ಎಚ್ 1 ಎನ್1: ಮೈಸೂರಿನಲ್ಲಿ 27 ಶಂಕಿತ ಪ್ರಕರಣಗಳು ಪತ್ತೆ
ಮೈಸೂರು, ಫೆಬ್ರವರಿ 8 : ಮೈಸೂರಿನಲ್ಲಿ ಹೆಚ್1 ಎನ್1 ಸೋಂಕು ಪ್ರಕರಣ ಪತ್ತೆಯಾಗಿದ್ದು, ಈ ಬಗ್ಗೆ ಜಿಲ್ಲಾ ಸರ್ವೆಕ್ಷಣಾ ಘಟಕ ಪರಿವೀಕ್ಷಣಾ ವರದಿ ನೀಡಿದೆ. ಇದರಲ್ಲಿ 27 ಶಂಕಿತ ಪ್ರಕರಣಗಳು ಪತ್ತೆಯಾಗಿವೆ.
ಮೈಸೂರು ಜಿಲ್ಲೆಯಲ್ಲಿ 2016 ನೇ ಸಾಲಿನಲ್ಲಿ 76 ಶಂಕಿತ ಪ್ರಕರಣಗಳಲ್ಲಿ 5 ಪ್ರಕರಣಗಳು ಸೀಜನಲ್ ಹೆಚ್1ಎನ್1 ಇನ್ಫ್ಲೂಯೆಂಜಾ 'ಎ' ಪ್ರಕರಣಗಳು ಧೃಢೀಕೃತವಾಗಿತ್ತು.[191 ಜನರನ್ನು ಬಲಿ ತೆಗೆದುಕೊಂಡ ಎಚ್ 1 ಎನ್ 1]
ಇದೀಗ ರೋಗಿಗಳು ಚಿಕಿತ್ಸೆಗೆ ಸ್ಪಂದಿಸಿ ಗುಣಮುಖರಾಗಿದ್ದಾರೆ. 2017ರ ಆರಂಭದಲ್ಲೇ ಮತ್ತೆ ಕೆಲವು ಕಡೆ ಹೆಚ್ 1 ಎನ್1 ಕಾಣಿಸಿಕೊಂಡಿದ್ದು, ಜನರ ನಿದ್ದೆಗೆಡಿಸಿದೆ. ಜಿಲ್ಲಾ ಸರ್ವೇಕ್ಷಣಾ ಘಟಕ ದಿಂದ ನಡೆಸಿದ ಪರಿವೀಕ್ಷಣೆಯಲ್ಲಿ 27 ಶಂಕಿತ ಪ್ರಕರಣಗಳಿರುವುದು ಪತ್ತೆಯಾಗಿದೆ. ಇದು ಮೈಸೂರು ಮತ್ತು ಮೈಸೂರು ಗ್ರಾಮಾಂತರ ಪ್ರದೇಶದಲ್ಲಿ ನಡೆಸಿದ ಪರಿವೀಕ್ಷಣೆ ಎಂದು ಘಟಕ ತಿಳಿಸಿದೆ.

2017ರ ಪ್ರಾರಂಭದಲ್ಲೇ 27 ಶಂಕಿತ ಪ್ರಕರಣಗಳು
2017 ನೇ ಸಾಲಿನ ಜನವರಿ ಮಾಹೆಯಲ್ಲೇ 27 ಶಂಕಿತ ಪ್ರಕರಣಗಳು ಕಂಡು ಬಂದಿವೆ. ಇವುಗಳಲ್ಲಿ 8 ಧೃಢೀಕೃತ ಸೀಜನಲ್ ಹೆಚ್1ಎನ್1 ಇನ್ಫ್ಲೂಯೆಂಜಾ 'ಎ' ಪ್ರಕರಣಗಳು ವರದಿಯಾಗಿದೆ. ಈ ಪೈಕಿ 4 ರೋಗಿಗಳು ಚಿಕಿತ್ಸೆಗೆ ಸ್ಪಂದಿಸಿ ಗುಣಮುಖರಾಗಿದ್ದಾರೆ. ಇನ್ನುಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾ ಮುಖ್ಯ ಅಧಿಕಾರಿ ಕುಸುಮ ಒನ್ ಇಂಡಿಯಾ ಕನ್ನಡಕ್ಕೆ ಮಾಹಿತಿ ನೀಡಿದ್ದಾರೆ.

ಮೈಸೂರಿನ ಯಾವ ಪ್ರದೇಶದಲ್ಲಿ ಹೆಚ್ಚು
ಕೇವಲ 15 ದಿನದಲ್ಲಿ ನಗರ ಪ್ರದೇಶದಲ್ಲಿ 5 ಪ್ರಕರಣ ಹಾಗೂ ಗ್ರಾಮಾಂತರ ಭಾಗದಲ್ಲಿ 3 ಪ್ರಕರಣಗಳು ಕಂಡು ಬಂದಿವೆ. ಅವುಗಳಲ್ಲಿ ಪ್ರಮುಖವಾಗಿ, ಹುಣಸೂರಿನ ಹನಗೂಡು, ಮೈಸೂರಿನ ದಟ್ಟಗಳ್ಳಿ, ಹೆಬ್ಬಾಳು, ಸುಬ್ರಮಣ್ಯನಗರ ಹಾಗೂ ಕುವೆಂಪುನಗರ ಹಾಗೂ ಬೋಗಾದಿ 2ನೇ ಹಂತ, ನಂಜನಗೂಡಿನ ಬೊಕ್ಕಹಳ್ಳಿ, ಟಿವಿಎಸ್ ನಗರದಲ್ಲಿ ಪ್ರಕರಣಗಳು ಪತ್ತೆಯಾಗಿವೆ. ಇಲ್ಲಿ ತಲಾ ಒಂದೊಂದು ಪ್ರಕರಣಗಳು ಕಂಡು ಬಂದಿದೆ.

ಹೇಗೆ ಹರಡುತ್ತೆ ಈ ರೋಗ ?
ಹವಾಮಾನ ವೈಪರಿತ್ಯದಿಂದ ಹೆಚ್1ಎನ್1 ಇನ್ಫ್ಲೂಯೆಂಜಾ ಹೆಚ್,3, ಇನ್ಫ್ಲೂಯೆಂಜಾ ಬಿ ವೈರಾಣುಗಳಿಂದ ಈ ರೋಗದ ಲಕ್ಷಣ ಕಂಡು ಬರುತ್ತದೆ. ಪ್ರಮುಖವಾಗಿ ಕೆಮ್ಮುವುದರಿಂದ, ಸೀನುವುದರಿಂದ ಆ ವೇಳೆ ವೈರಾಣು ಕಣಗಳು ಗಾಳಿಯಲ್ಲಿ ಹರಡಿ ಈ ಸೋಂಕು ಕಂಡು ಬರುತ್ತವೆ. ಮಾತ್ರವಲ್ಲ, ಇದು ನಿತ್ಯದ ವಸ್ತುಗಳ ಮೇಲೆ ಕುಳಿತಾಗ ಅದರ ಮೇಲೆ ನಮ್ಮ ಸ್ಪರ್ಶ ಮಾಡಿದಾಗ ನಮ್ಮ ಕೈಗಳಿಂದ ಮುಖ ಹಾಗೂ ಮೂಗಿನ ಮೇಲಿಟ್ಟಾಗ ಈ ಸೋಂಕು ಹರಡುವ ಸಾಧ್ಯತೆ ಇವೆ.

ಎಚ್ಚರಿಕೆ ಕ್ರಮ ಅಗತ್ಯ
ನಾವು ಹೊರಗಡೆ ಹೋದ ವೇಳೆ ಸಂಪೂರ್ಣವಾಗಿ ಧೂಳಿನಲ್ಲೇ ಇರುವ ಕಾರಣ, ಮನೆಗೆ ಬಂದ ಕೂಡಲೇ ಸೋಪಿನಿಂದ ಕೈತೊಳೆಯಬೇಕು. ಮುನ್ನೆಚ್ಚರಿಕೆ ಕ್ರಮವಾಗಿ ಆಲ್ಕೋಹಾಲ್ ಕಟೆಂಟ್ವುಳ್ಳ ಹ್ಯಾಂಡ್ ವಾಶನರ್ನಿಂದ ಕೈತೊಳೆಯುವುದು ಸೂಕ್ತ. ಜೊತೆಯಲ್ಲಿ ಮಾಸ್ಕ್ ಉಪಯೋಗ ಮಾಡಿದರೆ ಮತ್ತಷ್ಟು ಒಳ್ಳೆಯದು. ದಿನನಿತ್ಯದ ವಸ್ತುಗಳನ್ನು ಚೆನ್ನಾಗಿ ತೊಳೆಯಬೇಕು.

ಯಾರಿಗೆ ಬೇಗ ಹರಡುತ್ತದೆ
ಇನ್ನೂ ಸಾಮಾನ್ಯವಾಗಿ ಹೃದಯ ಸಂಬಂಧಿ ಕಾಯಿಲೆ ಅಥವಾ ಶ್ವಾಸಕೋಶದ ಸೋಂಕು ಮಧುಮೇಹದ ರೋಗಿಗಳಿಗೆ ಇದು ಬೇಗನೇ ಹರಡುತ್ತದೆ. ಈ ವೇಳೆ ಅತಿಯಾದ ಜ್ವರ, ನೆಗಡಿ, ಕೆಮ್ಮು ಉಂಟಾಗಿ ಈ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಈ ವೇಳೆ ಸರ್ಕಾರಿ ಆಸ್ಪತ್ರೆಗಳಲ್ಲಿ ಟ್ಯಾಮಿಫ್ಲೋ ಮಾತ್ರೆಗಳನ್ನು ಸಂಬಂಧಪಟ್ಟ ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡುತ್ತಿದ್ದೇವೆ. ಈ ರೋಗದ ಲಕ್ಷಣ ಕಂಡು ಬಂದ ತಕ್ಷಣವೇ ಮಾತ್ರೆಯ ಜೊತೆಗೆ ಚಿಕಿತ್ಸೆ ಅತ್ಯವಶ್ಯಕ ಅಂತಾರೆ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಕುಸುಮ ಅವರು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications