50 ಸಾವಿರ ರೂ. ಕಳಕೊಂಡವನಿಗೆ ಮತ್ತೆ ಸಿಕ್ಕಿದ್ದು ಹೇಗೆ ಗೊತ್ತಾ?
ಮೈಸೂರು, ಮಾರ್ಚ್ 27: ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಹಣ ಸಂಪಾದನೆಯೇ ಕಷ್ಟವಾಗಿರುವ ಈ ಕಾಲದಲ್ಲಿ ವ್ಯಕ್ತಿಯೊಬ್ಬ ಕಳೆದುಕೊಂಡಿರುವ 50 ಸಾವಿರ ರುಪಾಯಿ ಮರಳಿ ಸಿಕ್ಕಿರುವುದು ಅವರ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ.
ಮೈಸೂರು ಜಿಲ್ಲೆಯ ಟಿ.ನರಸೀಪುರ ಪಟ್ಟಣದ ತ್ರಿವೇಣಿ ನಗರದ ನಿವಾಸಿ ವಿವೇಕ್ ಎಂಬುವವರು ಗುರುವಾರ ರಾತ್ರಿ ಸ್ಟೇಟ್ ಬ್ಯಾಂಕಿನ ಎಟಿಎಮ್ ನಿಂದ 50 ಸಾವಿರ ರುಪಾಯಿ ಹಣವನ್ನು ಡ್ರಾ ಮಾಡಿ ಪರ್ಸಿನಲ್ಲಿಟ್ಟುಕೊಂಡು ಬೈಕಿನಲ್ಲಿ ಮನೆಗೆ ತೆರಳುತ್ತಿದ್ದರು.
ಆದರೆ ಮನೆ ತಲುಪುವುದರಲ್ಲೇ ಹಣ ಇದ್ದ ಪರ್ಸ್ ಬಿದ್ದು ಹೋಗಿತ್ತು. ತೀವ್ರ ದುಃಖದಿಂದ ಪುನಃ ತಾವು ಬಂದ ದಾರಿಯಲ್ಲೇ ಹಿಂತಿರುಗಿ ಹೋದರೂ ಕೂಡ ಹಣದ ಪರ್ಸ್ ಸಿಕ್ಕಿರಲಿಲ್ಲ.

ಏನಾದರೂ ಆಗಲಿ ಒಂದು ಪೊಲೀಸ್ ದೂರು ಕೊಟ್ಟೇ ಬಿಡಲು ತೀರ್ಮಾನಿಸಿ, ತೀ.ನರಸೀಪುರ ಪಟ್ಟಣ ಠಾಣೆಯಲ್ಲೇ ದೂರನ್ನು ನೀಡಿ ಮನೆಗೆ ಹೋದರು. ಹಣ ಸಿಗುವ ಯಾವ ಭರವಸೆ ಅವರಲ್ಲಿ ಇರಲಿಲ್ಲ. ದುಃಖದಿಂದಲೇ ರಾತ್ರಿ ಕಳೆದ ಇವರಿಗೆ ಬೆಳಿಗ್ಗೆ ಪೊಲೀಸ್ ಠಾಣೆಯಿಂದ ಬಂದ ಆ ಕರೆ ಅವರಿಗೆ ಅತೀವ ಸಂತಸ ನೀಡಿತು.
ಆದರೆ, ಗಸ್ತಿನಲ್ಲಿದ್ದ ಪೊಲೀಸರಿಗೆ 50 ಸಾವಿರ ರುಪಾಯಿಗಳಿದ್ದ ಪರ್ಸ್ ಸಿಕ್ಕಿದ್ದು, ಅದನ್ನು ಠಾಣೆಗೆ ತೆಗೆದುಕೊಂಡು ಹೋಗಿದ್ದರು. ಅದೇ ವೇಳೆಯಲ್ಲಿ ಠಾಣೆಯ ಸಿಬ್ಬಂದಿಯೋರ್ವರು ಕೆಲ ಗಂಟೆಗಳ ಹಿಂದೆ ವ್ಯಕ್ತಿಯೋರ್ವರು 50 ಸಾವಿರ ರೂ.ಕಳೆದುಕೊಂಡಿರುವ ಬಗ್ಗೆ ದೂರು ನೀಡಿದ್ದಾರೆ ಎಂದು ಹೇಳಿದ್ದಾರೆ.
ಕೂಡಲೇ ಪೊಲೀಸರು ಹಣ ಕಳೆದುಕೊಂಡಿದ್ದ ವಿವೇಕ್ ಗೆ ಕರೆ ಮಾಡಿ, ಪೊಲೀಸ್ ಠಾಣೆಗೆ ಕರೆಸಿಕೊಂಡು ವಿಚಾರಣೆ ಮಾಡಿ 50 ಸಾವಿರ ರೂ. ಹಣ ಹಿಂತಿರುಗಿಸಿದ್ದಾರೆ. ಸಿಬ್ಬಂದಿ ದಯಾನಂದ್, ಮಾದೇಶ್, ಮೋಹನ್ ಅವರ ಪ್ರಾಮಾಣಿಕತೆಗೆ ವಿವೇಕ್ ಹೃತ್ಪೂರ್ವಕ ಕೃತಜ್ಞತೆ ಅರ್ಪಿಸಿದ್ದಾರೆ. ಪೊಲೀಸ್ ಸಿಬ್ಬಂದಿಗಳ ಪ್ರಾಮಾಣಿಕತೆ ಸಾರ್ವಜನಿಕ ವಲಯದಲ್ಲೂ ಮೆಚ್ಚುಗೆಗೆ ಪಾತ್ರವಾಗಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ












Click it and Unblock the Notifications