ಮದ್ಯ ಮಾರಾಟ ಮಾಡಿ ಎಂದು ಸರ್ಕಾರಕ್ಕೆ ಎಚ್ ವಿಶ್ವನಾಥ್ ಮನವಿ
ಮೈಸೂರು, ಏಪ್ರಿಲ್ 22: ಮದ್ಯ ಮಾರಾಟ ನಿಷೇಧದ ಬಗ್ಗೆ ಮಾಜಿ ಸಚಿವ ಎಚ್ ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿವಾಹಿನಿಯೊಂದರ ಜೊತೆಗೆ ಈ ಬಗ್ಗೆ ಮಾತನಾಡಿರುವ ಅವರು ವಾರದಲ್ಲಿ ಎರಡು ದಿನ ಮದ್ಯ ಮಾರಾಟ ಮಾಡಬೇಕು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಮದ್ಯ ವ್ಯಸನಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ನಡೆಯುತ್ತಿದ್ದು, ಮದ್ಯ ಮಾರಾಟ ಮಾಡುವುದರಿಂದ ಇದನ್ನು ತಪ್ಪಿಸಬಹುದು ಎಂದು ಅವರು ಹೇಳಿದ್ದಾರೆ. ವಾರದಲ್ಲಿ ಎರಡು ದಿನ ಎಲ್ಲ ಬಾರ್, ವೈನ್ ಶಾಪ್ಗಳನ್ನು ತೆರೆದು, ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕು ಎಂದಿದ್ದಾರೆ.
ಇಂದು ಬಾರ್ಗಳು ಕಳ್ಳತನ ಆಗುತ್ತಿದೆ. ಮಾಲೀಕರು ತಮ್ಮ ಬಾರ್ ಅನ್ನು ತಾವೇ ಕಳ್ಳತನ ಮಾಡಿಸುವ ಸಂದರ್ಭ ಬಂದಿದೆ. ಕಳ್ಳ ಸಂತೆಯಲ್ಲಿ ಮದ್ಯ ಮಾರಾಟ ಆಗುತ್ತಿದೆ. ಹೀಗಾಗಿ ಸರ್ಕಾರ ವಾರದಲ್ಲಿ ಎರಡು ದಿನ ಮದ್ಯ ಮಾರಾಟ ಮಾಡುವುದಕ್ಕೆ ಅನುಮತಿ ನೀಡಬಹುದು ಎಂದು ಎಚ್ ವಿಶ್ವನಾಥ್ ಮನವಿ ಮಾಡಿದ್ದಾರೆ.

ಲಾಕ್ಡೌನ್ ಘೋಷಣೆ ಆದ ದಿನದಿಂದ ಕರ್ನಾಟಕದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ತರಲಾಗಿದೆ. ಮೇ 3ರ ವರೆಗೆ ರಾಜ್ಯದಲ್ಲಿ ಮದ್ಯ ಸಿಗುವುದಿಲ್ಲ ಎಂದು ಸರ್ಕಾರ ತಿಳಿಸಲಾಗಿದೆ. ಸರ್ಕಾರ ನಿರ್ಧಾರ ಮದ್ಯ ಪ್ರಿಯರಿಗೆ ಬೇಸರ ಉಂಟು ಮಾಡಿದೆ.
ಕರ್ನಾಟಕ ಮಾತ್ರವಲ್ಲದೆ ದೇಶದ ಬಹುತೇಕ ರಾಜ್ಯಗಳಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಹೀಗಾಗಿ ಮದ್ಯ ವ್ಯಸನಿಗಳ ಆತ್ಮಹತ್ಯೆ ಘಟನೆ ನಡೆಯುತ್ತಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications