ಖಡಕ್ ಅಧಿಕಾರಿಗಳೆಂಬ ಸೋಗು ಬಿಡಿ: ಚನ್ನಣ್ಣನವರ್ ಗೆ ಸಿಂಹ ಟಾಂಗ್
Recommended Video

ಮೈಸೂರು, ಡಿಸೆಂಬರ್ 4: ಮೈಸೂರಿನ ಹಣಸೂರಿನಲ್ಲಿ ಹನುಮ ಜಯಂತಿಯ ಮೆರವಣಿಗೆ ನಡೆಸಲು ಅವಕಾಶ ನೀಡಿಲ್ಲವೆಂದು ಸಂಸದ ಪ್ರತಾಪ್ ಸಿಂಹ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ ಚನ್ನಣ್ಣನವರ್ ವಿರುದ್ಧ ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದಾರೆ.
"ಆಳುವವರ ಅಣತಿ ಮೀರುವಹಾಗಿಲ್ಲ ಅಲ್ವಾ ಸಾರ್?! ಕನಿಷ್ಠ ಖಡಕ್ ಅಧಿಕಾರಿಗಳೆಂಬ ಸೋಗು ಬಿಟ್ಟು ಆಳುವ ಪಕ್ಷದ ಆಳುಗಳು ಅನ್ನುವುದನ್ನು ಒಪ್ಪಿಕೊಳ್ಳಿ. ದತ್ತ ಜಯಂತಿಗೆ ಸಕಲ ವ್ಯವಸ್ಥೆ ಮಾಡಿರುವ ಅಣ್ಣಾಮಲೈ, ಸರ್ಕಾರವನ್ನು ಎದುರುಹಾಕಿಕೊಂಡ ಡಿಐಜಿ ರೂಪ, ಮೆಡಿಕಲ್ ಸೀಟ್ ಬ್ಲಾಕಿಂಗ್ ಹಗರಣ ತಡೆದ ಐಎಎಸ್ ರಶ್ಮಿ ನೋಡಿ ಕಲಿಯಿರಿ, ಭಾಷಣ ನಿಲ್ಲಿಸಿ" ಎಂದು ಪ್ರತಾಪ್ ಸಿಂಹ ಟ್ವಿಟ್ಟರ್ ನಲ್ಲಿ ಪರೋಕ್ಷವಾಗಿ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ ಚನ್ನಣ್ಣನವರ್ ವಿರುದ್ಧ ಹರಿಹಾಯ್ದರು.
'ಅಭಿ ಪಿಕ್ಚರ್ ಬಾಕಿ ಹೈ' - ರವಿ ಪವರ್ ಫುಲ್ ಮಾತುಗಳು
ಆಳುವವರ ಅಣತಿ ಮೀರುವಹಾಗಿಲ್ಲ ಅಲ್ವಾ ಸಾರ್?! ಕನಿಷ್ಠ ಖಡಕ್ ಅಧಿಕಾರಿಗಳೆಂಬ ಸೋಗು ಬಿಟ್ಟು ಅಳುವ ಪಕ್ಷದ ಆಳುಗಳು ಅನ್ನುವುದನ್ನು ಒಪ್ಪಿಕೊಳ್ಳಿ. ದತ್ತ ಜಯಂತಿಗೆ ಸಕಲ ವ್ಯವಸ್ಥೆ ಮಾಡಿರುವ ಅಣ್ಣಾಮಲೈ, ಸರ್ಕಾರವನ್ನು ಎದುರುಹಾಕಿಕೊಂಡ ಡಿಐಜಿ ರೂಪ, ಮೆಡಿಕಲ್ ಸೀಟ್ ಬ್ಲಾಕಿಂಗ್ ಹಗರಣ ತಡೆದ ಐಎಎಸ್ ರಶ್ಮಿ ನೋಡಿ ಕಲಿಯಿರಿ, ಭಾಷಣ ನಿಲ್ಲಿಸಿ.
— Pratap Simha (@mepratap) December 3, 2017
ಭಾನುವಾರ ಹಣಸೂರಿನಲ್ಲಿ ಹನುಮ ಜಯಂತಿ ಮೆರವಣಿಗೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಸಂಸದ ಪ್ರತಾಪ್ ಸಿಂಹರನ್ನು ಪೊಲೀಸರು ತಡೆದು ಬಂಧಿಸಿದ್ದರು. ಇದರಿಂದ ಆಕ್ರೊಶಗೊಂಡ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು. ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ಭಾನುವಾರ ರಾತ್ರಿಯೇ ಪ್ರತಾಪ್ ಸಿಂಹ ಅವರನ್ನು ಬಿಡುಗಡೆಗೊಳಿಸಿದರು.
ಮುಂಜಾಗ್ರತ ಕ್ರಮವಾಗಿ ಮೈಸೂರು ಜಿಲ್ಲಾಡಳಿತ ಸೋಮವಾರ ಹುಣಸೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.
ರವಿ ಚನ್ನಣ್ಣನವರ್ ವಿರುದ್ಧ ಟ್ವೀಟ್ ಮಾಡಿರುವುದುಕ್ಕೆ ಪರ ವಿರೋಧಗಳು ವ್ಯಕ್ತವಾಗುತ್ತಿವೆ. ಯಾರು ಏನು ಹೇಳಿದ್ದಾರೆ ಎನ್ನುವುದನ್ನು ಸ್ಲೈಡ್ ಗಳಲ್ಲಿ ನೋಡಿ.
|
ನಿಮಗೆ ಜೈ ಅಂದರೆ ಅವರು ಉತ್ತಮರು
'ನಿಮಗೆ ಜೈ ಅಂದರೆ ಅವರು ಉತ್ತಮರು. ಇಲ್ಲದಿದ್ದರೆ ಅವರು ಆಳುಗಳು.. ಈ ಮಾತಡಲು ನಾಚಿಕೆ ಆಗಲ್ವ ಒಬ್ಬ ಖಡಕ್ ಆಧಿಕಾರಿ ಬಗ್ಗೆ..; ಎಂದು ಸಂತೋಷ್ ಬಿ ಎಸ್ ಎನ್ನುವರು ಪ್ರತಾಪ ಸಿಂಹ ಟ್ವೀಟ್ ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
|
ಖಾಖಿ ಹಾಕಿದೋರೆಲ್ಲ ಪೋಲಿಸ್ ಅಗಲ್ಲ
ಮೀಸೆ ಬಿಟ್ಟೋರೆಲ್ಲ ಕೆಂಪೇಗೌಡ ಅಗಲ್ಲ, ಖಾಖಿ ಹಾಕಿದೋರೆಲ್ಲ ಪೋಲಿಸ್ ಅಗಲ್ಲ, ಹಿಂದೂಗಳನ್ನ ತಡೆದು ಯಾರು ಉದ್ದಾರ ಅಗಿಲ್ಲ ಭಾಷಣ ಬಿಟ್ಟು ಭಂಟಂಗಿತನ ಬಿಡ್ರಿ Mr.sp ಎಂದು ಪ್ರದೀಪ್ ಟಿ. ಕೆ ಎನ್ನುವರು ಚನ್ನಣ್ಣನವರ್ ವಿರುದ್ಧ ಕಿಡಿಕಾರಿದ್ದಾರೆ.
|
ಅನ್ಯ ಮಾರ್ಗವಿಲ್ಲದೆ ಲಾಠಿ ಚಾರ್ಜ್ ಮಾಡಿದ್ದಾರೆ
ನಿಷೇದಾಜ್ಞೆ ಇರುವಾಗ ಮೆರವಣಿಗೆ ಮಾಡಿದ್ದೂ ಅಲ್ಲದೆ,ಪೊಲೀಸ್ ಇಲಾಖೆ ಅನುಮತಿ ನೀಡದ ಪ್ರದೇಶದ ಕಡೆ ಮೆರವಣಿಗೆ ಸಾಗುವಂತೆ ಮಾಡಿ ಮೆರವಣಿಗೆಯನ್ನು ಉಗ್ರ ವಾಗಿಸಿದ್ದಾರೆಂದು ಸಾರ್ವಜನಿಕರು ಅಭಿಪ್ರಾಯಿಸಿದ್ದಾರೆ. ಪೊಲೀಸರು ಕೂಡಾ ಅನ್ಯ ಮಾರ್ಗವಿಲ್ಲದೆ ಲಾಠಿ ಚಾರ್ಜ್ ಮಾಡಿದ್ದಾರೆನ್ನಲಾಗಿದೆ.ಶಾಂತಿ ಕಾಪಾಡುವ ನಿಟ್ಟಿನಲ್ಲಿ ಲಾಠಿ ಚಾರ್ಜ್ ಮಾಡಿದ್ದಾರೆ.
|
ಆಫೀರ್ ಗಳು ಅಂದ್ರೆ ಅವರ ಮನೆ ಕೆಲಸ ಮಾಡೋರು
ಕರ್ನಾಟಕ ಸಿಎಂಗೆ ಆಫೀರ್ ಗಳು ಅಂದ್ರೆ ಅವರ ಮನೆ ಕೆಲಸ ಮಾಡೋರು ಅಂದುಕೊಂಡುಬಿಟ್ಟಿದ್ದಾರೆ. ಅವರಿಗೆ ಬೆಲೆ ಇಲ್ಲ ಎಂದು ಅಂಜಲಿ ಶರ್ಮ ಎಂಬುವರು ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಮಾಡಿದ್ದಾರೆ.
|
ಹಿಂದುಗಳಿಗೆ ಯಾಕೆ ಕೊಡಲ್ಲ
'ಮುಸ್ಲಿಂ ರಿಗೆ ಇದ್ ಮೀಲಾದ್ ಮೆರವಣಿಗೆ ಅವಕಾಶ ಇದ್ರೆ ಹಿಂದುಗಳಿಗೆ ಯಾಕೆ ಕೊಡಲ್ಲ'...ಇದು ಮುಸ್ಲಿಂ ದೇಶನ ಹಿಂದು ದೇಶನಾ? ಎಂದು ದಾಮೋದರ್ ದೇವಾಡಿಗ ಎನ್ನುವರು ಪ್ರಶ್ನಿಸಿದ್ದಾರೆ
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ












Click it and Unblock the Notifications