ಅಡ್ಡಂಡ ಕಾರ್ಯಪ್ಪ ರಂಗಾಯಣದ ನಿರ್ದೇಶಕರಲ್ಲ: ಎಚ್.ವಿಶ್ವನಾಥ್
ಮೈಸೂರು, ನವೆಂಬರ್, 11: ಮೈಸೂರಿನ ರಂಗಾಯಣ ಮತ್ತೊಮ್ಮೆ ಸುದ್ದಿಯಲ್ಲಿದೆ. ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ರಚಿಸಿ ನಿರ್ದೇಶಿಸುತ್ತಿರುವ 'ಟಿಪ್ಪು ಕನಸುಗಳು' ಎನ್ನುವ ನಾಟಕ ಇದೀಗ ಪರ-ವಿರೋಧ ಚರ್ಚೆ ಹುಟ್ಟು ಹಾಕಿದೆ. ಹಾಗೆಯೇ ಮೈಸೂರಿನಲ್ಲಿ ನಡೆದ ಸಮಾರಂಭವೊಂದರಲ್ಲಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅಡ್ಡಂಡ ಕಾರ್ಯಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. "ಇವರು ರಂಗಾಯಣದ ನಿರ್ದೇಶಕ ಅಲ್ಲ, ಅಡ್ನಾಡಿ ಕಾರ್ಯಪ್ಪ ಎಂದು ವ್ಯಂಗ್ಯವಾಡಿದ್ದಾರೆ.
ಇತ್ತೀಚಿಗೆ ನಡೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅಡ್ಡಂಡ ಸಿ.ಕಾರ್ಯಪ್ಪ, ''ಟಿಪ್ಪು ಬಗ್ಗೆ ಕೃತಿ ಬರೆದಿದ್ದೇನೆ. ಬೆಂಗಳೂರಿನ ಆಯೋಧ್ಯಾ ಪ್ರಕಾಶನ ಪ್ರಕಟಿಸಿದ್ದು, ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಮುನ್ನುಡಿ ಬರೆದಿದ್ದಾರೆ. ನವೆಂಬರ್ 13ರಂದು ನಡೆಯುವ ಕಾರ್ಯಕ್ರಮದಲ್ಲಿ ಅವರೇ ಕೃತಿ ಲೋಕಾರ್ಪಣೆ ಮಾಡಲಿದ್ದಾರೆ. ಜೊತೆಗೆ ನವೆಂಬರ್ 20ರಂದು ಸಂಜೆ 6 ಗಂಟೆಗೆ ನಾಟಕದ ಪ್ರಥಮ ಪ್ರದರ್ಶನ ರಂಗಾಯಣದ ಭೂಮಿಗೀತದಲ್ಲಿ ನಡೆಯಲಿದೆ. ನಂತರ ನವೆಂಬರ್ 21, 24, 26, 27, 30 ಹಾಗೂ ಡಿಸೆಂಬರ್ 4ರಂದು ಈ ನಾಟಕ ಪ್ರದರ್ಶನ ಇರಲಿದೆ,'' ಎಂದು ಮಾಹಿತಿ ನೀಡಿದ್ದರು.

ಇದೀಗ ಟಿಪ್ಪು ಕೃತಿ ಹಾಗೂ ನಾಟಕವೇ ವಿವಾದದ ವಸ್ತುವಾಗಿದೆ.
ಅಡ್ಡಂಡ ಕಾರ್ಯಪ್ಪಗೆ ಎಚ್.ವಿಶ್ವನಾಥ್ ಟಾಂಗ್ ಮೈಸೂರಿನಲ್ಲಿ ನಡೆದ ಸಮಾರಂಭವೊಂದರಲ್ಲಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅಡ್ಡಂಡ ಕಾರ್ಯಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. "ಇವರು ರಂಗಾಯಣದ ನಿರ್ದೇಶಕ ಅಲ್ಲ, ಅಡ್ನಾಡಿ ಕಾರ್ಯಪ್ಪ ಎಂದು ವ್ಯಂಗ್ಯವಾಡಿದ್ದಾರೆ. ಅಡ್ಡಂಡ ಕಾರ್ಯಪ್ಪ ಪುಸ್ತಕ ಬರೆಯಲು ಟಿಪ್ಪು ಕಾಲದಲ್ಲಿ ಅವರು ಹುಟ್ಟಿದ್ದರಾ? ಟಿಪ್ಪು ನಿಜ ಕನಸುಗಳು ಎನ್ನುವ ನಾಟಕ ಪ್ರದರ್ಶನವನ್ನು ನಾನು ಖಂಡಿಸುತ್ತೇನೆ,'' ಎಂದು ಹರಿಹಾಯ್ದರು.

ನಾನು ಯಾವ ಪಕ್ಷದಲ್ಲಿ ಇದ್ದರೂ ಟಿಪ್ಪು ಬಗ್ಗೆ ಮಾತನಾಡುತ್ತೇನೆ. ಟಿಪ್ಪು ಸ್ವಾಭಿಮಾನಿ ಕನ್ನಡಿಗ, ಮೈಸೂರು ಹುಲಿ ಎಂದು ಹೊಗಳಿದ್ದಾರೆ. ಕೊಡಗಿನಲ್ಲಿ ಟಿಪ್ಪು 80 ಸಾವಿರ ಜನರ ಹತ್ಯಾಕಾಂಡ ನಡೆಸಿದ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಆಗ ಮೈಸೂರು ಸಾಮ್ರಾಜ್ಯದ ಜನಸಂಖ್ಯೆ ಎಷ್ಟಿತ್ತು ಎನ್ನುವ ಸಾಮಾನ್ಯ ಜ್ಞಾನ ಬೇಡವೇ? ನಂಜನಗೂಡು ಶ್ರೀಕಂಠೇಶ್ವರನಿಗೆ ಹಕೀಂ ನಂಜುಂಡ ಎಂದು ಹೆಸರಿಟ್ಟವರು ಯಾರು? ಯಾರೋ ಏನೋ ಹೇಳುತ್ತಾರೆ ಎಂದು ಚರಿತ್ರೆ ಬದಲಾಗುವುದಿಲ್ಲ,'' ಎಂದು ಆಕ್ರೋಶ ವ್ಯಕ್ತಪಡಿಸಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications