ರಾಜಕೀಯ ವಿಶೇಷ: ಪತ್ನಿಯನ್ನು ಜಿ.ಪಂ ಕಣಕ್ಕಿಳಿಸುತ್ತಾರಾ ಜಿ.ಟಿ.ದೇವೇಗೌಡರು?
ಮೈಸೂರು, ಜುಲೈ 14: ಜೆಡಿಎಸ್ನಲ್ಲಿದ್ದರೂ ಮಾನಸಿಕವಾಗಿ ಪಕ್ಷದ ಚಟುವಟಿಕೆಯಿಂದ ದೂರವಾಗಿ ಕ್ಷೇತ್ರದ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಶಾಸಕ ಜಿ.ಟಿ. ದೇವೇಗೌಡರ ನಡೆ ಸದ್ಯಕ್ಕೆ ಗೌಪ್ಯವಾಗಿರುವಾಗಲೇ ಮುಂದಿನ ಜಿ.ಪಂ. ಚುನಾವಣೆಗೆ ತಯಾರಿ ಆರಂಭವಾಗಿದ್ದು, ಪತ್ನಿ ಲಲಿತಾ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಾಗಿದೆ.
ಜಿ.ಟಿ. ದೇವೇಗೌಡರ ಕುಟುಂಬ ಹುಣಸೂರು ತಾಲ್ಲೂಕಿನಲ್ಲಿ ರಾಜಕೀಯವಾಗಿ ಪ್ರಭಾವ ಹೊಂದಿದೆ. ಅವರ ಪತ್ನಿ ಮತ್ತು ಪುತ್ರ ಇಬ್ಬರೂ ಕ್ಷೇತ್ರದಲ್ಲಿ ಜನರೊಂದಿಗೆ ಒಡನಾಟ ಹೊಂದಿದ್ದು, ಮುಂದಿನ ಜಿ.ಪಂ ಚುನಾವಣೆಗೆ ಪತ್ನಿ ಲಲಿತಾ ದೇವೇಗೌಡರನ್ನು ಕಣಕ್ಕಿಳಿಸುವ ತೀರ್ಮಾನ ಮಾಡದಿದ್ದರೂ ಬೆಂಬಲಿಗರು ಕಣಕ್ಕಿಳಿಸುವಂತೆ ಪಟ್ಟು ಹಿಡಿದಿರುವುದು ಇದೀಗ ಬೆಳಕಿಗೆ ಬಂದಿದೆ.

ಸಿದ್ದರಾಮಯ್ಯ ವಿರುದ್ಧ ಕಣಕ್ಕಿಳಿದಿದ್ದ ಜಿಟಿಡಿ
ಹುಣಸೂರು ಕ್ಷೇತ್ರದಲ್ಲಿ ಗೆಲುವು ಪಡೆಯುತ್ತಾ ಬಂದಿದ್ದ ಜಿ.ಟಿ. ದೇವೇಗೌಡರನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ಚಾಮುಂಡೇಶ್ವರಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿತ್ತು. ಒಬ್ಬ ಮುಖ್ಯಮಂತ್ರಿ ವಿರುದ್ಧ ಸ್ಪರ್ಧಿಸಿ ಗೆಲ್ಲುವುದು ಅಷ್ಟು ಸುಲಭದ ಮಾತಾಗಿರಲಿಲ್ಲ. ಆದರೆ ಗೆದ್ದು ತಾವೇನು ಎಂಬುದನ್ನು ಇಡೀ ರಾಜ್ಯಕ್ಕೆ ತೋರಿಸಿಕೊಟ್ಟಿದ್ದರು.
ಆದರೆ ತಾವು ಹುಣಸೂರು ಕ್ಷೇತ್ರವನ್ನು ಬದಲಾಯಿಸಿದರೂ ಅಲ್ಲಿಂದ ತಮ್ಮ ಪುತ್ರನನ್ನು ಕಣಕ್ಕಿಳಿಸಬೇಕೆನ್ನುವ ಬಯಕೆ ಜಿ.ಟಿ. ದೇವೇಗೌಡರ ಮನದಲ್ಲಿತ್ತು. ಅದಕ್ಕೆ ಜೆಡಿಎಸ್ನ ಕೆಲವು ನಾಯಕರೇ ಅಡ್ಡಗಾಲಾಗಿದ್ದರು ಎನ್ನುವುದನ್ನು ತಳ್ಳಿಹಾಕಲಾಗದು. ಹುಣಸೂರು ಕ್ಷೇತ್ರದಲ್ಲಿ ಜಿ.ಟಿ. ದೇವೇಗೌಡರ ಪುತ್ರ ಜಿ.ಡಿ. ಹರೀಶ್ ಗೌಡರು ಸಾಮಾಜಿಕ ಕಾರ್ಯಗಳ ಮೂಲಕ ಜನಮನ ಸೆಳೆದಿದ್ದರು.

ಜಿ.ಡಿ.ಹರೀಶ್ ಗೌಡರು ಸ್ಪರ್ಧಿಸುವ ಸಾಧ್ಯತೆ
ಜಿ.ಡಿ.ಹರೀಶ್ ಸದಾ ಒಂದಲ್ಲ ಒಂದು ರೀತಿಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಾ ಉತ್ತಮ ಹೆಸರು ಮಾಡಿದ್ದರು. ಇದು ಹೀಗೆಯೇ ಮುಂದುವರೆದರೆ ತಮಗೆ ಮುಳುಗುವ ನೀರಾಗುತ್ತದೆ ಎಂಬ ಭಯದಲ್ಲಿ ಕೆಲವು ನಾಯಕರು ರಾಜಕೀಯ ದುರುದ್ದೇಶದಿಂದ ಪ್ರಜ್ವಲ್ ರೇವಣ್ಣರನ್ನು ಕರೆತಂದು ಹುಣಸೂರಿನಲ್ಲಿ ಅಡ್ಡಾಡಿಸುವ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ಮಾಡಿದರು. ಆದರೆ ವಿಧಾನಸಭಾ ಚುನಾವಣೆ ಹತ್ತಿರ ಬಂದಾಗ ಆದ ಕೆಲವೊಂದು ಬದಲಾವಣೆಯಿಂದ ಎಚ್.ವಿಶ್ವನಾಥ್ ಅವರು ಸ್ಪರ್ಧೆ ಮಾಡುವಂತಾಯಿತು.
ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಜಿ.ಟಿ. ದೇವೇಗೌಡರು ಜೆಡಿಎಸ್ ತೊರೆಯುವುದು ಬಹುತೇಕ ಖಚಿತವಾಗಿರುವುದರಿಂದ ತಾವು ಮಾತ್ರವಲ್ಲದೆ, ತಮ್ಮ ಪುತ್ರ ಜಿ.ಡಿ. ಹರೀಶ್ ಗೌಡರು ಕೂಡ ಚುನಾವಣೆಗೆ ಸ್ಪರ್ಧಿಸುವ ಎಲ್ಲ ಸಾಧ್ಯತೆಗಳು ಇವೆ. ಆದರೆ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವುದು ಇನ್ನೂ ಕೂಡ ನಿರ್ಧಾರವಾಗಿಲ್ಲ. ಮುಂದೆ ಆಗಲಿರುವ ರಾಜಕೀಯ ಬದಲಾವಣೆ ಮೇಲೆ ಅದು ತೀರ್ಮಾನವಾಗಬಹುದೇನೋ?

ಲಲಿತಾ ದೇವೇಗೌಡರು ಜಿ.ಪಂಗೆ ಸ್ಪರ್ಧಿಸುವಂತೆ ಒತ್ತಾಯ
ಈಗಿನ ಪರಿಸ್ಥಿತಿಯಲ್ಲಿ ಜಿ.ಟಿ. ದೇವೇಗೌಡರ ಇಡೀ ಕುಟುಂಬ ರಾಜಕೀಯದಲ್ಲಿ ತೊಡಗಿಸಿಕೊಂಡಿದೆ. ಸದ್ಯದಲ್ಲಿಯೇ ನಡೆಯಲಿರುವ ಜಿ.ಪಂ. ಚುನಾವಣೆಯಲ್ಲಿ ಹುಣಸೂರು ತಾಲೂಕಿನ ಹನಗೋಡು ಜಿ.ಪಂ ಕ್ಷೇತ್ರದಿಂದ ಲಲಿತಾ ದೇವೇಗೌಡರನ್ನು ಕಣಕ್ಕಿಳಿಸಿ ತಳಮಟ್ಟದಿಂದ ರಾಜಕೀಯ ಶಕ್ತಿಯನ್ನು ಗಟ್ಟಿ ಮಾಡಿಕೊಳ್ಳುವ ಅಗತ್ಯತೆ ಇರುವುದರಿಂದ ಅವರ ಅಭಿಮಾನಿಗಳು ಇದೀಗ ಒಕ್ಕೊರಲಿನ ಒತ್ತಾಯವನ್ನು ಮಾಡುತ್ತಿದ್ದಾರೆ. ಆದರೆ ಪತ್ನಿ ಲಲಿತಾ ದೇವೇಗೌಡರನ್ನು ಹನಗೋಡು ಜಿ.ಪಂ. ಕ್ಷೇತ್ರದಿಂದ ಕಣಕ್ಕಿಳಿಸಬೇಕಾ? ಬೇಡವಾ? ಎನ್ನುವ ಬಗ್ಗೆ ಆಗಸ್ಟ್ 15ರ ನಂತರ ತೀರ್ಮಾನ ಮಾಡುವುದಾಗಿ ಶಾಸಕ ಜಿ.ಟಿ. ದೇವೇಗೌಡ ಹೇಳಿರುವುದು ಈಗಿನ ಬೆಳವಣಿಗೆಯಾಗಿದೆ.

ಹನಗೋಡು ಕ್ಷೇತ್ರ ನನ್ನ ತವರೂರು
ಮೂಲಗಳ ಪ್ರಕಾರ, ತಮ್ಮ ಬೆಂಬಲಿಗರ ಮನವಿಗೆ ಜಿ.ಟಿ. ದೇವೇಗೌಡರ ಒಪ್ಪಿದ್ದಾರೆ ಎನ್ನಲಾಗಿದ್ದು, ತಮ್ಮನ್ನು ಭೇಟಿ ಮಾಡಲು ಬಂದವರಿಗೆ ಧನ್ಯವಾದಗಳನ್ನು ತಿಳಿಸಿದ್ದಲ್ಲದೆ, "ಹನಗೋಡು ಕ್ಷೇತ್ರ ನನ್ನ ತವರೂರು. ನಾನು ಮತ್ತು ನನ್ನ ಮಗ, ಪತ್ನಿ ಹುಣಸೂರು ತಾಲೂಕಿನ ಜನರ ಸೇವೆಯಲ್ಲಿ ಇಂದಿಗೂ ಇದ್ದೇವೆ. ಮುಂದೆಯು ನಿಮ್ಮೊಂದಿಗೆ ಇರುತ್ತೇವೆ. ನಾನು ಪ್ರಥಮವಾಗಿ ಹುಣಸೂರಿನಿಂದ ಶಾಸಕನಾದೆ, ಸಚಿವನಾದೆ ನನ್ನ ಮಗ ಕೂಡ ಸಹಕಾರ ಕ್ಷೇತ್ರದಿಂದ ಆಯ್ಕೆಯಾದ ಮತ್ತು ಪತ್ನಿ ಕೂಡ ಜಿ.ಪಂ ಮತ್ತು ಸಹಕಾರ ಕ್ಷೇತ್ರದಿಂದಲ್ಲೂ ಆಯ್ಕೆಯಾಗಿ ಹುಣಸೂರು ಕ್ಷೇತ್ರದ ಅಭಿವೃದ್ದಿಗೆ ಒತ್ತು ನೀಡಿದ್ದೇನೆ.''

ಆ.15ರವರೆಗೆ ಸಮಯ ಕೇಳಿದ ಜಿಟಿಡಿ
ಆದರೆ ಜಿ.ಪಂ. ಚುನಾವಣೆಯಲ್ಲಿ ಹನಗೋಡು ಕ್ಷೇತ್ರದಿಂದ ಪತ್ನಿ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತೀರ್ಮಾನ ಮಾಡಲು ಸಮಯ ಬೇಕಾಗಿದೆ. ರಾಜಕೀಯ ಸನ್ನಿವೇಶಗಳನ್ನು ನೋಡಿಕೊಂಡು ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಶಾಸಕ ಜಿ.ಟಿ. ದೇವೇಗೌಡರ ಸದ್ಯದ ನಡೆಯನ್ನು ಗಮನಿಸಿದರೆ, ರಾಜಕೀಯವಾಗಿ ಮುಂದಿನ ದಿನಗಳಲ್ಲಿ ಒಂದಷ್ಟು ಬದಲಾವಣೆಗಳು ಆಗುವುದಂತು ನಿಜ ಎನ್ನುವುದರಲ್ಲಿ ಎರಡು ಮಾತಿಲ್ಲ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications