ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಂಚಾಯತ್ ಆಡಳಿತ ಸಮಿತಿ ರಚನೆಗೆ ದೇವೇಗೌಡರ ಆಕ್ಷೇಪ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮೇ 28: ಗ್ರಾಮ ಪಂಚಾಯತಿ ಗಳಿಗೆ ಆಡಳಿತ ಸಮಿತಿ ರಚಿಸಿದರೆ ಪ್ರಜಾಪ್ರಭುತ್ವದ ಆಶಯವೇ ಬುಡಮೇಲಾಗುತ್ತದೆ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ.

Recommended Video

120 ಅಡಿ ಆಳದ ಬೋರ್ ವೆಲ್ ಗೆ ಬಿದ್ದ ಬಾಲಕನನ್ನು ಮೇಲೆತ್ತಲು ಪಟ್ಟ ಕಷ್ಟ ಅಷ್ಟಿಷ್ಟಲ್ಲ | Oneindia Kannada

ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಂಚಾಯತಿಗಳಿಗೆ ಸಮಿತಿ ರಚನೆ ಮಾಡುವುದರಿಂದ ಬಿಜೆಪಿ ಸರ್ಕಾರಕ್ಕೂ ಒಳ್ಳೆಯ ಹೆಸರು ಬರುವುದಿಲ್ಲ, ಗ್ರಾಮ ಸ್ವರಾಜ್ ದೃಷ್ಠಿಯಿಂದ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದರು.

ಸುತ್ತೂರು ಮಠಕ್ಕೆ ಸಚಿವ ರಮೇಶ್ ಜಾರಕಿಹೊಳಿ ಭೇಟಿಸುತ್ತೂರು ಮಠಕ್ಕೆ ಸಚಿವ ರಮೇಶ್ ಜಾರಕಿಹೊಳಿ ಭೇಟಿ

ಯಾವುದೇ ಒಂದು ಪಕ್ಷದ ಪಂಚಾಯತ್ ಆಗದೆ, ಸರ್ವರ ಪಂಚಾಯತ್ ಆಗಬೇಕು. ಆಡಳಿತ ಸಮಿತಿ ರಚಿಸಿದರೆ ಬಿಜೆಪಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚು. ರಿಯಲ್‌ ಎಸ್ಟೇಟ್‌ನವರು, ಕ್ರಿಮಿನಲ್ ಹಿನ್ನೆಲೆಯುಳ್ಳವರು ಪಂಚಾಯತ್ ಪ್ರವೇಶ ಮಾಡುತ್ತಾರೆ ಎಂದು ತಿಳಿಸಿದರು.

GT Devegowda Objection To Formation Of Panchayat Administration Committee

ಪಂಚಾಯತ್ ಚುನಾವಣೆಯನ್ನು ಯಾವಾಗಲಾದರೂ ಮಾಡಿ, ಈಗಿರುವ ಸದಸ್ಯರನ್ನೇ ಮುಂದುವರೆಸಿ. ಸಿದ್ದರಾಮಯ್ಯನವರನ್ನು ಇದೇ ಕಾರಣಕ್ಕಾಗಿ ಭೇಟಿ ಮಾಡಿದ್ದೇನೆ. ಒಂದು ವೇಳೆ ಆಡಳಿತ ಸಮಿತಿ ರಚಿಸಿದರೆ ಪಂಚಾಯತ್ ಮಟ್ಟದಿಂದ ಹೋರಾಟ ಶುರುವಾಗುತ್ತದೆ ಎಂದು ಎಚ್ಚರಿಸಿದರು.

ಇಂದು ದೇಶದಲ್ಲಿ ಸರ್ವರಿಗೂ ಸಮಬಾಳು, ಸಮಪಾಲು ಉಳಿದಿರುವುದು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಾತ್ರ ಎಂದು ಮಾಜಿ ಸಚಿವ ಜಿ.ಟಿ ದೇವೇಗೌಡ ಹೇಳಿದರು.

ಮೈಸೂರು ವಿವಿಯಿಂದ ವಿದ್ಯಾರ್ಥಿಗಳನ್ನು ತವರಿಗೆ ಕಳಿಸಲು ಚೀನಾ ಮನವಿಮೈಸೂರು ವಿವಿಯಿಂದ ವಿದ್ಯಾರ್ಥಿಗಳನ್ನು ತವರಿಗೆ ಕಳಿಸಲು ಚೀನಾ ಮನವಿ

ಮಾಜಿ ಪ್ರಧಾನಿ ಎಚ್.ಡಿ ದೇವೆಗೌಡರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನನಗೆ ಮೊದಲು ವಿಧಾನಸಭೆಗೆ ಟಿಕೆಟ್ ಕೊಟ್ಟವರು ದೇವೇಗೌಡರು. ಅವರು ರಾಷ್ಟ್ರ ರಾಜಕಾರಣದಲ್ಲಿ ಇರಬೇಕು. ಅವರು ರಾಜ್ಯಸಭೆಗೆ ಸ್ಪರ್ಧೆ ಮಾಡಿದರೆ ಫಸ್ಟ್ ಓಟು ನಾನೇ ಹೋಗಿ ಹಾಕ್ತೀನಿ ಎಂದರು.

English summary
MLA GT Deve Gowda said that if a governing body is created for the Gram panchayats, democratic aspirations will be suppressed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X