MUDA Site: ಎಚ್. ವಿಶ್ವನಾಥ್ ಅವರ ಪತ್ನಿಗೂ ಬದಲಿ ನಿವೇಶನ ನೀಡಲಾಗಿದೆ: ಮುಡಾ ಅಧ್ಯಕ್ಷ ಮರಿಗೌಡ ಆರೋಪ
ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡುವ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ತಮ್ಮ ಪತ್ನಿಗೆ ದೇವನೂರು ಮೂರನೇ ಹಂತದ ಬಡಾವಣೆಯಲ್ಲಿ ಬದಲಿ ನಿವೇಶನ ಕೊಡಿಸಿದ್ದಾರೆ ಎಂದು ಮುಡಾ ಅಧ್ಯಕ್ಷ ಕೆ.ಮರಿಗೌಡ ಆರೋಪಿಸಿದ್ದಾರೆ.
ನಗರದ ಜಲದರ್ಶಿನಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಪತ್ನಿ ಹೆಸರಿನಲ್ಲಿಯೇ ಬದಲಿ ನಿವೇಶನ ಪಡೆದಿರುವ ಎಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರರ ವಿರುದ್ಧ ಟೀಕೆ ಮಾಡುತ್ತಿರುವುದು ರಾಜಕೀಯ ದಿವಾಳಿತನವನ್ನು ತೋರಿಸುತ್ತದೆ. ವಿಶ್ವನಾಥ್ ಅವರ ಪತ್ನಿ ಶಾಂತಮ್ಮ ಅವರು ದೇವನೂರು ಮೂರನೇ ಹಂತದಲ್ಲಿ 2525 ಸಂಖ್ಯೆಯ 40*60 ಚದರ ಅಡಿ ನಿವೇಶನ ಪಡೆದಿದ್ದರು. ಬಳಿಕ ಅದನ್ನು ರಿಂಗ್ ರಸ್ತೆಗೆ ಸಮೀಪ ಇರುವ 307 ಸಂಖ್ಯೆಯ ನಿವೇಶನಕ್ಕೆ ಬದಲಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಶಾಸಕ ಹರೀಶ್ಗೌಡ ಮಾತನಾಡಿ, ಸಿಎಂ ಪತ್ನಿ ಪಾರ್ವತಿ ಅವರು ಪರಭಾರೆಯಾದ ಜಮೀನು ವಾಪಾಸು ಪಡೆಯಲು ಮುಡಾಗೆ 2014 ರಲ್ಲೇ ಅರ್ಜಿ ಹಾಕಿದ್ದಾರೆ. ಸಿದ್ದರಾಮಯ್ಯ ಅವರಿಗೆ ಭೂಮಿ ಆಸೆ ಇದ್ದಿದ್ದರೆ 2014ರಲ್ಲೇ ಸಿಎಂ ಆಗಿದ್ದಾಗಲೇ ಜಮೀನು ವಶಪಡಿಸಿಕೊಳ್ಳಬಹುದಿತ್ತು ಅಥವಾ ಬದಲಿ ನಿವೇಶನ ಪಡೆದುಕೊಳ್ಳಬಹುದಿತ್ತು. ಆದರೆ, ಅವರು ಹಾಗೆ ಮಾಡದೆ ಕಾನೂನಾತ್ಮಕವಾಗಿ ನಡೆಯಲು ಅನುವು ಮಾಡಿಕೊಟ್ಟರು ಎಂದು ಹೇಳಿದರು.
ತನಿಖೆ ವರದಿ ಬರಲಿ
50:50 ಅನುಪಾತದಲ್ಲಿ ಎಷ್ಟು ನಿವೇಶನಗಳನ್ನು ಹಂಚಲಾಗಿದೆ ಎಂಬ ಮಾಹಿತಿಯನ್ನು ಮುಂದಿನ ಮುಡಾ ಸಭೆಗೆ ಇಡಲಾಗುವುದು. ಯಾರೇ ಅಕ್ರಮ ಎಸಗಿದ್ದರೂ ಸರಕಾರ ಕ್ರಮ ಕೈಗೊಳ್ಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಕಾನೂನಾತ್ಮಕವಾಗಿಯೇ ನಿವೇಶನ ಹಂಚಿಕೆ ಆಗಿದೆ ಎಂದು ಸಮರ್ಥಿಸಿಕೊಂಡರು
ಮುಂದುವರಿದ ವಿಚಾರಣೆ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50:50 ನಿವೇಶನ ಹಂಚಿಕೆಗೆ ಸಂಬಂಧಿಸಿದ ಅಕ್ರಮಗಳ ಕುರಿತ ವಿಚಾರಣೆಗಾಗಿ ರಾಜ್ಯ ಸರಕಾರ ನೇಮಿಸಿರುವ ತನಿಖಾ ಸಮಿತಿಯು ಸೋಮವಾರ ವಿಚಾರಣೆ ಮುಂದುವರಿಸಿದೆ. ಜುಲೈ 3ರಿಂದ ನಾಲ್ಕು ದಿನ ಬಿಡದೆ ಕಡತಗಳ ಪರಿಶೀಲನೆ ನಡೆಸಿದ್ದ ತನಿಖಾ ತಂಡದ ಅಧಿಕಾರಿಗಳು, ಭಾನುವಾರ ರಜಾ ದಿನವಾಗಿದ್ದರಿಂದ ವಿಚಾರಣೆಗೆ ಬ್ರೇಕ್ ನೀಡಿದ್ದರು. ಸೋಮವಾರ ವಿಚಾರಣೆ ಆರಂಭಿಸಿ ತನಿಖೆ ತೀವ್ರಗೊಳಿಸಿದ್ದಾರೆ.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications