Kingfisher Beer Seized:ಕಿಂಗ್ ಫಿಶರ್ ಬಿಯರ್ನಲ್ಲಿ ಅಪಾಯಕಾರಿ ಅಂಶ, 25 ಕೋಟಿ ಮೌಲ್ಯದ ಮದ್ಯ ವಶ
ಮೈಸೂರು, ಆಗಸ್ಟ್ 16: ಯುವಜನತೆಯ ಅತೀ ಆಕರ್ಷಣೀಯ ಹಾಗೂ ಪ್ರತಿಷ್ಠಿತ ಕಿಂಗ್ ಫಿಶರ್ ಬಿಯರ್ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿದೆ. ಪರಿಣಾಮ 25 ಕೋಟಿ ಮೌಲ್ಯದ 78,678 ಬಾಕ್ಸ್ ಬಿಯರ್ ವಶಪಡಿಸಿಕೊಂಡಿರುವ ಮೈಸೂರು ಅಬಕಾರಿ ಪೊಲೀಸರು ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿರುವ ಯುನೈಟೆಡ್ ಬ್ರಿವರಿಸ್ ಕಂಪನಿ ತಯಾರಿಸಿದ್ದ ಬಿಯರ್ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದೆ. ಕಿಂಗ್ ಫಿಷರ್ ಸ್ಟ್ರಾಂಗ್ ಹಾಗೂ ಕಿಂಗ್ ಫಿಷರ್ ಅಲ್ಟ್ರಾ ಲ್ಯಾಗರ್ ಬಿಯರ್ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದ್ದು, 7e ಮತ್ತು 7c ನಮೂನೆಯ ದಿನಾಂಕ 15-07-23ರಂದು ಬಾಟಿಲಿಂಗ್ ಆದ ಬಿಯರ್ನಲ್ಲಿ ಈ ಸೆಡಿಮೆಂಟ್ ಅಂಶ ಕಂಡುಬಂದಿದೆ.

ಈ ಮಾಹಿತಿ ತಿಳಿದ ಕೂಡಲೇ ಬಿಯರ್ ಸ್ಯಾಂಪಲ್ ಅನ್ನು ಕೆಮಿಕಲ್ ಲ್ಯಾಬ್ಗೆ ಕಳುಹಿಸಲಾಗಿತ್ತು. ಈ ಕುರಿತು 2-08-2023ರಂದು ಕೆಮಿಕಲ್ ವರದಿ ಬಂದಿದ್ದು, ವರದಿಯಲ್ಲಿ ಅನ್ ಫಿಟ್ ಫಾರ್ ಹ್ಯುಮನ್ ಕನ್ಸಂಪ್ಷನ್ ಅಂದರೆ ಮಾನವರ ಸೇವನೆಗೆ ಯೋಗ್ಯವಲ್ಲ ಎಂದು ತಿಳಿಸಲಾಗಿದೆ.
ಈ ಅವಧಿಯಲ್ಲಿ ಒಟ್ಟು 78,678 ಬಾಕ್ಸ್ ಬಿಯರ್ ಬಾಕ್ಸ್ ಸರಬರಾಜಾಗಿತ್ತು. ಅಷ್ಟರ ವೇಳೆಗೆ ಎಲ್ಲಾ ಬಾಕ್ಷ್ಗಳನ್ನು ತಡೆಹಿಡಿಯಲಾಗಿದೆ. ಕೆಲ ಡಿಪೋದಿಂದ ಅಂಗಡಿಗಳಿಗೂ ವಿತರಣೆಯಾಗಿತ್ತು. ಹೀಗಾಗಿ ರಿಟೈಲ್ನಲ್ಲೂ ಸೇಲ್ ಆಗದಂತೆ ತಡೆಹಿಡಿಯಲಾಗಿದೆ. ಜೊತೆಗೆ ಗುಣಮಟ್ಟದ ಬಿಯರ್ ತಯಾರು ಮಾಡದ ಕಾರಣ ಕಂಪನಿಯ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
ಇನ್ ಹೌಸ್ ಕೆಮಿಸ್ಟ್ ಅವರು ಕೊಟ್ಟಿರುವ ವರದಿಯಲ್ಲಿ ಈ ಬಿಯರ್ ಮನುಷ್ಯರು ಕುಡಿಯಲು ಯೋಗ್ಯವಲ್ಲ ಎಂದು ಬಂದ ವರದಿ ಆಧರಿಸಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಬಕಾರಿ ಇಲಾಖೆಯ ಉಪ ಆಯುಕ್ತ ಎ.ರವಿಶಂಕರ್ ತಿಳಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications