ಸಿದ್ದು ವಿರುದ್ಧ ಅಸಮಾಧಾನ ಹೊರಹಾಕಿದ ವಿಶ್ವನಾಥ್ ಪುತ್ರ ಅಮಿತ್
ಮೈಸೂರು, ಮೇ 10:ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ತಮ್ಮ ತಂದೆ ವಿಶ್ವನಾಥ್ 71ನೇ ಹುಟ್ಟು ಹಬ್ಬದ ಅಂಗವಾಗಿ ರಾಮಾನುಜ ರಸ್ತೆಯಲ್ಲಿರುವ ಕಾಮೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ನಮ್ಮ ತಂದೆ ಮೇಲೆ ಸಿದ್ದರಾಮಯ್ಯನವರಿಗೆ ಇನ್ನು ಕೂಡ ಕೋಪವಿದೆ.ಹೀಗಾಗಿಯೇ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಕಡೆಗಣಿಸಿ ದೂರವಿರಿಸಿದ್ದಾರೆ.ಈ ವಯಸ್ಸಿನಲ್ಲೂ ನಮ್ಮ ತಂದೆಯ ಮನಸ್ಸು ನೋಯಿಸುವುದು ನನಗೆ ವೈಯಕ್ತಿಕವಾಗಿ ಬೇಸರವಾಗಿದೆ ಎಂದರು.

ಸಚಿವ ಜಿಟಿ ದೇವೇಗೌಡ ಜೊತೆ ಅವರು ಯಾವ ರೀತಿ ಹೊಂದಿಕೊಂಡಿದ್ದಾರೋ ಹಾಗೆಯೇ ನಮ್ಮ ತಂದೆಯವರ ಜೊತೆಯೂ ಹೊಂದಿಕೊಂಡು ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಕಿತ್ತು. ಆದರೆ ಅವರು ಹಾಗೆ ಮಾಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
36 ಸಾವಿರ ಮತಗಳಿಂದ ಸೋಲಿಸಿದ ಸಚಿವ ಜಿಟಿಡಿ ಜೊತೆ ವೇದಿಕೆ ಹಂಚಿಕೊಂಡು ಮಾತನಾಡುತ್ತಾರೆ. ಆದರೆ ಅವರನ್ನು ಕಾಂಗ್ರೆಸ್ ಗೆ ಕರೆತಂದು ಇಂದಿನ ಬೆಳವಣಿಗೆಗೆ ಕಾರಣರಾದ ನಮ್ಮ ತಂದೆಯನ್ನೇ ಕಡೆಗಣಿಸಿರುವುದು ಸರಿಯಲ್ಲ. ಹುಣಸೂರಿನ ಜನರು ಕೂಡ ತಂದೆ ಹಾಗೂ ಸಿದ್ದರಾಮಯ್ಯರವರನ್ನು ಒಟ್ಟಿಗೆ ನೋಡಲು ಇಷ್ಟಪಟ್ಟಿದ್ದರು. ಆದರೂ ಬರಲಿಲ್ಲ. ನಮ್ಮ ತಂದೆ ಸಿಟ್ಟು ಮಾಡಿಕೊಳ್ಳದೇ ಕಾಂಗ್ರೆಸ್ ಅಭ್ಯರ್ಥಿ ವಿಜಯ್ ಶಂಕರ್ ಪರ ಪ್ರಚಾರ ಮಾಡಿದ್ದಾರೆ ಎಂದರು.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications