MUDA Site: ಎಚ್. ವಿಶ್ವನಾಥ್ ಅವರ ಪತ್ನಿಗೂ ಬದಲಿ ನಿವೇಶನ ನೀಡಲಾಗಿದೆ: ಮುಡಾ ಅಧ್ಯಕ್ಷ ಮರಿಗೌಡ ಆರೋಪ
ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡುವ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ತಮ್ಮ ಪತ್ನಿಗೆ ದೇವನೂರು ಮೂರನೇ ಹಂತದ ಬಡಾವಣೆಯಲ್ಲಿ ಬದಲಿ ನಿವೇಶನ ಕೊಡಿಸಿದ್ದಾರೆ ಎಂದು ಮುಡಾ ಅಧ್ಯಕ್ಷ ಕೆ.ಮರಿಗೌಡ ಆರೋಪಿಸಿದ್ದಾರೆ.
ನಗರದ ಜಲದರ್ಶಿನಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಪತ್ನಿ ಹೆಸರಿನಲ್ಲಿಯೇ ಬದಲಿ ನಿವೇಶನ ಪಡೆದಿರುವ ಎಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರರ ವಿರುದ್ಧ ಟೀಕೆ ಮಾಡುತ್ತಿರುವುದು ರಾಜಕೀಯ ದಿವಾಳಿತನವನ್ನು ತೋರಿಸುತ್ತದೆ. ವಿಶ್ವನಾಥ್ ಅವರ ಪತ್ನಿ ಶಾಂತಮ್ಮ ಅವರು ದೇವನೂರು ಮೂರನೇ ಹಂತದಲ್ಲಿ 2525 ಸಂಖ್ಯೆಯ 40*60 ಚದರ ಅಡಿ ನಿವೇಶನ ಪಡೆದಿದ್ದರು. ಬಳಿಕ ಅದನ್ನು ರಿಂಗ್ ರಸ್ತೆಗೆ ಸಮೀಪ ಇರುವ 307 ಸಂಖ್ಯೆಯ ನಿವೇಶನಕ್ಕೆ ಬದಲಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಶಾಸಕ ಹರೀಶ್ಗೌಡ ಮಾತನಾಡಿ, ಸಿಎಂ ಪತ್ನಿ ಪಾರ್ವತಿ ಅವರು ಪರಭಾರೆಯಾದ ಜಮೀನು ವಾಪಾಸು ಪಡೆಯಲು ಮುಡಾಗೆ 2014 ರಲ್ಲೇ ಅರ್ಜಿ ಹಾಕಿದ್ದಾರೆ. ಸಿದ್ದರಾಮಯ್ಯ ಅವರಿಗೆ ಭೂಮಿ ಆಸೆ ಇದ್ದಿದ್ದರೆ 2014ರಲ್ಲೇ ಸಿಎಂ ಆಗಿದ್ದಾಗಲೇ ಜಮೀನು ವಶಪಡಿಸಿಕೊಳ್ಳಬಹುದಿತ್ತು ಅಥವಾ ಬದಲಿ ನಿವೇಶನ ಪಡೆದುಕೊಳ್ಳಬಹುದಿತ್ತು. ಆದರೆ, ಅವರು ಹಾಗೆ ಮಾಡದೆ ಕಾನೂನಾತ್ಮಕವಾಗಿ ನಡೆಯಲು ಅನುವು ಮಾಡಿಕೊಟ್ಟರು ಎಂದು ಹೇಳಿದರು.
ತನಿಖೆ ವರದಿ ಬರಲಿ
50:50 ಅನುಪಾತದಲ್ಲಿ ಎಷ್ಟು ನಿವೇಶನಗಳನ್ನು ಹಂಚಲಾಗಿದೆ ಎಂಬ ಮಾಹಿತಿಯನ್ನು ಮುಂದಿನ ಮುಡಾ ಸಭೆಗೆ ಇಡಲಾಗುವುದು. ಯಾರೇ ಅಕ್ರಮ ಎಸಗಿದ್ದರೂ ಸರಕಾರ ಕ್ರಮ ಕೈಗೊಳ್ಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಕಾನೂನಾತ್ಮಕವಾಗಿಯೇ ನಿವೇಶನ ಹಂಚಿಕೆ ಆಗಿದೆ ಎಂದು ಸಮರ್ಥಿಸಿಕೊಂಡರು
ಮುಂದುವರಿದ ವಿಚಾರಣೆ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50:50 ನಿವೇಶನ ಹಂಚಿಕೆಗೆ ಸಂಬಂಧಿಸಿದ ಅಕ್ರಮಗಳ ಕುರಿತ ವಿಚಾರಣೆಗಾಗಿ ರಾಜ್ಯ ಸರಕಾರ ನೇಮಿಸಿರುವ ತನಿಖಾ ಸಮಿತಿಯು ಸೋಮವಾರ ವಿಚಾರಣೆ ಮುಂದುವರಿಸಿದೆ. ಜುಲೈ 3ರಿಂದ ನಾಲ್ಕು ದಿನ ಬಿಡದೆ ಕಡತಗಳ ಪರಿಶೀಲನೆ ನಡೆಸಿದ್ದ ತನಿಖಾ ತಂಡದ ಅಧಿಕಾರಿಗಳು, ಭಾನುವಾರ ರಜಾ ದಿನವಾಗಿದ್ದರಿಂದ ವಿಚಾರಣೆಗೆ ಬ್ರೇಕ್ ನೀಡಿದ್ದರು. ಸೋಮವಾರ ವಿಚಾರಣೆ ಆರಂಭಿಸಿ ತನಿಖೆ ತೀವ್ರಗೊಳಿಸಿದ್ದಾರೆ.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications