ವಿಡಿಯೋ; ಮತಾಂತರ ಕಾಯ್ದೆ, ಬಿಜೆಪಿ ವಿರುದ್ಧ ಎಚ್. ವಿಶ್ವನಾಥ್ ಅಸಮಾಧಾನ
ಮೈಸೂರು, ಡಿಸೆಂಬರ್ 23; "ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ 2021'ರ ಕುರಿತು ವಿಧಾನ ಪರಿಷತ್ ಸದಸ್ಯ ಮಾಜಿ ಸಚಿವ ಎಚ್. ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮದೇ ಪಕ್ಷದ ಸರ್ಕಾರದ ನಿರ್ಧಾರದ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗುರುವಾರ ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಚ್. ವಿಶ್ವನಾಥ್, "ಹೊಸ ಕಾಯ್ದೆ ಜಾರಿಗೆ ತರುವ ಮೂಲಕ ಸಮಾಜವನ್ನು ಒಡೆಯುವ ಕೆಲಸ ಮಾಡಲಾಗುತ್ತಿದೆ" ಎಂದು ಆರೋಪಿಸಿದರು.
"ಭಾರತದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಧಾರ್ಮಿಕ ಸ್ವಾತಂತ್ರ್ಯವಿದ್ದು, ವಿ ದಿ ಪೀಪಲ್ ಆಫ್ ಇಂಡಿಯಾ ಎಂದೇ ಪ್ರಾರಂಭವಾಗುತ್ತದೆ. ಮಹಾತ್ಮ ಗಾಂಧೀಜಿ ಕೂಡ ಅಂತರ್ ಜಾತಿ, ಅಂತರ್ ಧರ್ಮಗಳ ವಿವಾಹವನ್ನು ಪ್ರೋತ್ಸಾಹಿಸಿದ್ದಾರೆ" ಎಂದರು.

"ಪ್ರಧಾನಿ ಮೋದಿ ಅವರು ಸಹ ಮನಸ್ಸಿನ ಸ್ವಚ್ಛತೆ, ಸೃಜನ ಶೀಲತೆ ಹಾಗೂ ಆತ್ಮ ನಿರ್ಭರತೆಗೆ ಒತ್ತು ಕೊಟ್ಟು ಹೇಳಿದ್ದಾರೆ. ಆದರೆ ನರೇಂದ್ರ ಮೋದಿ ಈವರೆಗೂ ಎಲ್ಲೂ ಸಹ ಹಿಂದುತ್ವದ ಬಗ್ಗೆ ಹೇಳಿಲ್ಲ. ಬಸವಣ್ಣ, ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರುಗಳು ಮಾನವ ಧರ್ಮದ ಪ್ರತಿಪಾದಕರುಗಳಾಗಿದ್ದಾರೆ. ಆದರೆ ಇದೀಗ ಬಸವಣ್ಣನವರ ಕೈಯಿಂದಲೇ ಸಮಾಜ ಒಡೆಯುವ ಕೆಲಸ ಮಾಡಿಸಿದಂತಿದ್ದು, ಹೊಸ ಕಾಯ್ದೆ ಮೂಲಕ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿದ್ದಾರೆ" ಎಂದು ಸರ್ಕಾರದ ವಿರುದ್ಧವೇ ಹರಿಹಾಯ್ದರು.
ಅವರನ್ನೆಲ್ಲಾ ಜೈಲಿಗೆ ಹಾಕಲಾಗುತ್ತದೆಯೇ?; "ದೇಶದಲ್ಲಿ ಅನೇಕ ಮಂದಿ ಆರ್ಎಸ್ಎಸ್ ನಾಯಕರ ಕೆಲವು ಮಕ್ಕಳು ಮುಸ್ಲಿಂ ಧರ್ಮದವರನ್ನು ಮದುವೆ ಆಗಿದ್ದಾರೆ. ಸಿನಿಮಾ ನಟ-ನಟಿಯರು ಸಹ ಮುಸ್ಲಿಂ ಧರ್ಮದವರನ್ನು ಮದುವೆ ಆಗಿದ್ದಾರೆ. ಹಾಗಾದರೆ ಅವರನ್ನೆಲ್ಲಾ ಜೈಲಿಗೆ ಹಾಕಲಾಗುತ್ತದೆಯೇ?" ಎಂದು ವಿಶ್ವನಾಥ್ ಪ್ರಶ್ನಿಸಿದರು.
"ಮತಾಂತರ ಕಾಯ್ದೆ ವಿಚಾರದಲ್ಲಿ ಕಾಂಗ್ರೆಸ್ ಇಬ್ಭಂದಿತನ ತೋರುತ್ತಿದೆ. ಹರಟೆ ಹೊಡೆಯುತ್ತಾ ಕುಳಿತ ಕಾಂಗ್ರೆಸ್ ನಾಯಕರು ಸಭೆಗೆ ಬರುವ ಮುನ್ನ ಕಾಯ್ದೆ ಮಂಡನೆ ಆಗಿತ್ತು. ಆಮೇಲೆ ಸದನಕ್ಕೆ ಬಂದು ನಾಟಕವಾಡುತ್ತಿದ್ದಾರೆ. ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್, ದಲಿತರು ಮುಸ್ಲಿಮರು ಹಾಗೂ ಹಿಂದುಳಿದವರು ನಿಮ್ಮ ವೋಟ್ ಬ್ಯಾಂಕ್ ಆಗಿದ್ದು ಇವರ ಪರ ಹೋರಾಟ ಮಾಡುತ್ತಿದ್ದೀರಾ?. ದಲಿತರು ಮತಾಂತರ ಆಗಲೇ ಬಾರದು ಎಂದು ದಿಗ್ಬಂಧನ ಹಾಕುತ್ತಿದ್ದಾರೆ. ಇದು ಯಾವ ನ್ಯಾಯ?" ಎಂದು ಎಚ್. ವಿಶ್ವನಾಥ್ ಕೇಳಿದರು.
ಇನ್ನೂ ಮತಾಂತರ ನಿಷೇಧ ಕಾಯ್ದೆ ವಿಚಾರದ ಬಗ್ಗೆ ಚಕಾರವೆತ್ತದ ಸ್ವಾಮೀಜಿಗಳು, ಮಠ ಮಾನ್ಯಗಳ ವಿರುದ್ಧವೂ ವಾಗ್ದಾಳಿ ನಡೆಸಿದ ವಿಶ್ವನಾಥ್, "ಸ್ವಾಮೀಜಿಗಳು, ಮಠ ಮಾನ್ಯಗಳು ಮತಾಂತರ ಕಾಯ್ದೆ ಬಗ್ಗೆ ಮಾತನಾಡುತ್ತಲೇ ಇಲ್ಲ. ಬಸವೇಶ್ವರರ ಹೆಸರಲ್ಲಿ ಪಾರಿತೋಷಕ ನೀಡುವವರು ಸಹ ಬಾಯಿ ಮುಚ್ಚಿ ಕುಳಿತಿದ್ದಾರೆ. ಅಹಿಂದ ಹಾಗೂ ವೀರಶೈವ ಸ್ವಾಮೀಜಿಗಳು ಸಹ ಮಾತನಾಡುತ್ತಿಲ್ಲ. ಹಾಗಾದರೆ ನಿಮ್ಮ ಬಾಯಿ ಕಟ್ಟಿರುವವರು ಯಾರು?. ಸಾಹಿತಿಗಳು, ಚಿಂತಕರು ಕಾಣುತ್ತಲೇ ಇಲ್ಲ. ಸಾಹಿತಿಗಳು ರಾಜ್ಯೋತ್ಸವ ಪ್ರಶಸ್ತಿಗಷ್ಟೇ ಸೀಮಿತವಾಗಿದ್ದು, ಏಕೆ ನೀವೆಲ್ಲ ಬಾಯಿ ಮುಚ್ಚಿಕೊಂಡು ಕುಳಿತಿದ್ದೀರಿ?" ಎಂದು ಕಿಡಿಕಾರಿದರು.
-
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications