ನಿರ್ದೇಶಕರಾಗಿ ಜಿಟಿ ದೇವೇಗೌಡರ ಪುತ್ರ ಹರೀಶ್ ಗೌಡ ಅವಿರೋಧ ಆಯ್ಕೆ
ಮೈಸೂರು, ನವೆಂಬರ್.07: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕರಾಗಿ ಜಿಟಿ ದೇವೇಗೌಡರ ಪುತ್ರ ಹರೀಶ್ ಗೌಡ ಹಾಗೂ ಸಿ.ಬಸವೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹುಣಸೂರು ಕ್ಷೇತ್ರದಿಂದ ನಿರ್ದೇಶಕ ಸ್ಥಾನಕ್ಕೆ ಹರೀಶ್ಗೌಡ ನಾಮಪತ್ರ ಸಲ್ಲಿಸಿದ್ದು, ಎದುರಾಳಿ ಗಾಗೇನಹಳ್ಳಿ ಕುಮಾರ್ ಅವರು ಸಹಿ ಹಾಕಿರದ ಕಾರಣ ನಾಮಪತ್ರ ತಿರಸ್ಕೃತವಾಗಿರುವುದರಿಂದ ಹರೀಶ್ ಗೌಡ ಆಯ್ಕೆಯಾಗಿದ್ದಾರೆ. ಇವರು ಎರಡನೇ ಬಾರಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
'ತೆಲಂಗಾಣದಲ್ಲಿ ಟಿಆರ್ ಎಸ್ 100 ಸೀಟು ಗೆಲ್ಲೋದು ಗ್ಯಾರಂಟಿ!'
ತಿ.ನರಸೀಪುರ ತಾಲ್ಲೂಕಿನ ವ್ಯವಸಾಯ ಸೇವಾ ಸಹಕಾರ ಸಂಘದ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಹಿರಿಯ ಸಹಕಾರಿ ಹಾಗೂ ಬ್ಯಾಂಕ್ ಮಾಜಿ ಅಧ್ಯಕ್ಷ ಸಿ.ಬಸವೇಗೌಡ ಸಹ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇವರು ಕೂಡ ಸತತ 6ನೇ ಬಾರಿ ಆಯ್ಕೆಯಾಗಿದ್ದು, ನ. 12ರಂದು ನಿರ್ದೇಶಕ ಮಂಡಳಿಯ ಚುನಾವಣೆ ನಡೆಯಲಿದೆ.
Comments
English summary
GT Devegowda Son Harish Gowda and C Basavegowda are unanimously elected as the Director of Mysore and Chamarajanagar District Co-operative Bank.
Story first published: Wednesday, November 7, 2018, 10:55 [IST]