ಅಗಲಿದ ಒಡೆಯನಿಗೆ ಕಂಬನಿ ಮಿಡಿದ ಸೇವಕರು
ಮೈಸೂರು, ಡಿ. 11 : "ನಮ್ಮ ಮನೆಯ ಮತ್ತು ಅರಮನೆಯ ನಂದಾ ದೀಪ ಆರಿ ಹೋಗಿದೆ" ಎಂದು ಅರಮನೆಯಲ್ಲಿ ಕಾರ್ಯ ನಿರ್ವಹಿಸುವ 300ಕ್ಕೂ ಅಧಿಕ ಸೇವಕರು ಮತ್ತು ಸಿಬ್ಬಂದಿ ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಒಡೆಯರ್ ನಿಧನದ ಸುದ್ದಿ ತಿಳಿದ ತಕ್ಷಣದಿಂದಲೇ ಅರಮನೆಯಲ್ಲಿ ನೀರವ ಮೌನ ಆವರಿಸಿದ, ಕೆಲಸಗಾರರು ಒಡೆಯನನ್ನು ಕಳೆದುಕೊಂಡ ದುಖಃದಲ್ಲಿ ಮುಳುಗಿ ಹೋಗಿದ್ದಾರೆ.
ನಮ್ಮ ಮನೆಯ ದೀಪ ಬೆಳಗಿದ ಒಡೆಯರು ಇಂದು ನಮ್ಮೊಂದಿಗಿಲ್ಲ ಎಂಬ ಸುದ್ದಿ ಆಘಾತವನ್ನು ಉಂಟು ಮಾಡಿದೆ. ಹಲವಾರು ವರ್ಷಗಳಿಂದ ಅವರ ಮತ್ತು ಅರಮನೆಯ ಕೆಲಸ ಮಾಡುತ್ತಿದ್ದೇವೆ ಎಂದು ಕಣ್ಣಿನಲ್ಲಿ ನೀರು ತುಂಬಿಕೊಂಡರು ಮುಜಾಹೀದ್ದಿನ್. 30 ವರ್ಷಗಳಿಂದ ಅರಮನೆಯಲ್ಲಿ ದುಡಿಯುತ್ತಿದ್ದ ರಾಮ ನಾಯಕ್. ತಾತ ಮುತ್ತಾತರ ಕಾಲದಿಂದ ನಮ್ಮ ವಂಶ ಅರಮನೆಯಲ್ಲಿ ಕೆಲಸ ಮಾಡುತ್ತಿದ್ದೇವೆ. ನಾವು ತಂದೆಯನ್ನೇ ಕಳೆದುಕೊಂಡ ದುಖಃದಲ್ಲಿದ್ದೇವೆ ಎಂದು ನೋವನ್ನು ಹಂಚಿಕೊಂಡರು. (ನೀರವ ಮೌನದಲ್ಲಿ ಮುಳುಗಿದ ಮೈಸೂರು)

ಅರಮನೆಯಲ್ಲಿ ಒಡೆಯರು ಮತ್ತು ರಾಜಮನೆತನದವರು ನೀಡಿದ ಸೂಚನೆಗಳನ್ನು ತಪ್ಪದೇ ಪಾಲಿಸಿ, ರಾಜ ವೈಭವದ ಮೆರಗು ನೀಡುತ್ತಿದ್ದ ಅರಮನೆಯ ಸಿಬ್ಬಂದಿ ಈಗ ಅರಸನಿಲ್ಲದೇ ಅನಾಥಪ್ರಜ್ಞೆ ಅನುಭವಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಒಡೆಯರು ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಅರಮನೆ ತಲುಪುತ್ತಿದ್ದಂತೆ, ಅರಮನೆಯಲ್ಲಿ ಶೋಕ ಮಡುಗಟ್ಟಿತು. ಒಡೆಯರ್ ಅವರ ಮೃತದೇಹ ಅರಮನೆ ತಲುಪುವ ವರೆಗೂ ಸಿಬ್ಬಂದಿ ಅವರ ದರ್ಶನಕ್ಕಾಗಿ ಕಾದು ಕುಳಿತಿದ್ದರು.
ನಮ್ಮನ್ನು ಅವರು ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಿದ್ದರು. ಅವರಿಲ್ಲದ ಅರಮನೆಯನ್ನು ಕಲ್ಪಿಸಿಕೊಳ್ಳುವುದಾದದರೂ ಹೇಗೆ? ಎಂದು ಕೆಲಸಗಾರರು ನೋವಿನಿಂದ ನುಡಿದರು. ಅವರ ಸೇವೆ ಮಾಡುವುದೇ ನಮಗೆ ದೊರೆತ ಪುಣ್ಯವಾಗಿತ್ತು. ಸಮೀಪದಿಂದಲೇ ರಾಜರನ್ನು ನೋಡುವ ಭಾಗ್ಯ ನಮ್ಮದಾಗಿತ್ತು. ಆದರೆ ಇದೀಗ ಒಡೆಯರು ನಮ್ಮಿಂದ ದೂರವಾಗಿದ್ದಾರೆ ಎಂದು ಅರಮನೆ ಕೆಲಸಗಾರರು ಕಂಬನಿ ಮಿಡಿದಿದ್ದಾರೆ. (ಒಡೆಯರಿಗೆ ಚಿತ್ರ ನಮನ)
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications