ವಿಜಯೇಂದ್ರ ಮಿನಿಸ್ಟರ್ ಆದರೆ ಏನು ಬದಲಾವಣೆ ಆಗುತ್ತೆ? ಎಚ್. ವಿಶ್ವನಾಥ್ ಪ್ರಶ್ನೆ
ಮೈಸೂರು, ಮೇ 21: ರಾಜ್ಯದಲ್ಲಿ ಗುಣಾತ್ಮಕ ವಿಚಾರಕ್ಕೆ ಬದಲಾವಣೆಗಳು ಆಗಬೇಕು. ವಿಜಯೇಂದ್ರ ಮಿನಿಸ್ಟರ್ ಆದರೆ ಗುಣಾತ್ಮಕ ಬದಲಾವಣೆ ಆಗುತ್ತಾ? ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಸಚಿವನಾದರೆ ಆಗಲಿ ಬಿಡಿ. ಆದರೆ, ಇದರಿಂದ ಗುಣಾತ್ಮಕ ಬದಲಾವಣೆ ಆಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ. ವಿಶ್ವನಾಥ್ಗೆ ಸಚಿವ ಸ್ಥಾನ ನೀಡುವಂತೆ ಹೋರಾಟ ಮಾಡುತ್ತಿರುವ ಬಗ್ಗೆ ಮಾತನಾಡಿದ ಅವರು, ಹೋರಾಟ ಮಾಡ್ತಾ ಇದ್ದಾರೆ. ಆದ್ರೆ ಇವ್ರ ಕೊಡಬೇಕಲ್ಲ ಎಂದು ನಕ್ಕರು.
ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದ ಬಗ್ಗೆ ಮಾತನಾಡಿದ ಅವರು, ಪಠ್ಯಪುಸ್ತಕ ಪರಿಷ್ಕರಣೆ ರಾಜಕೀಯ ಸಂಘರ್ಷ ಅಲ್ಲ. ನಾವೆಲ್ಲ ಸೇರಿ ಶಿಕ್ಷಣ ಹಾಳು ಮಾಡುತ್ತಿದ್ದೇವೆ. ರೋಹಿತ್ ಚಕ್ರತೀರ್ಥ ಯಾರಪ್ಪ? ಸಂಘ ಪರಿವಾರದ ಕಾರ್ಯಕರ್ತ ನೀವು. ಶಿಕ್ಷಣ ತಜ್ಞರಲ್ಲದೆ ಇರುವವರು ಪಠ್ಯ ಪುಸ್ತಕ ತಯಾರಿಯ ಅಧ್ಯಕ್ಷರಾಗಿರುವುದು ದುರಂತ. ಪಠ್ಯಪುಸ್ತಕದಲ್ಲಿ ಕೇಸರಿಕರಣ ನುಸುಳುತ್ತಿರುವುದು ಅಪಾಯಕಾರಿ. ಧರ್ಮದ ಆಧಾರಿತ ಪಠ್ಯ ಯಾವುದೇ ಕಾರಣಕ್ಕೂ ಬೇಡ.

ಯಜ್ಞ ಕುಂಡ ಯಾವ ಕಡೆ ಇರಬೇಕು ಎಂದು ಪಠ್ಯ ಬೋಧನೆ ಮಾಡುವುದು ಯಾರಿಗೆ ಬೇಕು? ನಾರಾಯಣ ಗುರು ಸಾಮಾಜಿಕ ಕ್ರಾಂತಿಯ ಹರಿಕಾರ ಅವರ ಪಠ್ಯ ತೆಗೆಯುವುದು ತಪ್ಪು. ಹೆಡ್ಗೆವಾರ್ ಯಾರು ಎಂಬುದೆ ನಮಗೆ ಗೊತ್ತಿಲ್ಲ? ಬಾಯಿಗೆ ಬಂದಂಗೆ ಯಾರು ಯಾರೋದು ಪಾಠ ಸೇರಿಸಿದರೆ ಹೇಗೆ? ಹೆಡ್ಗೆವಾರ್ ಗೂ ಟಿಪ್ಪುಗೆ ಹೋಲಿಕೆ ಮಾಡುತ್ತೀರಾ ನೀವು? ಇದು ಸರಿನಾ? ಟಿಪ್ಪು ಬ್ರಿಟಿಷರ ವಿರುದ್ಧ ಹೋರಾಡಿದ ವೀರ ಚರಿತೆ ಗೊತ್ತಿಲ್ವಾ? ಹೆಡ್ಗೆವಾರ್ ಏನೂ ಮಾಡಿದರು ಎಂಬುದು ಎಲ್ಲರಿಗೂ ಗೊತ್ತಿದೆ? ಬ್ರಿಟಿಷರ ಮುಂದೆ ಮಂಡಿಯೂರಿದ್ದು ಯಾರು? ಟಿಪ್ಪು ಬ್ರಿಟಿಷರ ವಿರುದ್ಧ ಹೋರಾಡಿದವನು ಎಂದರು.
ಸಿದ್ದರಾಮಯ್ಯ ಅಧಿಕಾರದಲ್ಲಿದ್ದ ವೇಳೆ ಬೆಂಗಳೂರಿನ ರಾಜಕಾಲುವೆ ಒತ್ತುವರಿ ತೆರವು ಆರಂಭಿಸಿದ್ದರು. ಆ ಜಾಗದಲ್ಲಿ ಪ್ರಸಿದ್ಧ ನಟ, ಶ್ರೀಮಂತ ರಾಜಕಾರಣಿ ಮನೆ ಇದ್ದವು ಎಂದು ಕಾರ್ಯಾಚರಣೆ ನಿಲ್ಲಿಸಿದರು. ಬಡವರು ಮಾತ್ರ ಮನೆ ಕಳೆದು ಕೊಂಡು ಬೀದಿಗೆ ಬಿದ್ದರು. ಶ್ರೀಮಂತರ ಮನೆಗಳು ಹಾಗೇ ಉಳಿದವು. ಬೆಂಗಳೂರಿನ ಕೆ.ಆರ್. ಪುರಂಗೆ ಸಿಎಂ ಹೋದರೆ ಅಲ್ಲಿ ಹೂ ಎರಚುತ್ತಾರೆ. ಅಲ್ಲಿನ ಜನರ ಮನೆಗೆ ನೀರು ಹೋಗಿದೆ ಇವರು ಹೂ ಎರಚಿ ಸಂಭ್ರಮಿಸುತ್ತಾರೆ. ಇದು ಸರಿನಾ? ಮೂಲಭೂತ ಸೌಕರ್ಯಕ್ಕೆ ಎಲ್ಲಡೆ ಅತಿ ಹೆಚ್ಚು ಹಣ ಖರ್ಚಾಗ್ತಿದೆ. ಪ್ರತಿ ಲ ಮಾತ್ರ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮೈಸೂರು ಜಿಲ್ಲಾ ಮಂತ್ರಿ ಎಲ್ಲಿ ಹೋದ್ರು? ಜಿಲ್ಲೆಯಲ್ಲಿ ಮಳೆಯಿಂದ ಅನಾಹುತವಾಗಿದೆ. ನೀವು ಖುದ್ದು ಬಂದು ನೋಡಬೇಕು ತಾನೇ? ಸಿಎಂ ಎಲ್ಲಾ ಕಡೆ ಹೋಗಿ ಜನರ ಸಂಕಷ್ಟ ಅಲಿಸುತ್ತಿದ್ದಾರೆ. ಜಿಲ್ಲಾ ಮಂತ್ರಿಗಳು ಯಾಕೆ ಎಲ್ಲೂ ಹೋಗುತ್ತಿಲ್ಲ? ನಿಮಗೆ ಏನಾಗಿದೆ? ಜನಪ್ರತಿನಿಧಿಗಳ ಸಭೆ ನಡೆಸಿ ಸಮಸ್ಯೆ ಪರಿಹರಿಸಿ. ಹಿಂದೆ ಮೋದಿ ಮೈಸೂರಿಗೆ ಬಂದಾಗ ಮೈಸೂರು ಪ್ಯಾರಿಸ್ ಮಾಡ್ತಿನಿ ಅಂತ ಹೇಳಿದ್ದರು ಈಗ ಮೈಸೂರು ಕೊಳಚೆಯಾಗುತ್ತಿದೆ. ಇದನ್ನು ಮೋದಿ ಗಮನಿಸಲಿ ಎಂದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications