ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೈ ಕಾರ್ಯಕರ್ತರ ವಿರುದ್ಧ ಗರಂ ಆದ ವಿಚಾರಕ್ಕೆ ಸ್ಪಷ್ಟನೆ ಕೊಟ್ಟ ಜಿಟಿಡಿ

|
Google Oneindia Kannada News

ಮೈಸೂರು, ಫೆಬ್ರವರಿ 22:ಸಚಿವ ಜಿಟಿ ದೇವೇಗೌಡ ಚಾಮುಂಡೇಶ್ವರಿ ಕ್ಷೇತ್ರದ ಕೈ ಕಾರ್ಯಕರ್ತರಿಗೆ ಆವಾಜ್ ಹಾಕಿದ ಘಟನೆ ನಿನ್ನೆ ಗುರುವಾರ (ಫೆ.22) ನಡೆದಿತ್ತು.

ಈ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಿಟಿಡಿ, ನಾನು ಅಲ್ಲಿಗೆ ಹತ್ತಕ್ಕೂ ಹೆಚ್ಚು ಭಾರೀ ಹೋಗಿದ್ದೇನೆ.ಅಭಿವೃದ್ಧಿ ಆಗಬೇಕೆಂದೇ ನಾನು ಅಲ್ಲಿಗೆ ಶಂಕು ಸ್ಥಾಪನೆಗೆ ಹೋಗಿದ್ದೆ. ಅದು ಮುಡಾ ವ್ಯಾಪ್ತಿಗೆ ಬರುವ ಹಿನ್ನಲೆಯಲ್ಲಿ ನಾವು ಅದನ್ನ ಅಭಿವೃದ್ಧಿಪಡಿಸುತ್ತಿದ್ದೇವೆ. ಆದರೆ ಡ್ರೈನೇಜ್ ಇಲ್ಲ, ಸಮಸ್ಯೆ ಆಲಿಸಿ ಎಂದು ಬಂದಿದ್ದರು. ಸಮಸ್ಯೆಗೆ ಮುಕ್ತಿ ಕೊಡಲು ಹೋದಾಗ ಈ ಮಾತುಗಳು ಬೇಕಿರಲಿಲ್ಲ ಎಂದು ಜಿಟಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯ ಬೆಂಬಲಿಗರ ವಿರುದ್ಧ ಸಚಿವ ಜಿ.ಟಿ.ದೇವೇಗೌಡ ಗರಂಸಿದ್ದರಾಮಯ್ಯ ಬೆಂಬಲಿಗರ ವಿರುದ್ಧ ಸಚಿವ ಜಿ.ಟಿ.ದೇವೇಗೌಡ ಗರಂ

ನಾಳೆ ಮೈಸೂರು ಜಿ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮುಂದುವರಿಸಲು ಜೆಡಿಎಸ್ ಉತ್ಸುಕತೆ‌ ತೋರಿದ್ದು, ಜೆಡಿಎಸ್ ಸರ್ವ ಸದಸ್ಯರ ಒಪ್ಪಿಗೆ ಮೇರೆಗೆ ಬಿಜೆಪಿ ಜೊತೆ ಹೋಗಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

GT Deve Gowda now clarified about angered against congress activists

ಇದು ಇಂದು ಮಾಡಿಕೊಂಡು ತೀರ್ಮಾನವಲ್ಲ, ಈ ಹಿಂದೆಯೇ ಮಾಡಿಕೊಂಡ ತೀರ್ಮಾನ. ಹಾಗಾಗಿ ಬಿಜೆಪಿ ಜೊತೆ ಹೋಗುತ್ತಿದ್ದೇವೆ.ಜೆಡಿಎಸ್ ಸಭೆ ವೇಳೆ ನಮ್ಮೆಲ್ಲ ಸದಸ್ಯರು ಬಿಜೆಪಿ ಜೊತೆ ಹೋಗಲು ಒಪ್ಪಿದ್ದಾರೆ. ಹಾಗಾಗಿ ಜಿ.ಪಂ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ ಎಂದು ಜಿಟಿಡಿ ಹೇಳಿದರು.

English summary
Yesterday Minister GT Deve Gowda angered against congress activists at Mysuru. He has now clarified about this.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X