ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದಿನಿಂದ ವಿಧಾನಸೌಧದಲ್ಲಿ ಕನ್ನಡ ಭಾಷೆಯಲ್ಲೇ ವ್ಯವಹಾರ: ಜಿ.ಟಿ ದೇವೇಗೌಡ

|
Google Oneindia Kannada News

ಮೈಸೂರು, ನವೆಂಬರ್. 01: ಕನ್ನಡ ಭಾಷೆಯ ಉಳಿವಿಗೆ ಪ್ರತಿಯೊಬ್ಬರು ಶ್ರಮಿಸಬೇಕಿದೆ. ಈ ನಿಟ್ಟಿನಲ್ಲಿ ಆಡಳಿತರೂಢ ಸರ್ಕಾರ ಸರ್ವ ಸನ್ನದ್ಧವಾಗಿದೆ. ಹೀಗಾಗಿ ಇಂದಿನಿಂದ ವಿಧಾನಸೌಧದಲ್ಲಿ ಕನ್ನಡ ಭಾಷೆಯಲ್ಲೇ ವ್ಯವಹಾರ ನಡೆಸಲಾಗುತ್ತದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡ ತಿಳಿಸಿದರು.

ಇಂದು ಗುರುವಾರ ನಗರದ ಕೋಟೆ ಆಂಜನೇಯ ದೇವಸ್ಥಾನದ ಬಳಿ ಜಿಲ್ಲಾಡಳಿತ ಆಯೋಜಿಸಿದ್ದ 63ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕನ್ನಡ ಭಾಷೆಗಾಗಿ ಹೋರಾಟ ಮಾಡಿದ ಹಾಗೂ ಮಹನೀಯರನ್ನು ಸ್ಮರಿಸುವ ಕಾಯಕವಾಗಬೇಕು. ಹೀಗಾಗಿ ನಮ್ಮ ಸರ್ಕಾರ ಕನ್ನಡ ಭಾಷೆಯ ಏಳಿಗೆಗೆ ದುಡಿಯಲಿದೆ. ಕನ್ನಡ ನಾಡಿನಲ್ಲಿ ಕನ್ನಡ ಭಾಷೆ ಉಳಿವಿಗಾಗಿ ನಮ್ಮ ಸರ್ಕಾರವಿದೆ ಎಂದರು.

GT Devegowda says everybody needs to strive for the survival of Kannada

ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಚಾರಕ್ಕೆ ಯಾರು ಬರಲಿಲ್ಲ: ಜಿಟಿ ದೇವೇಗೌಡರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಚಾರಕ್ಕೆ ಯಾರು ಬರಲಿಲ್ಲ: ಜಿಟಿ ದೇವೇಗೌಡ

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನವೆಂಬರ್ 1 ರಿಂದ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ವ್ಯವಹಾರ ನಡೆಸಬೇಕೆಂದು ಇಂದಿನಿಂದ ಆದೇಶ ಹೊರಡಿಸಿದ್ದಾರೆ. ಯಾವುದೇ ಅಧಿಕಾರಿಗಳಾಗಿರಲಿ ಎಲ್ಲರೂ ಕನ್ನಡದಲ್ಲೇ ವ್ಯವಹರಿಸಬೇಕು ಮತ್ತು ಎಲ್ಲಾ ಕಡತಗಳು ಸಹ ಕನ್ನಡದಲ್ಲೇ ಇರಲಿದೆ. ಕನ್ನಡ ಭಾಷೆಯನ್ನು ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಕನ್ನಡ ಆಡಳಿತ ಭಾಷೆಯಾಗಲು ಕುಮಾರಣ್ಣನ ದಿಟ್ಟ ಹೆಜ್ಜೆಕನ್ನಡ ಆಡಳಿತ ಭಾಷೆಯಾಗಲು ಕುಮಾರಣ್ಣನ ದಿಟ್ಟ ಹೆಜ್ಜೆ

GT Devegowda says everybody needs to strive for the survival of Kannada

ಕನ್ನಡ ಭಾಷೆಯ ಗುಣಮಟ್ಟವನ್ನು ಹೆಚ್ಚಿಸುವುದೇ ಕನ್ನಡದ ಅಭಿವೃದ್ಧಿಕನ್ನಡ ಭಾಷೆಯ ಗುಣಮಟ್ಟವನ್ನು ಹೆಚ್ಚಿಸುವುದೇ ಕನ್ನಡದ ಅಭಿವೃದ್ಧಿ

ಮೈಸೂರಿನ ಯುವ ಭಾರತ್ ಸಂಘಟನೆಯ ವತಿಯಿಂದ ಟೆಕ್ಕಿಗಳಿಗೆ ಕನ್ನಡ ನಿಘಂಟುಗಳ ಪುಸ್ತಕವನ್ನು ಉಚಿತವಾಗಿ ನೀಡುವ ಮೂಲಕ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

English summary
Minister GT Devegowda Said that Everybody needs to strive for the survival of Kannada. From today onwards business is held in Kannada language in Vidhana Soudha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X