ವಿಶ್ವನಾಥ್ ಮುಂದಿನ ನಡೆ ಅಷ್ಟು ಸುಲಭವಾಗಿಲ್ಲ
ಮೈಸೂರು, ಜುಲೈ 13: ಹುಣಸೂರು ಕ್ಷೇತ್ರದ ಶಾಸಕ, ಹಿರಿಯ ರಾಜಕಾರಣಿ ಎಚ್.ವಿಶ್ವನಾಥ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಇಂದಿಗೆ ಒಂದು ವಾರ ಕಳೆದಿದೆ. ರಾಜೀನಾಮೆ ನಂತರ ತಾಲ್ಲೂಕಿನಲ್ಲಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆಯೂ ಜೋರಾಗಿದೆ.
ವಿಶ್ವನಾಥ್ ಅವರು ಬಿಜೆಪಿಗೆ ಸೇರುವುದು ಖಚಿತ ಎಂಬ ಮಾತು ಒಂದೆಡೆ ಕೇಳಿ ಬರುತ್ತಿದ್ದರೆ, ಅವರ ರಾಜೀನಾಮೆಯಿಂದ ತೆರವಾಗುವ ಸ್ಥಾನಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಮತ್ತೆ ವಿಶ್ವನಾಥ್ ಸ್ಪರ್ಧಿಸುತ್ತಾರೋ ಅಥವಾ ತಮ್ಮ ಪುತ್ರನನ್ನು ಕಣಕ್ಕಿಳಿಸುತ್ತಾರೋ ಎಂಬ ಕುತೂಹಲದ ಚರ್ಚೆಯೂ ನಡೆಯುತ್ತಿದೆ. ಆದರೆ ಯಾರೇ ಸ್ಪರ್ಧಿಸಿದರೂ ಗೆಲುವು ಅಷ್ಟು ಸುಲಭವಲ್ಲ ಎಂಬುದೂ ಜನರ ಅಭಿಪ್ರಾಯವಾಗಿದೆ.
ಈಗಾಗಲೇ ಅತೃಪ್ತ ಶಾಸಕರ ನಾಯಕ ಎನಿಸಿಕೊಂಡ ವಿಶ್ವನಾಥ್ ಅವರನ್ನು ಸೋಲಿಸಲು ಜೆಡಿಎಸ್ ರಾಜಕೀಯ ದಾಳ ಉರುಳಿಸುವುದಂತೂ ನಿಜ. ವಿಶ್ವನಾಥ್ ಅವರಿಗೆ ಇದು ಉಪಚುನಾವಣೆಯಲ್ಲಿ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯಿದೆ. ಆದರೆ ಬಿಜೆಪಿ ವರಿಷ್ಠರು ನೇರವಾಗಿ ಅಖಾಡಕ್ಕಿಳಿದು ಪ್ರಚಾರದಲ್ಲಿ ಪಾಲ್ಗೊಂಡರೆ ಸವಾಲಿನೊಂದಿಗೆ ವಿಶ್ವನಾಥ್ ಅವರು ಗೆಲುವಿನ ದಡ ಸೇರುವ ಸಂಭವ ತಳ್ಳಿಹಾಕುವಂತಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಕೆಲವೇ ಸಾವಿರ ಅಂತರದಲ್ಲಿ ವಿಶ್ವನಾಥ್ ಅವರು ಗೆಲವು ಸಾಧಿಸಿದ್ದರು.

ಮತ್ತೊಂದು ಮೂಲಗಳ ಪ್ರಕಾರ, ವಿಶ್ವನಾಥ್ ಮತ್ತೆ ಹುಣಸೂರಿನಿಂದ ಸ್ಪರ್ಧಿಸುವುದು ಅನುಮಾನವಾಗಿದ್ದು, ಅವರ ಬದಲಿಗೆ ಅವರ ಪುತ್ರ ಜಿಲ್ಲಾ ಪಂಚಾಯಿತಿ ಸದಸ್ಯ ಅಮಿತ್ ಅವರನ್ನೇ ಕಣಕ್ಕಿಳಿಸಬಹುದು ಎಂಬ ಮಾತು ಕೇಳಿಬರುತ್ತಿವೆ.
ಇವೆಲ್ಲದರೊಂದಿಗೆ ಮುಖ್ಯವಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಸಿದ್ದರಾಮಯ್ಯ ಅವರ ಆಪ್ತ ಮಂಜುನಾಥ್ ಮತ್ತೆ ಈ ಕ್ಷೇತ್ರವನ್ನು ವಶಕ್ಕೆ ಪಡೆಯಲು ಇನ್ನಿಲ್ಲದ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಇವೆಲ್ಲವನ್ನೂ ಮೀರಿ ವಿಶ್ವನಾಥ್ ಯಾವ ಹಾದಿಯನ್ನು ರೂಪಿಸಿಕೊಳ್ಳುತ್ತಾರೆ ಎಂಬುದೇ ಮುಂದಿನ ಪ್ರಶ್ನೆಯಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications