ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಕ್ತೆಯೊಂದಿಗೆ ಅಸಭ್ಯ ವರ್ತನೆ: ವಿಷ ಕುಡಿದ ಗುಡ್ಡಪ್ಪ

|
Google Oneindia Kannada News

ಮೈಸೂರು, ಮೇ 22: ಮಕ್ಕಳಿಲ್ಲದ ಮಹಿಳೆಯರಿಗೆ, ಮಕ್ಕಳಾಗುವಂತೆ ಮಾಡುತ್ತೇನೆ ಎಂದು ವಂಚಿಸಿ, ಸಿಕ್ಕಿಬಿದ್ದಿದ್ದ ಗುಡ್ಡಪ್ಪ ಇದೀಗ ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾದ ಘಟನೆ ಮೈಸೂರಿನಲ್ಲಿ ನಡೆದಿದೆ.

ನಂಜನಗೂಡು ತಾಲ್ಲೂಕಿನ ನೆಲ್ಲಿನಾಥಪುರ ಗ್ರಾಮದಲ್ಲಿ ಪೂಜಾರಿಯಾಗಿರುವ ವೆಂಕಟೇಶ ನಾಯ್ಕ (22) ಎಂಬಾತನೇ ಇದೀಗ ಆಸ್ಪತ್ರೆಗೆ ದಾಖಲಾಗಿರುವ ಗುಡ್ಡಪ್ಪ.

ಮಕ್ಕಳಾಗುವ ವರ ನೀಡ್ತೀನೆಂದು ಮಹಿಳೆಗೆ ವಂಚನೆ: ನೆಲ್ಲಿನಾಥಪುರ ಗ್ರಾಮಸ್ಥರಿಂದ ಗೂಸಾಮಕ್ಕಳಾಗುವ ವರ ನೀಡ್ತೀನೆಂದು ಮಹಿಳೆಗೆ ವಂಚನೆ: ನೆಲ್ಲಿನಾಥಪುರ ಗ್ರಾಮಸ್ಥರಿಂದ ಗೂಸಾ

ಪೂಜೆ ಸಲ್ಲಿಸಿದರೆ ಮಕ್ಕಳಾಗುತ್ತದೆ ಎಂದು ನಂಬಿದ್ದ ತಾಲ್ಲೂಕಿನ ಮಂಡನಹಳ್ಳಿ ಮಹಿಳೆಯೊಬ್ಬರು ನೆಲ್ಲಿನಾಥ ಪುರಕ್ಕೆ ತೆರಳಿ ವೆಂಕಟೇಶನನ್ನು ಭೇಟಿಯಾಗಿದ್ದಾರೆ. ಇದೇ ವೇಳೆ, ನಿನ್ನ ಮನೆಗೆ ಬಂದು ವಿಶೇಷ ಪೂಜೆ ಮಾಡಿದ್ದಲ್ಲಿ ಮಕ್ಕಳಾಗುತ್ತದೆ ಎಂದು ಭರವಸೆ ನೀಡಿದ್ದ ಗುಡ್ಡಪ್ಪ ಆಕೆಯನ್ನು ನಂಬಿಸಿದ್ದ. ಆ ಮಹಿಳೆಯೊಂದಿಗೆ ಇದೇ ನೆಪದಲ್ಲಿ ಅಸಭ್ಯವಾಗಿ ನಡೆದುಕೊಳ್ಳಲು ಮುಂದಾಗಿದ್ದ.

guddappa attempts suicide in relation to sexual harrasment

ಗುಡ್ಡಪ್ಪನ ಈ ವರ್ತನೆ ಬಗ್ಗೆ ಅನುಮಾನಗೊಂಡ ಗೃಹಿಣಿ ತನ್ನ ಪತಿಗೆ ವಿಷಯವನ್ನು ತಿಳಿಸಿದ್ದಾರೆ. ನಂತರ ಇದೇ ವಿಷಯವಾಗಿ, ಪೂಜೆ ಮಾಡಿಸುವ ನೆಪದಲ್ಲಿ ಗುಡ್ಡಪ್ಪನನ್ನು ಗ್ರಾಮಕ್ಕೆ ಕರೆಸಿ ಗ್ರಾಮಸ್ಥರು ಕೂಡಿಹಾಕಿ ಥಳಿಸಿದ್ದರು. ಘಟನೆ ನಂತರ ಜಯಪುರ ಠಾಣೆಗೆ ಆತನನ್ನು ಒಪ್ಪಿಸಿದರು. ಇದಕ್ಕೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿರಲಿಲ್ಲ. ಈ ಘಟನೆಯಿಂದ ಮನನೊಂದು ವಿಷ ಸೇವಿಸಿದ್ದಾನೆ ಎನ್ನಲಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ಆತನನ್ನು ದಾಖಲಿಸಲಾಗಿದೆ.

English summary
Gudappa taken poison at Mysuru in related to Indecent behavior with women devotes. He cheated some women who don’t have a child and also involved in sexual harassment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X