ರಾತ್ರೋರಾತ್ರಿ ಹುಣಸೂರಿನ ಹನುಮಮೂರ್ತಿ ಸ್ಥಳಾಂತರವಾಗಿದ್ದೇಕೆ ?
ಮೈಸೂರು, ಡಿಸೆಂಬರ್ 4: ಹನುಮ ಜಯಂತಿ ಆಚರಣೆ ವೇಳೆ ಹುಣಸೂರಿನಲ್ಲಿ ನಿನ್ನೆ(ಡಿ.04) ನಡೆದ ಘರ್ಷಣೆ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಮುನೇಶ್ವರ ಕಾವಲ್ ಮೈದಾನದಲ್ಲಿ ಇರಿಸಲಾಗಿದ್ದ ಹನುಮನ ಮೂರ್ತಿಯನ್ನ ತೆರವುಗೊಳಿಸಲಾಗಿದೆ.
ಬ್ರಾಹ್ಮಣ ಬೀದಿಯಲ್ಲಿರುವ ರಂಗನಾಥ ದೇವಾಲಯಕ್ಕೆ ಹನುಮನ ಬೃಹತ್ ಮೂರ್ತಿಯನ್ನ ಸ್ಥಳಾಂತರ ಮಾಡಲಾಗಿದೆ. ಹನುಮ ಮೂರ್ತಿ ಮುಟ್ಟಿದ್ರೆ ಪರಿಸ್ಥಿತಿ ಸರಿ ಇರಲ್ಲ ಎಂಬ ಪ್ರತಾಪ್ ಸಿಂಹ ಎಚ್ಚರಿಕೆ ನಡುವೆಯೂ ಮೂರ್ತಿ ತೆರವುಗೊಳಿಸಲಾಗಿದೆ. ಹನುಮನ ಬೃಹತ್ ಮೂರ್ತಿಯನ್ನು ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಟ್ರ್ಯಾಕ್ಟರ್ ಗಳ ಮೂಲಕ ಸ್ಥಳಾಂತರ ಮಾಡಲಾಗಿದೆ.

ನಿನ್ನೆ ನಡೆದ ಘರ್ಷಣೆಯ ಕಾರಣ ಹುಣಸೂರು ಪಟ್ಟಣದಲ್ಲಿ ಇಂದು ಬಂದ್ ಗೆ ಕರೆ ನೀಡಲಾಗಿತ್ತು. ಬಿಜೆಪಿಯ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಹುಣಸೂರಿಗೆ ಭೇಟಿ ನೀಡಿ ಬಂದ್ ಗೆ ಕರೆ ನೀಡಿದ್ದರು. ತದನಂತರದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಕಾರಣ ನೀಡಿರುವ ಬಿಜೆಪಿ, ಬಂದ್ ಕರೆಯನ್ನು ವಾಪಸ್ ಪಡೆದಿದೆ.

ಆದರೆ ನಿನ್ನೆ ಬಂದ್ ಗೆ ಕರೆ ನೀಡಿದ್ದರಿಂದ ಬೆಳಗ್ಗೆಯಿಂದಲೇ ಹುಣಸೂರು ಪಟ್ಟಣದ ಬೀದಿಗಳು ಬಿಕೋ ಎನ್ನುತ್ತಿದ್ದು, ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಸರ್ಕಾರಿ ಬಸ್ ಗಳು ರಸ್ತೆಗೆ ಇಳಿದಿರಲಿಲ್ಲ. ಮುಂಜಾಗ್ರತಾ ಕ್ರಮವಾಗಿ ಹುಣಸೂರಿನಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಏನೇ ಆದರೂ ಬಂದ್ ಕರೆಯಿಂದ ಸಾಮಾನ್ಯ ಜನಜೀವನಕ್ಕೆ ಧಕ್ಕೆಯಾಗಿದ್ದು ಕಂಡುಬಂತು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications