'ನಾವು ಎಲ್ಲದಕ್ಕೂ ಮುಹೂರ್ತವಿಟ್ಟಿದ್ದು ಇಲ್ಲೇ, ಈಗ ಹೊಸದಾಗಿ ಇಟ್ಟಾಗಿದೆ'- ಎಚ್. ವಿಶ್ವನಾಥ್
ಮೈಸೂರು, ಜೂ. 02: ''ನಾವು ಎಲ್ಲ ವಿಚಾರದಲ್ಲೂ ಮುಹೂರ್ತವಿಟ್ಟಿದ್ದು ಶ್ರೀನಿವಾಸ್ ಪ್ರಸಾದ್ ಮನೆಯಲ್ಲೇ, ಈಗಲೂ ಮುಹೂರ್ತವಿಟ್ಟಾಗಿದೆ. ಆದರೆ ಸದ್ಯಕ್ಕೆ ಯಾವುದಕ್ಕೆ ಎಂದು ಹೇಳುವುದಿಲ್ಲ'' ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೊಸ ಬಾಂಬ್ ಹಾಕಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಶ್ರೀನಿವಾಸ್ ಪ್ರಸಾದ್ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ವಿಶ್ವನಾಥ್, ''ಸಿದ್ದರಾಮಯ್ಯ ಸೋಲಿಗೆ ನಾವು ಇಲ್ಲಿಯೇ ಮುಹೂರ್ತ ಇಟ್ಟಿದ್ದು, ಸಮ್ಮಿಶ್ರ ಸರ್ಕಾರ ಪತನಕ್ಕೂ ಇಲ್ಲೇ ಮುಹೂರ್ತವಿಟ್ಟಿದ್ದು. ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದಕ್ಕೂ ಮುಹೂರ್ತ ಇಟ್ಟಿದ್ದು ಇಲ್ಲಿಯೇ'' ಎಂದು ವಿಶ್ವನಾಥ್ ಹೇಳಿದ್ದಾರೆ.
''ನಮ್ಮ ಹಲವು ಮುಹೂರ್ತಕ್ಕೆ ಶ್ರೀನಿವಾಸ್ ಪ್ರಸಾದ್ ಮನೆ ಸಾಕ್ಷಿಯಾಗಿದ್ದು, ಆ ನಂತರದ ಎಲ್ಲಾ ಬೆಳವಣಿಗೆಗಳಿಗೂ ಸಾಕ್ಷಿಯಾಗಿದೆ ಎಂದು ಹೇಳಿದ ವಿಶ್ವನಾಥ್, ನಾವು ಈಗಲೂ ಮನೆಯಲ್ಲೇ ಹೊಸದಾಗಿ ಮುಹೂರ್ತ ಇಟ್ಟಿದ್ದೇವೆ. ರಾಜಕೀಯ ಹಾಗೂ ಜಿಲ್ಲೆಯ ವಿದ್ಯಮಾನದ ಬಗ್ಗೆ ಪ್ರಸಾದ್ ಜೊತೆ ಮಾತನಾಡಿದ್ದೇವೆ. ಆದರೆ ಯಾವ ಮುಹೂರ್ತ ಎಂದು ಸದ್ಯಕ್ಕೆ ಹೇಳಲ್ಲ'' ಎನ್ನುವ ಮೂಲಕ ಕುತೂಹಲ ಹೆಚ್ಚಿಸಿದ್ದಾರೆ.

''ರಾಜ್ಯದ ರಾಜಕಾರಣದಲ್ಲಿ ಹಲವು ಗೊಂದಲಗಳಿವೆ. ಕೆಲವರು ದೆಹಲಿಗೆ ಹೋಗಿ ಬಂದಿದ್ದಾರೆ, ಇನ್ನೂ ಕೆಲವರು ಈ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಆದರೆ ಈ ಬಗ್ಗೆ ಯಡಿಯೂರಪ್ಪ ಏನೂ ಮಾತನಾಡುತ್ತಿಲ್ಲ'' ಎಂದು ಕೂಡಾ ಹೇಳಿದ್ದಾರೆ ವಿಶ್ವನಾಥ್.
ಇನ್ನು ''ಯಾರು ಏನೇ ಹೇಳಿಕೆ ನೀಡಿದರೂ, ಎಲ್ಲಿಗೆ ಹೋಗಿ ಬಂದರೂ ನಿರ್ಧಾರ ಕೈಗೊಳ್ಳುವುದು ಹೈಕಮಾಂಡ್ ಎಂದು ಹೇಳಿದ ವಿಶ್ವನಾಥ್ ಹೈಕಮಾಂಡ್ ಸೂಕ್ತ ತೀರ್ಮಾನ ಮಾಡುತ್ತದೆ'' ಎಂದು ವಿಶ್ವಾಸ ವ್ಯಕ್ತಪಡಿಸಿದರು.
''ಮುಖ್ಯಮಂತ್ರಿ ಯಡಿಯೂರಪ್ಪಗೆ ಆರೋಗ್ಯ ಸರಿಯಿಲ್ಲ. ಅವರ ಆರೋಗ್ಯ ಸರಿಯಾಗಬೇಕಿದೆ. ಅದರೊಂದಿಗೆ ರಾಜ್ಯದ ಆರೋಗ್ಯವೂ ಸರಿಯಾಗಬೇಕಿದೆ. ಈ ನಿಟ್ಟಿನಲ್ಲಿ ಹೈಕಮಾಂಡ್ ಶೀಘ್ರವೇ ಒಂದು ನಿರ್ಧಾರ ಕೈಗೊಳ್ಳಬೇಕು'' ಎಂದು ಕೂಡಾ ವಿಶ್ವನಾಥ್ ಹೇಳಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications