ಮೈಸೂರಿನಲ್ಲಿ ಮಾ.26ರಿಂದ ಕೈಮಗ್ಗ ಕರಕುಶಲ ಸಂಭ್ರಮ
ಮೈಸೂರು, ಮಾರ್ಚ್ 23: ನೇಕಾರರು ಮತ್ತು ನೇಕಾರರ ಸಹಕಾರ ಸಂಘಗಳು ತಯಾರು ಮಾಡುತ್ತಿರುವ ಕೈಮಗ್ಗ ಉತ್ಪನ್ನಗಳು ಹೆಚ್ಚು ಮಾರುಕಟ್ಟೆ ಒದಗಿಸುವ ದೃಷ್ಠಿಯಿಂದ ಹಾಗೂ ಕೈಮಗ್ಗ ಉತ್ಪನ್ನಗಳು ನಶಿಸಿ ಹೋಗದಂತೆ ಕಾಪಾಡಿಕೊಂಡು ಹೋಗಲು ಮೈಸೂರಿನ ಜೆಎಸ್ಎಸ್ ಮೈಸೂರು ಅರ್ಬನ್ ಹಾತ್ನಲ್ಲಿ ಕರಕುಶಲ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ದೆಹಲಿಯ (ಕೈಮಗ್ಗ) ಜವಳಿ ಮಂತ್ರಾಲಯ, ಬೆಂಗಳೂರಿನ ಕೈಮಗ್ಗ ಮತ್ತು ಜವಳಿ ಇಲಾಖೆ, ಕರ್ನಾಟಕ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳಿ ವತಿಯಿಂದ ಮಾ.26 ರಿಂದ ಏ.11ರವರೆಗೆ ಪ್ರದರ್ಶನ ನಡೆಯುತ್ತಿದ್ದು, ಎಲ್ಲರ ಗಮನ ಸೆಳೆಯುತ್ತಿದೆ.
ಕರಕುಶಲ ವೃತ್ತಿಯನ್ನು ಅವಲಂಬಿಸಿರುವ ಕುಶಲಕರ್ಮಿಗಳು ಮತ್ತು ನೇಯ್ಗೆಯನ್ನು ನಂಬಿರುವ ನೇಕಾರರು ಹೀಗೆ ಆಯಾಯ ವೃತ್ತಿಯನ್ನು ನಂಬಿ ಬದುಕುತ್ತಿರುವರನ್ನು ಉತ್ತೇಜಿಸಿ ಒಂದೇ ಸೂರಿನಡಿ ಮಾರುಕಟ್ಟೆಯನ್ನು ಕಲ್ಪಿಸುವ ಸಲುವಾಗಿಯೇ ಕರಕುಶಲ ವಸ್ತುಪ್ರದರ್ಶನವನ್ನು ನಡೆಸಲಾಗುತ್ತಿದೆ.

ಈ ಕರಕುಶಲ ವಸ್ತುಪ್ರದರ್ಶನದಲ್ಲಿ ಜಮ್ಮು-ಕಾಶ್ಮೀರ, ದೆಹಲಿ, ರಾಜಸ್ತಾನ್, ಗುಜರಾತ್, ಜಾರ್ಕಾಂಡ್, ಪಶ್ಚಿಮ ಬಂಗಾಳ, ಒರಿಸ್ಸಾ, ಹರಿಯಾಣ, ಬಿಹಾರ್, ಮಹಾರಾಷ್ಟ್ರ, ಮಧ್ಯ ಪ್ರದೇಶ, ಉತ್ತರ ಪ್ರದೇಶ ಮತ್ತು ದಕ್ಷಿಣ ಭಾರತದ ತಮಿಳುನಾಡು, ಆಂಧ್ರ ಪ್ರದೇಶ, ತೆಲಾಂಗಾಣ, ಕೇರಳ ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ಗದಗ, ಬಾಗಲಕೋಟೆ, ಗುಲ್ಬರ್ಗ ಮತ್ತು ಇಳಕಲ್ ಕೈಮಗ್ಗ ಹತ್ತಿ ಮತ್ತು ಉಣ್ಣೆ ಹಾಗೂ ವಿವಿಧ ಮಿಶ್ರಿತ ನೂಲುಗಳಿಂದ ತಯಾರಿಸಲಾದ ಕೈಮಗ್ಗ ಉತ್ಪನ್ನಗಳನ್ನು 50ಕ್ಕೂ ಹೆಚ್ಚು ನೇಕಾರರು ಮತ್ತು ನೇಕಾರರ ಸಹಕಾರ ಸಂಘಗಳು ಪಾಲ್ಗೊಳ್ಳಲಿವೆ.

ಇದಲ್ಲದೆ, ಪಟೋಲ ಸೀರೆಗಳು, ಬಾಂದಿನಿ ಸೀರೆಗಳು, ಕಸೂತಿ ಮಾಡಿದ ಬೆಡ್ ಶೀಟ್ ಗಳು, ಟವಲ್ಗಳು, ಕುಶನ್ ಕವರ್ ಗಳು, ಪರಿಸರ ಸ್ನೇಹಿ ಆಭರಣಗಳು, ಡ್ರೆಸ್ ಮೆಟೀರಿಯಲ್ಗಳು, ಮಣ್ಣಿನಿಂದ ತಯಾರಿಸಿದ ವಸ್ತುಗಳು, ಬೀಡ್ ವರ್ಕ್, ಮೆಟಲ್ ವರ್ಕ್, ಕುರ್ತಿಗಳು, ಚನಿಯಾ ಚೋಲಿ, ಬಾಂದಿನಿ ಹಾಗೂ ಇನ್ನಿತರ ಆಕರ್ಷಣೀಯ ಕರಕುಶಲ ಹಾಗೂ ಕೈಮಗ್ಗ ಉತ್ಪನ್ನಗಳು ಕೂಡ ಪ್ರದರ್ಶನದಲ್ಲಿವೆ.
ಮತ್ತೊಂದು ವಿಶೇಷತೆ ಏನೆಂದರೆ ಇಲ್ಲಿ ತಯಾರಾಗಿರುವ ಪದಾರ್ಥಗಳೆಲ್ಲವೂ ತಯಾರಕರಿಂದಲೇ ನೇರವಾಗಿ ಗ್ರಾಹಕರಿಗೆ ತಲುಪುತ್ತಿದೆ. ಒಟ್ಟಾರೆಯಾಗಿ ಈ ಕರಕುಶಲ ವಸ್ತುಪ್ರದರ್ಶನವು ವೀಕ್ಷಕರನ್ನು ಸೆಳೆಯುತ್ತಿರುವುದಂತು ನಿಜ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications