲನೆ ನೀಡಲಾಗುತಿದ್ದು, ರಾಜ್ಯದ 1 ಕೋಟಿ 10 ಲಕ್ಷ ಕುಟುಂಬಗಳ ಯಜಮಾನಿಯರ ಖಾತೆಗಳಿಗೆ ತಲಾ 2 ಸಾವಿರ ರೂ ಜಮೆಯಾಗಲಿದೆ. ಇದರಲ್ಲಿ ಮೈಸೂರು ಭಾಗದ 4 ಜಿಲ್ಲೆಗಳ 13,81,430 ಕುಟುಂಬಗಳು ಸೇರಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಭಾನುವಾರ ನಡೆದ ಮೈಸೂರು, ಮಂಡ್ಯ,ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿಗಳ ಹಾಗೂ ಜಿಲ್ಲಾ ಪಂಚಾಯತ್ ಸಿಇಓಗಳ ಸಭೆಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳು,ಉಪಮುಖ್ಯಮಂತ್ರಿಗಳು, ಸಂಪುಟದ ಸದಸ್ಯರು ಹಾಗೂ ದೆಹಲಿಯಿಂದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸುತ್ತಿದ್ದು ಇದೊಂದು ಐತಿಹಾಸಿಕ ಕಾರ್ಯಕ್ರಮ ಆಗಲಿದೆ ಎಂದರು.

1.5 ಲಕ್ಷ ಮಹಿಳೆಯರು ಭಾಗಿ
ಸುಮಾರು 1.5 ಲಕ್ಷ ಮಹಿಳೆಯರು ಮಹಾರಾಜ ಕಾಲೇಜು ಮೈದಾನದಲ್ಲಿ ಭಾಗಿಯಾಗುವುದರೊಂದಿಗೆ ಐತಿಹಾಸಿಕ ಕಾರ್ಯಕ್ರಮ ಆಗುವುದರೊಂದಿಗೆ ನಮ್ಮದು ನುಡಿದಂತೆ ನಡೆದ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ ಎಂದರು. ಈಗಾಗಲೇ ಶೇ.80 ರಷ್ಟು ನೋಂದಣಿ ಪ್ರಕ್ರಿಯೆ ಮುಗಿದಿದ್ದು, ಕೊನೆಯ ದಿನಾಂಕ ನಿಗದಿ ಮಾಡಿರುವುದಿಲ್ಲ ನೋಂದಣಿ ನಿರಂತರವಾಗಿರುತ್ತದೆ ಎಂದರು.
ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ.ಮಹಾದೇವಪ್ಪ ಮಾತನಾಡಿ, ರಾಜ್ಯದ 130 ಲಕ್ಷ ಕುಟುಂಬಗಳು ಸ್ವಾವಲಂಬಿ ಜೀವನ ನಡೆಸಲು ಇದೊಂದು ಉತ್ತಮ ಯೋಜನೆಯಾಗಿದ್ದು, ಸ್ವಾತಂತ್ರ್ಯಾ ನಂತರದ ಬಹುದೊಡ್ಡ ಯೋಜನೆಯಾಗಿದೆ, ಮಹಿಳಾ ಸಶಸ್ತೀಕರಣದೊಂದಿಗೆ ಮಹಿಳೆಯರ ಆತ್ಮಗೌರವ ಹೆಚ್ಚಿಸುವ ಕಾರ್ಯಕ್ರಮವಾಗಿದೆ ಎಂದರು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲಿದ್ದು ಅವರಿಗೆ ಸರಿಯಾದ ಊಟ, ಶೌಚಾಲಯ, ಬಸ್ ವ್ಯವಸ್ಥೆ, ಕುಡಿಯುವ ನೀರು ಸಮರ್ಪಕವಾಗಿರಲಿ ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಶಾಸಕರಾದ ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ರವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಪ್ರಕಾಶ್, ನಿರ್ದೇಶಕರಾದ ಅರ್ಚನ,ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಇದ್ದರು.
-
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ












Click it and Unblock the Notifications