ಸಿಎಂ ಸಿದ್ದುಗೆ ಹಲೋ ಎಂದ ದೊಡ್ಡಗೌಡರು...!
ಮೈಸೂರು, ಜುಲೈ 23 : ಸದಾ ಮಾಧ್ಯಮಗಳ ಮುಂದೆ ಹಾವು -ಮುಂಗೂಸಿಯಂತೆ ದ್ವೇಷ ಕಾರುವ, ಆರೋಪ ಪ್ರತ್ಯಾರೋಪ ಮಾಡುವ, ಒಂದು ಕಾಲದಲ್ಲಿ ಗುರುಶಿಷ್ಯರಾಗಿದ್ದ, ಇದೀಗ ಬದ್ಧ ವೈರಿಯಂತೆ ವರ್ತಿಸುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದಾಗ ಪ್ರತಿಯೊಬ್ಬನಲ್ಲೂ ಕುತೂಹಲ ಮೂಡುವುದು ಸಹಜ.
ಸಾಮಾನ್ಯವಾಗಿ ಒಂದು ಪಕ್ಷದ ನಾಯಕರು ಮತ್ತೊಂದು ಪಕ್ಷದ ನಾಯಕರೊಂದಿಗೆ ಬೆರೆಯುವುದು ಅಪರೂಪವೇ. ಒಂದು ವೇಳೆ ರಾಜಕೀಯ ಮರೆತು ಬೆರೆತರೂ ಅದರ ಸುತ್ತ ನೂರಾರು ಕತೆಗಳು ಹುಟ್ಟಿಕೊಳ್ಳುತ್ತವೆ. ಸಾಮಾನ್ಯವಾಗಿ ಜನ ಕೂಡ ಒಂದು ಪಕ್ಷದ ನಾಯಕರು ಮತ್ತೊಂದು ಪಕ್ಷದ ನಾಯಕರೊಂದಿಗೆ ಬೆರೆತರೆ ಆಶ್ಚರ್ಯದ ಕಣ್ಣುಗಳಿಂದಲೇ ನೋಡುತ್ತಾರೆ. ಹೀಗಿರುವಾಗ ಸಿದ್ದರಾಮಯ್ಯ ಮತ್ತು ದೇವೇಗೌಡರು ಒಂದೇ ವೇದಿಕೆ ಹಂಚಿಕೊಳ್ಳುತ್ತಾರೆಂದರೆ ಇನ್ನೆಷ್ಟು ಕಾತರ ಇರಬಹುದು ಹೇಳಿ.

ಇಷ್ಟಕ್ಕೂ ಈ ಇಬ್ಬರು ನಾಯಕರನ್ನು ಅದು ಕೂಡ ಒಂದು ಕಾಲದ ಗುರುಶಿಷ್ಯರಾಗಿದ್ದು, ಈಗ ಸಾರ್ವಜನಿಕವಾಗಿ ರಾಜಕೀಯ ವಿಚಾರಕ್ಕೆ ಸಂಬಂಧಿಸಿದಂತೆ ಕಿತ್ತಾಡುವ ದಿಗ್ಗಜರನ್ನು ಒಂದೇ ವೇದಿಕೆಗೆ ತಂದಿದ್ದು ಮೈಸೂರು ವಿಶ್ವ ವಿದ್ಯಾನಿಲಯದ ಶತಮಾನೋತ್ಸವ ಸಂಭ್ರಮದ ಸಮಾರೋಪ ಕಾರ್ಯಕ್ರಮದ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದ ವೇದಿಕೆ.
ಕಾರ್ಯಕ್ರಮ ಆರಂಭವಾಗುತ್ತಿದ್ದಂತೆಯೇ ವೇದಿಕೆ ಮೇಲೇರಿ ಅತಿಥಿಗಳೆಲ್ಲರೂ ಆಸೀನರಾದರು. ಈ ಸಂದರ್ಭ ವೇದಿಕೆಗೆ ಬಂದ ಮಾಜಿ ಪ್ರಧಾನಿ ದೇವೇಗೌಡರು ಸ್ವತಃ ತಾವೇ ಮುಖ್ಯ ಮಂತ್ರಿ ಸಿದ್ದರಾಮಯ್ಯನವರ ಮುಂದೆ ಕೈಚಾಚಿದರು.
ಆಗ ಸಿದ್ದರಾಮಯ್ಯ ಕೈ ಕುಲುಕಿದರೂ ಅವರ ಮುಖದಲ್ಲಿ ನಗು ಮಾತ್ರ ಕಾಣಲಿಲ್ಲ. ಸದಾ ನಗುವಿನಿಂದ ದೂರ ಇರುವ ದೇವೇಗೌಡರು ನಗುತ್ತಾ ಇದ್ದರೂ ಸಿದ್ದರಾಮಯ್ಯ ಅವರ ಮುಖದಲ್ಲಿ ಅದ್ಯಾಕೋ ನಗು ಮಾಯವಾಗಿತ್ತು. ಆದರೆ, ಇಬ್ಬರು ಗುರುಶಿಷ್ಯರು ಪರಸ್ಪರ ಎದುರಾಗಿದ್ದು ಮಾತ್ರ ಗಮನಸೆಳೆಯಿತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications