ಕುಂಬಳಕಾಯಿ ಕಳ್ಳ ಯಾರೆಂಬುದು ಗೊತ್ತಾಗಲಿದೆ: ಅನರ್ಹ ಶಾಸಕ ವಿಶ್ವನಾಥ್
ಮೈಸೂರು, ಆಗಸ್ಟ್ 19: "ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯೇ ಪ್ರಮುಖ ರೂವಾರಿ" ಎಂದು ಅನರ್ಹ ಶಾಸಕ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸದ್ಯ ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿರುವ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಸಿಬಿಐ ಒಂದು ಸಾಂವಿಧಾನಿಕ ಸಂಸ್ಥೆ. ಇಂತಹ ದೊಡ್ಡ ಪ್ರಕರಣವನ್ನು ಸಿಬಿಐನಂತಹ ಸಂಸ್ಥೆಗಳಿಗೇ ವಹಿಸಬೇಕು. ಹೀಗಾಗಿ ಸರ್ಕಾರದ ಕ್ರಮ ಸ್ವಾಗತಾರ್ಹ" ಎಂದು ತಿಳಿಸಿದರು.

"ಬೇಹುಗಾರಿಕೆ ಸಂಸ್ಥೆ ಮುಖ್ಯಮಂತ್ರಿಗಳ ಅಧೀನದಲ್ಲಿಯೇ ಇರುತ್ತದೆ. ಅವರ ಅಣತಿಯಂತೆ ಈ ಫೋನ್ ಕದ್ದಾಲಿಕೆ ಕೆಲಸ ನಡೆದಿದೆ. ಈ ಕುರಿತು ಸೂಕ್ತ ತನಿಖೆ ನಡೆಯಲಿದ್ದು, ತನಿಖೆಯಿಂದ ಎಲ್ಲಾ ಸತ್ಯ ಹೊರಬರಲಿದೆ. ಪ್ರವಾಹದ ಸಂದರ್ಭವನ್ನೇ ಉಪಯೋಗಿಸಿಕೊಂಡು ಪ್ರಕರಣವನ್ನು ನಿರ್ಲಕ್ಷಿಸುವಂತೆ ಮಾಡುತ್ತಿದ್ದಾರೆ. ಆದರೆ ಪ್ರವಾಹ ಎಂದು ಎಲ್ಲರೂ ಹಸಿದುಕೊಂಡೇ ಇದ್ದಾರಾ? ಕುಂಬಳಕಾಯಿ ಕಳ್ಳ ಎಂದರೆ ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳಬೇಕು. ತನಿಖೆಯಿಂದ ಯಾರು ಕುಂಬಳಕಾಯಿ ಕಳ್ಳ ಎಂದು ತಿಳಿಯಲಿದೆ" ಎಂದು ಟಾಂಗ್ ನೀಡಿದರು.
"ಯಾವುದೇ ವಿಚಾರವನ್ನು ನಾನು ತಿರುಚಿಲ್ಲ. ಸಿದ್ದರಾಮಯ್ಯ ಸೇರಿದಂತೆ ಸಾಕಷ್ಟು ಕಾಂಗ್ರೆಸ್ ನಾಯಕರ ಮೇಲೆ ಸಿಬಿಐ ತನಿಖೆಯಾಗಲಿ" ಎಂದು ಒತ್ತಾಯ ಮಾಡಿದ್ದಾರೆ.
"ಫೋನ್ ಕದ್ದಾಲಿಕೆ ವಿಚಾರವನ್ನು ಮೊದಲು ಪ್ರಸ್ತಾಪ ಮಾಡಿದ್ದೇ ನಾನು. ಇದೀಗ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಸಿಬಿಐ ತನಿಖೆಗೆ ವಹಿಸಿದೆ. ಇದರಿಂದ ನನಗೂ ಸಂತೋಷವಾಗಿದೆ" ಎಂದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications