"ಅನರ್ಹ"ರ ಕುರಿತು ಪುಸ್ತಕ ಬರೆಯುತ್ತಾರಂತೆ ಈ ಪರಾಜಿತ ಅಭ್ಯರ್ಥಿ
ಮೈಸೂರು, ಡಿಸೆಂಬರ್ 17: ಹುಣಸೂರಿನ ಪರಾಜಿತ ಬಿಜೆಪಿ ಅಭ್ಯರ್ಥಿ ಇದೀಗ 'ಅನರ್ಹ' ಪುಸ್ತಕ ಬರೆಯುತ್ತಾರಂತೆ. ಅವರ ಈ ಪುಸ್ತಕದಲ್ಲಿ ಅನರ್ಹತೆ ಕುರಿತಾದ ರಾಜಕೀಯ ವಿಚಾರಗಳು ಇರಲಿವೆಯಂತೆ.
ಈ ಸಂಬಂಧ ನಿನ್ನೆ ಹುಣಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಎಚ್.ವಿಶ್ವನಾಥ್, "ಉಪ ಚುನಾವಣೆಯಲ್ಲಿ ಬಿಜೆಪಿಯೇತರ ಪಕ್ಷಗಳು ಹಾಗೂ ಮಾಧ್ಯಮಗಳು ನಮ್ಮ ಪಕ್ಷಾಂತರವನ್ನೇ ದೊಡ್ಡದಾಗಿ ಬಿಂಬಿಸಿದರು" ಎಂದು ಕಿಡಿಕಾರಿದರು.
"ನಾವು ಹೋದಲೆಲ್ಲಾ ಅನರ್ಹರು, ಅನರ್ಹರು ಎಂಬ ಬಿರುದು ನೀಡಿ ಮತದಾರರನ್ನು ದಿಕ್ಕು ತಪ್ಪಿಸಲು ಯತ್ನಿಸಿದರು" ಎಂದು ಕಿಡಿಕಾರಿದ ಅವರು "ಎರಡು ಕ್ಷೇತ್ರ ಹೊರತಾಗಿ 12 ಕ್ಷೇತ್ರಗಳಲ್ಲಿ ಅನರ್ಹರೇ ಜಯಭೇರಿ ಬಾರಿಸಿದ್ದೇವೆ" ಎಂದರು. "ವಿರೋಧಿಗಳು ಇದನ್ನು ಅರ್ಥಮಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಪಕ್ಷಾಂತರದ ನೈಜತೆಯನ್ನು ಜನರಿಗೆ ಅರ್ಥೈಸಲು ಪುಸ್ತಕ ಬರೆಯುತ್ತೇನೆ" ಎಂದು ಪ್ರಕಟಿಸಿದರು.

"ಅನರ್ಹ ಶಾಸಕರನ್ನು ಸೋಲಿಸಿ ಎಂದು ಬೊಬ್ಬೆ ಇಡುತ್ತಿದ್ದ ಕಾಂಗ್ರೆಸ್-ಜೆಡಿಎಸ್ ನಾಯಕರು ಹಾಗೂ ಪ್ರಗತಿಪರರಿಗೆ ರಾಜ್ಯದ ಮತದಾರ ತಕ್ಕ ಪ್ರತ್ಯುತ್ತರ ನೀಡಿದ್ದಾನೆ. 12 ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡುವ ಮೂಲಕ ನಾವು ಅನರ್ಹರಲ್ಲ, ಅರ್ಹರು ಎಂಬುದು ಸಾಬೀತಾಗಿದೆ" ಎಂದು ತಿರುಗೇಟು ನೀಡಿದರು.
"ಹುಣಸೂರು ತಾಲೂಕಿನಲ್ಲಿ 36 ಸಾವಿರ ಜೆಡಿಎಸ್ ಮತಗಳಿದ್ದು, ನಾನು ಹಿಂದಿನ ಚುನಾವಣೆಯಲ್ಲಿ 90 ಸಾವಿರ ಮತ ಗಳಿಸಿದ್ದೆ, ಆದರೆ, ಗೆಲ್ಲಿಸಿದ್ದು ತಾವೇ ಎಂದು ಬಿಂಬಿಸಿಕೊಳ್ಳುವ ಜೆಡಿಎಸ್ನವರಿಗೆ ಕ್ಷೇತ್ರದಲ್ಲಿ ನನ್ನದೂ 54 ಸಾವಿರ ಮತಗಳಿವೆ ಎಂಬುದು ತಿಳಿಯಲಿ. ನಾನು ಸೋತರೂ ಬಿಜೆಪಿಯನ್ನು ಬಲಪಡಿಸಿದ್ದೇನೆಂಬ ಹೆಮ್ಮೆ ಇದೆ" ಎಂದರು.
ತಮ್ಮ ಅನುಭವವನ್ನು ಬಳಸಿಕೊಂಡು ಹುಣಸೂರಿನ ಸಮಗ್ರ ಅಭಿವೃದ್ದಿಗೆ ಬದ್ಧನಾಗಿರುತ್ತೇನೆ ಎಂದು ಘೋಷಿಸಿದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications