"ಅನರ್ಹ"ರ ಕುರಿತು ಪುಸ್ತಕ ಬರೆಯುತ್ತಾರಂತೆ ಈ ಪರಾಜಿತ ಅಭ್ಯರ್ಥಿ
ಮೈಸೂರು, ಡಿಸೆಂಬರ್ 17: ಹುಣಸೂರಿನ ಪರಾಜಿತ ಬಿಜೆಪಿ ಅಭ್ಯರ್ಥಿ ಇದೀಗ 'ಅನರ್ಹ' ಪುಸ್ತಕ ಬರೆಯುತ್ತಾರಂತೆ. ಅವರ ಈ ಪುಸ್ತಕದಲ್ಲಿ ಅನರ್ಹತೆ ಕುರಿತಾದ ರಾಜಕೀಯ ವಿಚಾರಗಳು ಇರಲಿವೆಯಂತೆ.
ಈ ಸಂಬಂಧ ನಿನ್ನೆ ಹುಣಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಎಚ್.ವಿಶ್ವನಾಥ್, "ಉಪ ಚುನಾವಣೆಯಲ್ಲಿ ಬಿಜೆಪಿಯೇತರ ಪಕ್ಷಗಳು ಹಾಗೂ ಮಾಧ್ಯಮಗಳು ನಮ್ಮ ಪಕ್ಷಾಂತರವನ್ನೇ ದೊಡ್ಡದಾಗಿ ಬಿಂಬಿಸಿದರು" ಎಂದು ಕಿಡಿಕಾರಿದರು.
"ನಾವು ಹೋದಲೆಲ್ಲಾ ಅನರ್ಹರು, ಅನರ್ಹರು ಎಂಬ ಬಿರುದು ನೀಡಿ ಮತದಾರರನ್ನು ದಿಕ್ಕು ತಪ್ಪಿಸಲು ಯತ್ನಿಸಿದರು" ಎಂದು ಕಿಡಿಕಾರಿದ ಅವರು "ಎರಡು ಕ್ಷೇತ್ರ ಹೊರತಾಗಿ 12 ಕ್ಷೇತ್ರಗಳಲ್ಲಿ ಅನರ್ಹರೇ ಜಯಭೇರಿ ಬಾರಿಸಿದ್ದೇವೆ" ಎಂದರು. "ವಿರೋಧಿಗಳು ಇದನ್ನು ಅರ್ಥಮಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಪಕ್ಷಾಂತರದ ನೈಜತೆಯನ್ನು ಜನರಿಗೆ ಅರ್ಥೈಸಲು ಪುಸ್ತಕ ಬರೆಯುತ್ತೇನೆ" ಎಂದು ಪ್ರಕಟಿಸಿದರು.

"ಅನರ್ಹ ಶಾಸಕರನ್ನು ಸೋಲಿಸಿ ಎಂದು ಬೊಬ್ಬೆ ಇಡುತ್ತಿದ್ದ ಕಾಂಗ್ರೆಸ್-ಜೆಡಿಎಸ್ ನಾಯಕರು ಹಾಗೂ ಪ್ರಗತಿಪರರಿಗೆ ರಾಜ್ಯದ ಮತದಾರ ತಕ್ಕ ಪ್ರತ್ಯುತ್ತರ ನೀಡಿದ್ದಾನೆ. 12 ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡುವ ಮೂಲಕ ನಾವು ಅನರ್ಹರಲ್ಲ, ಅರ್ಹರು ಎಂಬುದು ಸಾಬೀತಾಗಿದೆ" ಎಂದು ತಿರುಗೇಟು ನೀಡಿದರು.
"ಹುಣಸೂರು ತಾಲೂಕಿನಲ್ಲಿ 36 ಸಾವಿರ ಜೆಡಿಎಸ್ ಮತಗಳಿದ್ದು, ನಾನು ಹಿಂದಿನ ಚುನಾವಣೆಯಲ್ಲಿ 90 ಸಾವಿರ ಮತ ಗಳಿಸಿದ್ದೆ, ಆದರೆ, ಗೆಲ್ಲಿಸಿದ್ದು ತಾವೇ ಎಂದು ಬಿಂಬಿಸಿಕೊಳ್ಳುವ ಜೆಡಿಎಸ್ನವರಿಗೆ ಕ್ಷೇತ್ರದಲ್ಲಿ ನನ್ನದೂ 54 ಸಾವಿರ ಮತಗಳಿವೆ ಎಂಬುದು ತಿಳಿಯಲಿ. ನಾನು ಸೋತರೂ ಬಿಜೆಪಿಯನ್ನು ಬಲಪಡಿಸಿದ್ದೇನೆಂಬ ಹೆಮ್ಮೆ ಇದೆ" ಎಂದರು.
ತಮ್ಮ ಅನುಭವವನ್ನು ಬಳಸಿಕೊಂಡು ಹುಣಸೂರಿನ ಸಮಗ್ರ ಅಭಿವೃದ್ದಿಗೆ ಬದ್ಧನಾಗಿರುತ್ತೇನೆ ಎಂದು ಘೋಷಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications