ಮೈಸೂರು ಮಹಾನಗರ ಪಾಲಿಕೆ ಚುಕ್ಕಾಣಿ ಯಾವ ಪಕ್ಷಕ್ಕೆ?
ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆಯಲಿದ್ದು. ಶತಾಯಗತಾಯವಾಗಿ ಮಹಾ ನಗರ ಪಾಲಿಕೆ ಅಧಿಕಾರ ಗುದ್ದುಗೆ ಏರಲು ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಮೈಸೂರು, ಡಿಸೆಂಬರ್. 07 : ಸಿಎಂ ತವರು ಜಿಲ್ಲೆಯಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮೈಸೂರು ನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ಬುಧವಾರದಂದು(ಡಿ.7) ನಡೆಯಲಿದೆ.
ಕಾಂಗ್ರೆಸ್ ನ ಭದ್ರ ಕೋಟೆ ಎನಿಸಿರುವ ಮೈಸೂರು ಜಿಲ್ಲಾ ಪಂಚಾಯಿತಿಯನ್ನು ಕಳೆದುಕೊಂಡು ಮುಖಭಂಗ ಅನುಭವಿಸಿರುವ ಆಡಳಿತ ರೂಢ ಕಾಂಗ್ರೆಸ್ ಶತಾಯಗತಾಯವಾಗಿ ಪಾಲಿಕೆ ಚುಕ್ಕಾಣಿ ಹಿಡಿಯಲು ಎಲಿಲ್ಲದ ಪ್ರಯತ್ನ ನಡೆಸಿದೆ.
ಈಗಾಗಲೇ ಮೈಸೂರು ಜಿಪಂಯನ್ನು ತನ್ನ ತೆಕ್ಕೆಗೆ ಹಾಕಿಕೊಂಡು ಕೇಸರಿ ಮಯ ಮಾಡಲು ಹೊರಟಿರುವ ಬಿಜೆಪಿ ಜೆಡಿಎಸ್ ನೊಂದಿಗೆ ಅಧಿಕಾರ ಹಂಚಿಕೊಂಡು ಪಾಲಿಕೆಯಲ್ಲೂ ಕಾಂಗ್ರೆಸ್ ಗೆ ಸೆಡ್ಡು ಹೊಡೆಯಲು ಮುಂದಾಗಿದೆ.

ಈಗಾಗಿ ಮೂರು ಪಕ್ಷಗಳು ಪಾಲಿಕೆ ಚುಕ್ಕಾಣಿ ಹಿಡಿಯಲು ತೀವ್ರ ಪೈಪೋಟಿ ನಡೆದಿವೆ. ಈಗಾಗಲೇ ಜೆಡಿಎಸ್ ನ ಎಲ್ಲ ಪಾಲಿಕೆ ಸದಸ್ಯರು ರೆಸಾರ್ಟ್ ನಲ್ಲಿ ಠಿಕಾಣಿ ಹೂಡಿದ್ದು ಮತ್ತಷ್ಟು ಕುತೂಹಲ ಮೂಡಿಸಿದೆ.
ಬಿಜೆಪಿ ಮತ್ತು ಜೆಡಿಎಸ್ ನಾಯಕರ ಸಭೆಯಲ್ಲಿ ಈ ಬಾರಿಯೂ ಹೊಂದಾಣಿಕೆ ಮುಂದುವರೆಸುವ ಕುರಿತು ಮಾತುಕತೆಗಳು ನಡೆದಿವೆ ಎನ್ನುವ ಗುಸು-ಗುಸು ಸುದ್ದಿಗಳು ಹರಿದಾಡುತ್ತಿವೆ.
ಇನ್ನು ಮೂಲಗಳ ಪ್ರಕಾರ ರಾಷ್ಟ್ರೀಯ ಪಕ್ಚಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಜೆಡಿಎಸ್ ನೊಂದಿಗೆ ಮೈತ್ರಿಯೊಂದಿಗೆ ಪಾಲಿಕೆಯ ಆಡಳಿತವನ್ನು ಹಂಚಿಕೊಳ್ಳಲು ಪೈಪೋಟಿ ನಡೆಸಿವೆ ಎನ್ನಲಾಗಿದೆ.
ಕೆಲ ವರ್ಷಗಳಿಂದ ಬಿಜೆಪಿಯು ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರ ಹಂಚಿಕೊಂಡಿದ್ದು, ಈ ಬಾರಿಯೂ ಮೈತ್ರಿ ಮುಂದುವರಿಯುವ ನಿರೀಕ್ಷೆಗಳು ಇವೆ.
ಕಾಂಗ್ರೆಸ್ ಕೂಡ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳಲು ತೀವ್ರ ಯತ್ನ ನಡೆಸುತ್ತಿದೆ ಎನ್ನುವ ಮಾತುಗಳು ಕೇಳಿಬಂದಿವೆ. ನಗರ ಪಾಲಿಕೆಯಲ್ಲಿ 65 ಕೌನ್ಸಿಲ್ ಸದಸ್ಯರಿದ್ದು, ಕಾಂಗ್ರೆಸ್ ನ 20, ಜೆಡಿಎಸ್-19, ಬಿಜೆಪಿಯ-13, ಎಸ್ ಡಿಪಿಐ -2, ಕೆಜೆಪಿ-1 ಮತ್ತು 8 ಮಂದಿ ಸ್ವತಂತ್ರ ಅಭ್ಯರ್ಥಿಗಳಿದ್ದಾರೆ.
ಕೆಜೆಪಿ ಅಭ್ಯರ್ಥಿ ಬಿ.ಎಲ್. ಭೈರಪ್ಪ ಮತ್ತು ಸ್ವತಂತ್ರ ಕಾರ್ಪೊರೇಟರ್ ಅಶ್ವಿನಿ ಅನಂತು ಅವರು ಜೆಡಿಎಸ್ ಪಕ್ಷಕ್ಕೆ ಸೇರಿದ ಹಿನ್ನೆಲೆಯಲ್ಲಿ ಜೆಡಿಎಸ್ ಒಟ್ಟು ಸದಸ್ಯರ ಸಂಖ್ಯೆ 21 ಆಗಿದೆ. ಶಾಸಕರು, ಸಂಸದರು, ಎಮ್ ಎಲ್ ಸಿ ಅವರ ಓಟಿನ ಮೂಲಕ ಕಾಂಗ್ರೆಸ್ 27, ಜೆಡಿಎಸ್ 25 ಮತ್ತು ಬಿಜೆಪಿ 14 ಓಟುಗಳನ್ನು ಗಳಿಸುವ ಸಾಧ್ಯತೆಯಿದೆ.
ಜೆಡಿಎಸ್ ಬಿಜೆಪಿಯೊಂದಿಗೆ ಕೈ ಜೋಡಿಸಿದಲ್ಲಿ ಒಟ್ಟು 39 ಮತಗಳನ್ನು ಪಡೆಯಬಹುದು. ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡಲ್ಲಿ 52 ಮತಗಳನ್ನು ಪಡೆಯಲಿದೆ. ಮೇಯರ್ ಸ್ಥಾನವು ಸಾಮಾನ್ಯ ಸ್ಥಾನಕ್ಕೆ ಮೀಸಲಾಗಿದ್ದು,
ಜೆಡಿಎಸ್ ನಿಂದ ಹಿರಿಯ ನಗರ ಪಾಲಿಕೆ ಸದಸ್ಯರಾದ ಕೆ.ಟಿ. ಚಲುವೇಗೌಡ, ಎಮ್.ಜೆ. ರವಿಕುಮಾರ್, ಕೆ.ವಿ. ಮಲ್ಲೇಶ್ ಅವರು ಮೇಯರ್ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.
ಇನ್ನು ಉಪ ಮೇಯರ್ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಸೀಮಾ ಪ್ರಸಾದ್ ಮತ್ತು ರತ್ನ ಅವರ ಹೆಸರುಗಳು ಕೇಳಿಬರುತ್ತಿವೆ.
-
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications