ಸಿದ್ದರಾಮಯ್ಯನವರ ಪಾತ್ರ ಎರಡು ದಿನಗಳಲ್ಲಿ ತಿಳಿಯಲಿದೆ: ಎಚ್ ಡಿಕೆ
Recommended Video

ಮೈಸೂರು, ಮೇ 23 : ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲು ಇಂದು ಬುಧವಾರ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಆಗಮಿಸಿದ್ದ ನಿಯೋಜಿತ ಸಿಎಂ ಕುಮಾರಸ್ವಾಮಿ ಅವರು ದೇವಿಗೆ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು.
ಸಮ್ಮಿಶ್ರ ಸರ್ಕಾರದಲ್ಲಿ ಸಿದ್ದರಾಮಯ್ಯನವರ ಪಾತ್ರ ಏನೆಂದು ಇನ್ನೆರಡು ದಿನದಲ್ಲಿ ತಿಳಿಸುತ್ತೇನೆ. ನನ್ನ ಕಾರ್ಯಕ್ರಮಗಳು ಹಾಗೂ ಕಾಂಗ್ರೆಸ್ನ ಜನಪ್ರಿಯ ಕಾರ್ಯಕ್ರಮಗಳು ಮುಂದುವರೆಯುತ್ತವೆ.
ನನ್ನ ಗ್ರಾಮವಾಸ್ತವ್ಯ, ಜನತಾದರ್ಶನ ಕಾರ್ಯಕ್ರಮವೂ ಮುಂದುವರೆಯಲಿದೆ. ಸಮ್ಮಿಶ್ರ ಸರ್ಕಾರ ಆಗಿರುವುದರಿಂದ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಆರ್ಥಿಕ ಪರಿಸ್ಥಿತಿಗೆ ಧಕ್ಕೆಯಾಗದಂತೆ ಸಾಲಮನ್ನಾದ ಬಗ್ಗೆ ನಿರ್ಧಾರ ಮಾಡ್ತೇನೆ ಎಂದರು. ಬಿಜೆಪಿಯವರಿಗೆ ಕಾಣೋದೇಲ್ಲ ಹಳದಿಯೇ. ಅವರು ಪ್ರತಿಭಟನೆ ಮಾಡೋದಾದ್ರೆ ಮಾಡಿಕೊಳ್ಳಲಿ ನನ್ನದೇನು ಅಭ್ಯಂತರ ಇಲ್ಲ.
ನಾನು ಸದಾ ಜನರ ಮಧ್ಯೆ ಇರುವ ಸಿಎಂ ಆಗಿರುತ್ತೇನೆ ಎಂದು ಆಶ್ವಾಸನೆ ನೀಡಿದರು.
ನಿಪಾ ವೈರಸ್ ಕುರಿತು ಪ್ರತಿಕ್ರಿಯಿಸಿದ ಅವರು, ಕೇರಳದಾದ್ಯಂತ ಮಾರಕ ನಿಪಾ ವೈರಾಣು ವ್ಯಾಪಕವಾಗಿ ಹರಡುತ್ತಿದ್ದು, ಈಗಾಗಲೇ ಹತ್ತು ಮಂದಿ ಮೃತಪಟ್ಟಿದ್ದಾರೆ. ಕೇರಳಕ್ಕೆ ಹೊಂದಿಕೊಂಡಿರುವ ನಮ್ಮ ಮಂಗಳೂರು, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೂ ಈ ವೈರಾಣು ವ್ಯಾಪಿಸುವ ಸಾಧ್ಯತೆಗಳಿವೆ.
ಆದ್ದರಿಂದ ವೈರಾಣು ಸೋಂಕು ತಡೆಯಲು ಅಗತ್ಯ ಹಾಗೂ ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ನಾನು ಈಗಾಗಲೇ ಆದೇಶಿಸಿದ್ದೇನೆ ಎಂದು ತಿಳಿಸಿದರು.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications