ಮೈಸೂರಿಗೆ ಕೊರೊನಾ ವಿಶೇಷಾಧಿಕಾರಿಯಾಗಿ ಹರ್ಷ ಗುಪ್ತಾ ನೇಮಕ
ಮೈಸೂರು, ಏಪ್ರಿಲ್ 14: ರಾಜಧಾನಿ ಬೆಂಗಳೂರಿನ ಬಳಿಕ ಅತಿಹೆಚ್ಚು ಕೊರೊನಾ ಪ್ರಕರಣಗಳು ಮೈಸೂರು ಜಿಲ್ಲೆಯಲ್ಲಿ ಕಂಡು ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ವಿಶೇಷಾಧಿಕಾರಿಯನ್ನಾಗಿ ಹಿರಿಯ ಐಎಎಸ್ ಅಧಿಕಾರಿ ಹರ್ಷಗುಪ್ತಾ ಅವರನ್ನು ನೇಮಕ ಮಾಡಿ ಸೋಮವಾರ ಆದೇಶ ಹೊರಡಿಸಿದೆ.
Recommended Video
"ಬೆಂಗಳೂರಿನ ನಂತರ ಮೈಸೂರು ಕೊರೊನಾ ವಿಚಾರದಲ್ಲಿ ಎರಡನೇ ಸ್ಥಾನದಲ್ಲಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿರ್ವಹಣೆ, ಜಿಲ್ಲಾಧಿಕಾರಿಗಳಿಗೆ ಸಹಕಾರ ನೀಡುವ ಸಲುವಾಗಿ ನೇಮಕ ಮಾಡಲಾಗಿದೆ. ಕೊರೊನಾ ನಿರ್ವಹಣೆಗಾಗಿ ದಕ್ಷ, ಪ್ರಾಮಾಣಿಕ ಐಎಎಸ್ ಅಧಿಕಾರಿ ನೇಮಿಸುವಂತೆ ಮನವಿ ಮಾಡಿದ್ದೆವು. ಇದಕ್ಕೆ ಸಿಎಂ ಯಡಿಯೂರಪ್ಪ ಸ್ಪಂದಿಸಿದ್ದಾರೆ" ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಅವರು ನಿನ್ನೆಯೇ ಮೈಸೂರಿಗೆ ಬಂದು ವಿವಿಧ ಇಲಾಖೆಗಳ ಜಿಲ್ಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕೊರೊನಾ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಮಾಡುವುದು ಹೇಗೆ ಎಂಬ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಈ ಕುರಿತು ವಿವಿಧ ಅಧಿಕಾರಿಗಳಿಂದ ಸಲಹೆ ಪಡೆದಿದ್ದು ಮುಂದಿನ ಕಾರ್ಯತಂತ್ರ ಕೂಡ ರೂಪಿಸಲಿದ್ದಾರೆ.
ಈ ನಡುವೆ "ಜುಬಿಲಿಯಂಟ್ ಕಾರ್ಖಾನೆಯ ತನಿಖೆಗಾಗಿ ಹರ್ಷಗುಪ್ತ ಅವರನ್ನು ನೇಮಿಸಿಲ್ಲ" ಎಂದು ಸ್ಪಷ್ಟನೆ ನೀಡಿದ್ದಾರೆ ಸೋಮಶೇಖರ್.












Click it and Unblock the Notifications