ಅಣ್ಣ ಎಂದು ಕರೆದಿದ್ದಕ್ಕೆ ಬಿಜೆಪಿಗೆ ಎಚ್ಡಿಕೆ ಧನ್ಯವಾದ!
ಮೈಸೂರು, ಫೆಬ್ರವರಿ 2: ತಮ್ಮನ್ನು ಅಣಕಿಸಿ ರಾಜ್ಯ ಬಿಜೆಪಿ ಐಟಿ ಘಟಕ ಮಾಡಿದ್ದ ಟ್ವೀಟ್ಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಖಾರವಾದ ಪ್ರತ್ಯುತ್ತರ ನೀಡಿದ್ದಾರೆ.
ರವಿ ಪೂಜಾರಿ ಅವರನ್ನು ಬಂಧಿಸಿದ್ದು ತಮ್ಮ ಸರ್ಕಾರದ ಸಾಧನೆ ಎಂದು ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರಿಗೆ 'ಅಣ್ಣಾ ಕುಮಾರಣ್ಣ ರವಿ ಪೂಜಾರಿಯನ್ನು ಬಂಧಿಸಿದ್ದು ನಮ್ಮ ಸಮ್ಮಿಶ್ರ ಸರ್ಕಾರವೇ ಎಂದು ತಮಗೆ ತಾವೇ ಕೀರ್ತಿ ಪಡೆಯುವ ಮೊದಲು, ಕಂಪ್ಲಿ ಶಾಸಕ ಗಣೇಶ್ರನ್ನು ಬಂಧಿಸಿ ನಿಮ್ಮ ಪೌರುಷ ತೋರಿಸಿ' ಎಂದು ಬಿಜೆಪಿ ಲೇವಡಿ ಮಾಡಿತ್ತು.
ಇದಕ್ಕೆ ಸುತ್ತೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ಕುಮಾರಸ್ವಾಮಿ, 'ಟ್ವಿಟ್ಟರ್ನಲ್ಲಿ ನನ್ನನ್ನು ಅಣ್ಣ ಎಂದು ಸಂಬೋಧಿಸಿದ್ದಕ್ಕೆ ಧನ್ಯವಾದ' ಎಂದು ಹೇಳಿದ್ದಾರೆ.

ಕಂಪ್ಲಿ ಗಣೇಶ್ ಬಂಧನ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅಧಿಕಾರಕ್ಕಾಗಿ ಯಾರನ್ನೂ ರಕ್ಷಿಸುವುದಿಲ್ಲ. ಯಾರು ತಪ್ಪು ಮಾಡಿದರೂ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಕಾನೂನಿನ ವ್ಯಾಪ್ತಿಯಲ್ಲಿ ಯಾರಿಗೂ ರಕ್ಷಣೆ ನೀಡುವ ಪ್ರಶ್ನೆ ಇಲ್ಲ. ಅವರ ಬಂಧನಕ್ಕೆ ರೀತಿ ರಿವಾಜು ಇರುತ್ತದೆ. ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಾರೆ. ಆ ಬಗ್ಗೆ ಅನುಮಾನ ಬೇಡ ಎಂದರು.
ರವಿ ಪೂಜಾರಿ ತಲೆಮರೆಸಿಕೊಂಡು 15 ವರ್ಷವಾಗಿತ್ತು. ಆತನ ಬಂಧನಕ್ಕೆ ಆರು ತಿಂಗಳಿನಿಂದ ಸರ್ಕಾರ ಅಲ್ಲಿನ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕ ಹೊಂದುವ ಮೂಲಕ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿತ್ತು. ನೀವು ಐದು ವರ್ಷ ಅಧಿಕಾರದಲ್ಲಿ ಇದ್ದಿರಲ್ಲ, ಆಗ ಏನು ಮಾಡಿದ್ದಿರಿ? ಎಂದು ಬಿಜೆಪಿಯನ್ನು ಪ್ರಶ್ನಿಸಿದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications