ಮೈಸೂರಿನಲ್ಲಿ ಮಾ.26ರಿಂದ ಕೈಮಗ್ಗ ಕರಕುಶಲ ಸಂಭ್ರಮ
ಮೈಸೂರು, ಮಾರ್ಚ್ 23: ನೇಕಾರರು ಮತ್ತು ನೇಕಾರರ ಸಹಕಾರ ಸಂಘಗಳು ತಯಾರು ಮಾಡುತ್ತಿರುವ ಕೈಮಗ್ಗ ಉತ್ಪನ್ನಗಳು ಹೆಚ್ಚು ಮಾರುಕಟ್ಟೆ ಒದಗಿಸುವ ದೃಷ್ಠಿಯಿಂದ ಹಾಗೂ ಕೈಮಗ್ಗ ಉತ್ಪನ್ನಗಳು ನಶಿಸಿ ಹೋಗದಂತೆ ಕಾಪಾಡಿಕೊಂಡು ಹೋಗಲು ಮೈಸೂರಿನ ಜೆಎಸ್ಎಸ್ ಮೈಸೂರು ಅರ್ಬನ್ ಹಾತ್ನಲ್ಲಿ ಕರಕುಶಲ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ದೆಹಲಿಯ (ಕೈಮಗ್ಗ) ಜವಳಿ ಮಂತ್ರಾಲಯ, ಬೆಂಗಳೂರಿನ ಕೈಮಗ್ಗ ಮತ್ತು ಜವಳಿ ಇಲಾಖೆ, ಕರ್ನಾಟಕ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳಿ ವತಿಯಿಂದ ಮಾ.26 ರಿಂದ ಏ.11ರವರೆಗೆ ಪ್ರದರ್ಶನ ನಡೆಯುತ್ತಿದ್ದು, ಎಲ್ಲರ ಗಮನ ಸೆಳೆಯುತ್ತಿದೆ.
ಕರಕುಶಲ ವೃತ್ತಿಯನ್ನು ಅವಲಂಬಿಸಿರುವ ಕುಶಲಕರ್ಮಿಗಳು ಮತ್ತು ನೇಯ್ಗೆಯನ್ನು ನಂಬಿರುವ ನೇಕಾರರು ಹೀಗೆ ಆಯಾಯ ವೃತ್ತಿಯನ್ನು ನಂಬಿ ಬದುಕುತ್ತಿರುವರನ್ನು ಉತ್ತೇಜಿಸಿ ಒಂದೇ ಸೂರಿನಡಿ ಮಾರುಕಟ್ಟೆಯನ್ನು ಕಲ್ಪಿಸುವ ಸಲುವಾಗಿಯೇ ಕರಕುಶಲ ವಸ್ತುಪ್ರದರ್ಶನವನ್ನು ನಡೆಸಲಾಗುತ್ತಿದೆ.

ಈ ಕರಕುಶಲ ವಸ್ತುಪ್ರದರ್ಶನದಲ್ಲಿ ಜಮ್ಮು-ಕಾಶ್ಮೀರ, ದೆಹಲಿ, ರಾಜಸ್ತಾನ್, ಗುಜರಾತ್, ಜಾರ್ಕಾಂಡ್, ಪಶ್ಚಿಮ ಬಂಗಾಳ, ಒರಿಸ್ಸಾ, ಹರಿಯಾಣ, ಬಿಹಾರ್, ಮಹಾರಾಷ್ಟ್ರ, ಮಧ್ಯ ಪ್ರದೇಶ, ಉತ್ತರ ಪ್ರದೇಶ ಮತ್ತು ದಕ್ಷಿಣ ಭಾರತದ ತಮಿಳುನಾಡು, ಆಂಧ್ರ ಪ್ರದೇಶ, ತೆಲಾಂಗಾಣ, ಕೇರಳ ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ಗದಗ, ಬಾಗಲಕೋಟೆ, ಗುಲ್ಬರ್ಗ ಮತ್ತು ಇಳಕಲ್ ಕೈಮಗ್ಗ ಹತ್ತಿ ಮತ್ತು ಉಣ್ಣೆ ಹಾಗೂ ವಿವಿಧ ಮಿಶ್ರಿತ ನೂಲುಗಳಿಂದ ತಯಾರಿಸಲಾದ ಕೈಮಗ್ಗ ಉತ್ಪನ್ನಗಳನ್ನು 50ಕ್ಕೂ ಹೆಚ್ಚು ನೇಕಾರರು ಮತ್ತು ನೇಕಾರರ ಸಹಕಾರ ಸಂಘಗಳು ಪಾಲ್ಗೊಳ್ಳಲಿವೆ.

ಇದಲ್ಲದೆ, ಪಟೋಲ ಸೀರೆಗಳು, ಬಾಂದಿನಿ ಸೀರೆಗಳು, ಕಸೂತಿ ಮಾಡಿದ ಬೆಡ್ ಶೀಟ್ ಗಳು, ಟವಲ್ಗಳು, ಕುಶನ್ ಕವರ್ ಗಳು, ಪರಿಸರ ಸ್ನೇಹಿ ಆಭರಣಗಳು, ಡ್ರೆಸ್ ಮೆಟೀರಿಯಲ್ಗಳು, ಮಣ್ಣಿನಿಂದ ತಯಾರಿಸಿದ ವಸ್ತುಗಳು, ಬೀಡ್ ವರ್ಕ್, ಮೆಟಲ್ ವರ್ಕ್, ಕುರ್ತಿಗಳು, ಚನಿಯಾ ಚೋಲಿ, ಬಾಂದಿನಿ ಹಾಗೂ ಇನ್ನಿತರ ಆಕರ್ಷಣೀಯ ಕರಕುಶಲ ಹಾಗೂ ಕೈಮಗ್ಗ ಉತ್ಪನ್ನಗಳು ಕೂಡ ಪ್ರದರ್ಶನದಲ್ಲಿವೆ.
ಮತ್ತೊಂದು ವಿಶೇಷತೆ ಏನೆಂದರೆ ಇಲ್ಲಿ ತಯಾರಾಗಿರುವ ಪದಾರ್ಥಗಳೆಲ್ಲವೂ ತಯಾರಕರಿಂದಲೇ ನೇರವಾಗಿ ಗ್ರಾಹಕರಿಗೆ ತಲುಪುತ್ತಿದೆ. ಒಟ್ಟಾರೆಯಾಗಿ ಈ ಕರಕುಶಲ ವಸ್ತುಪ್ರದರ್ಶನವು ವೀಕ್ಷಕರನ್ನು ಸೆಳೆಯುತ್ತಿರುವುದಂತು ನಿಜ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications