50 ಸಾವಿರ ರೂ. ಕಳಕೊಂಡವನಿಗೆ ಮತ್ತೆ ಸಿಕ್ಕಿದ್ದು ಹೇಗೆ ಗೊತ್ತಾ?
ಮೈಸೂರು, ಮಾರ್ಚ್ 27: ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಹಣ ಸಂಪಾದನೆಯೇ ಕಷ್ಟವಾಗಿರುವ ಈ ಕಾಲದಲ್ಲಿ ವ್ಯಕ್ತಿಯೊಬ್ಬ ಕಳೆದುಕೊಂಡಿರುವ 50 ಸಾವಿರ ರುಪಾಯಿ ಮರಳಿ ಸಿಕ್ಕಿರುವುದು ಅವರ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ.
ಮೈಸೂರು ಜಿಲ್ಲೆಯ ಟಿ.ನರಸೀಪುರ ಪಟ್ಟಣದ ತ್ರಿವೇಣಿ ನಗರದ ನಿವಾಸಿ ವಿವೇಕ್ ಎಂಬುವವರು ಗುರುವಾರ ರಾತ್ರಿ ಸ್ಟೇಟ್ ಬ್ಯಾಂಕಿನ ಎಟಿಎಮ್ ನಿಂದ 50 ಸಾವಿರ ರುಪಾಯಿ ಹಣವನ್ನು ಡ್ರಾ ಮಾಡಿ ಪರ್ಸಿನಲ್ಲಿಟ್ಟುಕೊಂಡು ಬೈಕಿನಲ್ಲಿ ಮನೆಗೆ ತೆರಳುತ್ತಿದ್ದರು.
ಆದರೆ ಮನೆ ತಲುಪುವುದರಲ್ಲೇ ಹಣ ಇದ್ದ ಪರ್ಸ್ ಬಿದ್ದು ಹೋಗಿತ್ತು. ತೀವ್ರ ದುಃಖದಿಂದ ಪುನಃ ತಾವು ಬಂದ ದಾರಿಯಲ್ಲೇ ಹಿಂತಿರುಗಿ ಹೋದರೂ ಕೂಡ ಹಣದ ಪರ್ಸ್ ಸಿಕ್ಕಿರಲಿಲ್ಲ.

ಏನಾದರೂ ಆಗಲಿ ಒಂದು ಪೊಲೀಸ್ ದೂರು ಕೊಟ್ಟೇ ಬಿಡಲು ತೀರ್ಮಾನಿಸಿ, ತೀ.ನರಸೀಪುರ ಪಟ್ಟಣ ಠಾಣೆಯಲ್ಲೇ ದೂರನ್ನು ನೀಡಿ ಮನೆಗೆ ಹೋದರು. ಹಣ ಸಿಗುವ ಯಾವ ಭರವಸೆ ಅವರಲ್ಲಿ ಇರಲಿಲ್ಲ. ದುಃಖದಿಂದಲೇ ರಾತ್ರಿ ಕಳೆದ ಇವರಿಗೆ ಬೆಳಿಗ್ಗೆ ಪೊಲೀಸ್ ಠಾಣೆಯಿಂದ ಬಂದ ಆ ಕರೆ ಅವರಿಗೆ ಅತೀವ ಸಂತಸ ನೀಡಿತು.
ಆದರೆ, ಗಸ್ತಿನಲ್ಲಿದ್ದ ಪೊಲೀಸರಿಗೆ 50 ಸಾವಿರ ರುಪಾಯಿಗಳಿದ್ದ ಪರ್ಸ್ ಸಿಕ್ಕಿದ್ದು, ಅದನ್ನು ಠಾಣೆಗೆ ತೆಗೆದುಕೊಂಡು ಹೋಗಿದ್ದರು. ಅದೇ ವೇಳೆಯಲ್ಲಿ ಠಾಣೆಯ ಸಿಬ್ಬಂದಿಯೋರ್ವರು ಕೆಲ ಗಂಟೆಗಳ ಹಿಂದೆ ವ್ಯಕ್ತಿಯೋರ್ವರು 50 ಸಾವಿರ ರೂ.ಕಳೆದುಕೊಂಡಿರುವ ಬಗ್ಗೆ ದೂರು ನೀಡಿದ್ದಾರೆ ಎಂದು ಹೇಳಿದ್ದಾರೆ.
ಕೂಡಲೇ ಪೊಲೀಸರು ಹಣ ಕಳೆದುಕೊಂಡಿದ್ದ ವಿವೇಕ್ ಗೆ ಕರೆ ಮಾಡಿ, ಪೊಲೀಸ್ ಠಾಣೆಗೆ ಕರೆಸಿಕೊಂಡು ವಿಚಾರಣೆ ಮಾಡಿ 50 ಸಾವಿರ ರೂ. ಹಣ ಹಿಂತಿರುಗಿಸಿದ್ದಾರೆ. ಸಿಬ್ಬಂದಿ ದಯಾನಂದ್, ಮಾದೇಶ್, ಮೋಹನ್ ಅವರ ಪ್ರಾಮಾಣಿಕತೆಗೆ ವಿವೇಕ್ ಹೃತ್ಪೂರ್ವಕ ಕೃತಜ್ಞತೆ ಅರ್ಪಿಸಿದ್ದಾರೆ. ಪೊಲೀಸ್ ಸಿಬ್ಬಂದಿಗಳ ಪ್ರಾಮಾಣಿಕತೆ ಸಾರ್ವಜನಿಕ ವಲಯದಲ್ಲೂ ಮೆಚ್ಚುಗೆಗೆ ಪಾತ್ರವಾಗಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications