ಕ್ಷುಲ್ಲಕ ವಿಚಾರಕ್ಕೆ ರಾಜೀನಾಮೆ ಕೊಡಲ್ಲ, ಊಹಾಪೋಹಗಳಿಗೆ ತೆರೆ ಎಳೆದ ಎಚ್ ವಿಶ್ವನಾಥ್
Recommended Video

ಮೈಸೂರು, ಅಕ್ಟೋಬರ್. 24: "ಆಸ್ಪತ್ರೆಯಲ್ಲಿದ್ದಾಗ ನನ್ನನ್ನು ಬಂದು ನೋಡಿಲ್ಲ ಎಂದು ರಾಜೀನಾಮೆ ನೀಡುತ್ತಾರಾ"? ಇಂತಹ ಕ್ಷುಲ್ಲಕ ಕಾರಣಗಳಿಗೆಲ್ಲಾ ರಾಜೀನಾಮೆ ನೀಡುವಂತ ದಡ್ಡ ನಾನಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ತಿಳಿಸಿದರು.
ತಮ್ಮ ಮೇಲಿನ ಊಹಾಪೋಹಗಳಿಗೆ ಉತ್ತರಿಸಲು ಇಂದು ಸುದ್ದಿಗೋಷ್ಠಿ ಕರೆದು ಮಾತನಾಡಿದ ವಿಶ್ವನಾಥ್, ಕೆಲವು ಸ್ನೇಹಿತರು ಮಾಧ್ಯಮದ ಮೂಲಕ ಅಪಪ್ರಚಾರ ಮಾಡಿದ್ದಾರೆ. ನಾನು ಇಂತಹ ಊಹಾಪೋಹಗಳ ವಿರುದ್ಧ ಹೋರಾಟ ಮಾಡುವವನು.
ಕ್ಷುಲ್ಲಕ ವಿಚಾರಗಳಿಗೆ ರಾಜೀನಾಮೆ ಕೊಡುವ ವ್ಯಕ್ತಿತ್ವ ನನ್ನದಲ್ಲ. ಇಂತಹ ಪ್ರಚಾರ ಮಾಡುವ ಸ್ನೇಹಿತರಿಗೆ ಕೈ ಮುಗಿದು ಕೇಳುತ್ತೇನೆ, ಇದನ್ನು ನಿಲ್ಲಿಸಿ ಎಂದು ಮನವಿ ಮಾಡಿದರು.

ತಮಗೆ ಜೆಡಿಎಸ್ ನಲ್ಲಿ ಉಸಿರು ಕಟ್ಟುವ ವಾತಾವರಣವಿದೆ ಎನ್ನಲಾಗುತ್ತಿದೆಯೆಲ್ಲಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇದನ್ನೆಲ್ಲ ಹೇಳಿದವರು ಯಾರು? ಮಾಧ್ಯಮದವರೇ. ಪ್ರಚಾರ ಮಾಡಿ ಮತ್ತೆ ನಮ್ಮನ್ನೇ ಕೇಳುತ್ತೀರಿ. ಯಾರಿಗೂ ಹೀಗಾಗಿಲ್ಲ. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಜನರ ತೀರ್ಪಿನ ಮೇಲೆ ಇರುವುದು.
ಸಿದ್ದರಾಮಯ್ಯ, ಕುಮಾರಸ್ವಾಮಿ, ನಾವೆಲ್ಲ ಗೆದ್ದೇವೆಂದು ಹೇಳಲು ಯಾರು? ಇವೆಲ್ಲ ಮತದಾರರ ಮೇಲೆ ನಿಂತಿದೆ. ನಮ್ಮದು ಮತದಾರರ ಇಚ್ಛೆ ಎಂದರು.
ಜೆಡಿಎಸ್ ವರಿಷ್ಠರಾದ ದೇವೇಗೌಡರಿಗೆ ವಾಲ್ಮಿಕಿ ಪ್ರಶಸ್ತಿ ಲಭಿಸಿರುವುದು ಸಂತೋಷ. ವಾಲ್ಮಿಕಿ ಜನಾಂಗಕ್ಕೆ ಮೀಸಲಾತಿ ಕೊಡಿಸುವಲ್ಲಿ ದೇವೇಗೌಡರು ತುಂಬಾ ಶ್ರಮಿಸಿದ್ದಾರೆ. ಇದೇ ತಿಂಗಳು 29-30ಕ್ಕೆ ಶಿವಮೊಗ್ಗ ಉಪಚುನಾವಣಾ ಪ್ರಚಾರಕ್ಕೆ ಹೋಗುತ್ತೇನೆ ಎಂದು ವಿಶ್ವನಾಥ್ ಸ್ಪಷ್ಟಪಡಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications