ಜು.25ರವರೆಗೆ ಅರಮನೆ ನಗರಿಯಲ್ಲಿ ಗುಜರಾತ್ ಕರಕುಶಲ ಉತ್ಸವ
ಮೈಸೂರು, ಜುಲೈ 20: ಮೈಸೂರಿನಲ್ಲಿ ಗುಜರಾತಿನ ಕುಶಲ ಕಲಾ ವಸ್ತುಗಳನ್ನು ಖರೀದಿಸಬೇಕೆನ್ನುವವರಿಗೆ ಸದಾವಕಾಶವೊಂದು ಒದಗಿ ಬಂದಿದೆ. ಜೆಎಸ್ಎಸ್ ಮಹಾವಿದ್ಯಾಪೀಠದ ಜೆಎಸ್ಎಸ್ ಮೈಸೂರು ಅರ್ಬನ್ ಹಾತ್ನಲ್ಲಿ 6ನೇ ಬಾರಿಗೆ ಗುಜರಾತ್ ಕರಕುಶಲ ಉತ್ಸವ ನಡೆಯುತ್ತಿದ್ದು, ಕುಶಲ ಕಲಾ ಪ್ರೇಮಿಗಳಿಗೊಂದು ವರದಾನವಾಗಿದೆ.
ಎಂಟು ದಿನಗಳ ಉತ್ಸವ
ಜುಲೈ 18 ರಿಂದ ಆರಂಭವಾಗಿದ್ದು, ಜು.25ರವರೆಗೆ ನಡೆಯಲಿರುವ ಈ ಉತ್ಸವ ಭಾರತ ದೇಶದ ಪ್ರಾಂತೀಯ ಮೇಳವಾಗಿದೆ. ಗುಜರಾತ್ ರಾಜ್ಯದ ವಿವಿಧ ಭಾಗಗಳ ಪ್ರಸಿದ್ಧ ಹಾಗೂ ಕ್ರೀಯಾ ಶೀಲರಾಗಿರುವ ಸುಮಾರು 50ಕ್ಕೂ ಹೆಚ್ಚು ಕುಶಲಕರ್ಮಿಗಳು ಮೇಳದಲ್ಲಿ ಭಾಗವಹಿಸಲಿದ್ದಾರೆ ಎನ್ನುವುದು ವಿಶೇಷವಾಗಿದೆ.

ಆಕರ್ಷಣೀಯ ಕರಕುಶಲ ವಸ್ತುಗಳು
ಉತ್ಸವದಲ್ಲಿ ಕುಶಲಕರ್ಮಿಗಳು ತಯಾರಿಸಿದ ಪಟೋಲ ಸೀರೆಗಳು, ಬಾಂದಿನಿ ಸೀರೆಗಳು, ಕಸೂತಿ ಮಾಡಿದ ಬೆಡ್ಶೀಟ್ಗಳು, ಟವಲ್ಗಳು, ಕುಶನ್ ಕವರ್ಗಳು, ಪರಿಸರ ಸ್ನೇಹಿ ಆಭರಣಗಳು, ಡ್ರೆಸ್ ಮೆಟೀರಿಯಲ್ಗಳು, ಮಣ್ಣಿನಿಂದ ತಯಾರಿಸಿದ ವಸ್ತುಗಳು, ಬೀಡ್ ವರ್ಕ್, ಮೆಟಲ್ ವರ್ಕ್, ಕುರ್ತಿಗಳು, ಚನಿಯಾ ಚೋಲಿ, ಬಾಂದಿನಿ ಹಾಗೂ ಇನ್ನಿತರ ಆಕರ್ಷಣೀಯ ಕರಕುಶಲ ಹಾಗೂ ಕೈಮಗ್ಗ ಉತ್ಪನ್ನಗಳಿವೆ.
ಮೇಳದ ಇನ್ನೊಂದು ವಿಶೇಷ ಏನೆಂದರೆ, ತಯಾರಕರಿಂದಲೇ ನೇರವಾಗಿ ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿ ಒದಗಿಸಲಾಗುತ್ತಿದೆ. ಈ ಕಾರಣದಿಂದಾಗಿ ಮೈಸೂರು ಹಾಗೂ ಸುತ್ತಮುತ್ತಲಿನ ಗ್ರಾಹಕರಿಗೆ ಗುಜರಾತ್ ಸಂಸ್ಕೃತಿಯ ಉಡುಗೆ- ತೊಡುಗೆಗಳು ಮತ್ತು ಅಲಂಕಾರಿಕ ವಸ್ತುಗಳು ನೇರವಾಗಿ, ಉತ್ತಮ ಗುಣಮಟ್ಟದಲ್ಲಿ ಲಭಿಸಲಿವೆ.

ಗುಜರಾತಿನ ಖಾದ್ಯ ಸವಿಯಲು ಅವಕಾಶ
ಇಷ್ಟೇ ಅಲ್ಲದೆ, ಶಾಲಾ ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಕಾರ್ಪೋರೇಟ್ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಆಸಕ್ತಿಯುಳ್ಳವರಿಗೆ ಗುಜರಾತಿನ ಪಾರಂಪರಿಕ ಕಲೆಯ ಬಗ್ಗೆ ತರಬೇತಿಯನ್ನು ಗುಜರಾತಿನ ಕುಶಲಕರ್ಮಿಗಳು ನೀಡಲಿದ್ದಾರೆ. ಇಷ್ಟೇ ಅಲ್ಲದೆ ಗುಜರಾತಿನ ಪ್ರಸಿದ್ಧ ರುಚಿಕರವಾದ ಖಾದ್ಯಗಳು, ಸಿಹಿ ತಿಂಡಿಗಳನ್ನು ಸವಿಯುವ ಅವಕಾಶವನ್ನು ಮಾಡಿಕೊಡಲಾಗುತ್ತಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮೈಸೂರು ನಗರ ಬಸ್ ನಿಲ್ದಾಣದಿಂದ ಪ್ರತಿ ನಿತ್ಯ ಬಸ್ ನಂ.117/1ರ ಬಸ್ಸು ಸೌಲಭ್ಯ ಇಲ್ಲಿಗಿದೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications