ಮೈಸೂರಿನ ವಿಕ್ರಂ ಆಸ್ಪತ್ರೆಗೆ ಬೀಳಲಿದೆಯೇ ಬೀಗಮುದ್ರೆ?
ಮೈಸೂರು, ಡಿಸೆಂಬರ್ 15 : ನಗರದ ಯಾದವಗಿರಿಯಲ್ಲಿರುವ ಪ್ರತಿಷ್ಠಿತ ವಿಕ್ರಂ ಆಸ್ಪತ್ರೆಗೆ ಬೀಗ ಜಡಿಯುವ ಎಚ್ಚರಿಕೆ ಸಂದೇಶವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರವಾನಿಸಿದೆ. ಆಸ್ಪತ್ರೆಯ ಅವ್ಯವಹಾರ ಹಾಗೂ ಅವ್ಯವಸ್ಥೆ ಬಗ್ಗೆ ದೂರು ಬಂದಿದ್ದ ಹಿನ್ನೆಲೆ ಇಲಾಖೆ ಷೋಕಾಸ್ ನೋಟಿಸ್ ನೀಡಿದೆ.
ಆರೋಗ್ಯ ಇಲಾಖೆ ಆಸ್ಪತ್ರೆಯ ಆಡಳಿತಾಧಿಕಾರಿಗೆ ನೋಟಿಸ್ ನೀಡಿದ್ದು, ನೋಂದಣಿ ರದ್ದುಪಡಿಸುವ ಎಚ್ಚರಿಕೆ ನೀಡಿದೆ. ನೋಟಿಸ್ ನಲ್ಲಿ ಈಗಾಗಲೇ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಪತ್ರ ದೊರೆತ 15 ದಿನಗಳೊಳಗೆ ಬೇರೆಡೆ ಸ್ಥಳಾಂತರಿಸುವಂತೆ ಸೂಚಿಸಲಾಗಿದೆ. ಡಿ. 02 ರಂದು ಆಸ್ಪತ್ರೆಗೆ ಷೋಕಾಸ್ ನೀಡಿರುವ ಹಿನ್ನೆಲೆ ಡಿ.17 ರಂದು ವಿಕ್ರಂ ಆಸ್ಪತ್ರೆ ನೊಂದಣಿ ರದ್ದಾಗಲಿದೆ.[ಬೆಂಗಳೂರಿನ ಅಪೋಲೊ ಆಸ್ಪತ್ರೆ ಸರ್ಕಾರದ ವಶಕ್ಕೆ]

ಏನಿದು ಪ್ರಕರಣ :
ನಗರದ ನಿವಾಸಿ ರವೀಂದ್ರ ಎಂಬುವವರು ವಿಕ್ರಂ ಆಸ್ಪತ್ರೆಯ ಅವ್ಯವಸ್ಥೆ ಹಾಗೂ ಹಣ ಸುಲಿಗೆಯ ಬಗ್ಗೆ ದೂರು ದಾಖಲಿಸಿದ್ದರು. ಕಾನೂನು ಹೋರಾಟ ಆರಂಭಿಸಿದ್ದರು. ಮೂರು ವರ್ಷಗಳ ಈ ಸತತ ಹೋರಾಟದ ಫಲವಾಗಿ ಇದೀಗ ವಿಕ್ರಂ ಆಸ್ಪತ್ರೆಯ ನೊಂದಣಿ ರದ್ದಾಗುವ ಸ್ಥಿತಿ ನಿರ್ಮಾಣವಾಗಿದೆ.

ಯಾಕೆ ಹೋರಾಟ :
ಮೂಲತಃ ಕೊಳ್ಳೇಗಾಲದ ರವೀಂದ್ರ ಮೈಸೂರಿನಲ್ಲಿ ವಾಸವಿದ್ದರು. ಕೆಲ ವರ್ಷಗಳ ಹಿಂದೆ ತಂದೆ ಮಹಾದೇವಯ್ಯ ಅನಾರೋಗ್ಯದ ಕಾರಣ ವಿಕ್ರಂ ಆಸ್ಪತ್ರೆಗೆ ದಾಖಲಿಸಿದರು. ಚಿಕಿತ್ಸೆಗಾಗಿ ಲಕ್ಷಾಂತರ ಹಣ ವ್ಯವಯಿಸಿದರು. ಆದರೂ ಚಿಕಿತ್ಸೆ ಫಲಕಾರಿಯಾಗದೆ ತಂದೆ ಮೃತಪಟ್ಟಿದ್ದರು.[ಸಾವಿನ ಮನೆಯಾಗುತ್ತಿದೆಯಾ ಮೈಸೂರಿನ ಕೆ.ಆರ್ ಆಸ್ಪತ್ರೆ?]

ಈ ಘಟನೆ ಬಳಿಕ ರವೀಂದ್ರ ಆಸ್ಪತ್ರೆಯ ನಿರ್ಲಕ್ಷ ಹಾಗೂ ಬೇಜಾವ್ದಾರಿಯಿಂದಲೇ ನನ್ನ ತಂದೆ ಪ್ರಾಣ ಕಳೆದುಕೊಳ್ಳುವಂತಾಯಿತು ಎಂದು ಆರೋಪಿಸಿ ಆಸ್ಪತ್ರೆ ವಿರುದ್ಧ ಹೋರಾಟಕ್ಕೆ ನಿಂತರು. ವೈಧ್ಯಕೀಯ ಇಲಾಖೆಯ ವಿವಿಧ ವಿಭಾಗಗಳ ಅಧಿಕಾರಿಗಳಿಗೆ ವಿಕ್ರಂ ಆಸ್ಪತ್ರೆಯ ಅವ್ಯವಸ್ಥೆ ಹಾಗೂ ಅವ್ಯವಹಾರದ ಬಗ್ಗೆ ದೂರು ದಾಖಲಿಸುವ ಮೂಲಕ ಹೋರಾಟ ಪ್ರಾರಂಭಿಸಿದರು.[1.25ಲಕ್ಷ ಸಂಬಳಕ್ಕೂ ವಿಶೇಷ ವೈದ್ಯರು ಸೇವೆಗೆ ಸಿಗುತ್ತಿಲ್ಲ]

ಈ ಸಂಬಂಧ ಒನ್ ಇಂಡಿಯಾದೊಂದಿಗೆ ಮಾತನಾಡಿದ ರವೀಂದ್ರ, ಕರ್ನಾಟಕ ಪ್ರೈವೆಟ್ ಮೆಡಿಕಲ್ ಕಾಯ್ದೆಯನ್ವಯ ನೋಂದಣಿಯಾಗಿರುವ ವಿಕ್ರಂ ಆಸ್ಪತ್ರೆ, ಕಾಯ್ದೆ ನಿಯಮ ಪಾಲಿಸುವಲ್ಲಿ ವಿಫಲವಾಗಿದೆ. ಅಕ್ರಮವಾಗಿ ರೋಗಿಗಳಿಂದ ಹಣ ವಸೂಲಿ ಮಾಡುವ ಮೂಲಕ ಸುಲಿಗೆ ಮಾಡುತ್ತಿದೆ ಎಂಬುದು ತಿಳಿದದ್ಸು ನಮ್ಮ ತಂದೆ ಆಸ್ಪತ್ರೆಗೆ ಸೇರಿಸಿದ ನಂತರ ಹೀಗಾಗಿ ಹೋರಾಟ ಅನಿವಾರ್ಯ ವಾಯಿತು. ಇದೀಗ ಆಸ್ಪತ್ರೆಗೆ ಬೀಗ ಮುದ್ರೆ ಬೀಳುಸ ಸಾಧ್ಯತೆಯಿದ್ದು ನೊಂದವರ ಆತ್ಮಕ್ಕೆ ಶಾಂತಿ ಸಿಗಲಿದೆ ಎಂದರು.

-
ದುಬಾರಿ ಆ್ಯಂಟಿ ಏಜಿಂಗ್ ಕ್ರೀಮ್ಗಿಂತ ಈ ತರಕಾರಿಯೇ ಪರಿಣಾಮಕಾರಿಯಂತೆ: ಚಿರಯೌವನ ತ್ವಚೆಗೆ ನೈಸರ್ಗಿಕ ಉಪಾಯ -
Summer Heat Alert: ಮಕ್ಕಳ ಆರೋಗ್ಯ ಕಾಪಾಡಲು ಪೋಷಕರಿಗೆ 7 ಮುಖ್ಯ ಸಲಹೆಗಳು -
ಮನೆ ಕಟ್ಟುವಾಗ ವಾಸ್ತು ಪಾಲಿಸದಿದ್ದರೆ ಏನಾಗುತ್ತದೆ? ಇಲ್ಲಿವೆ 5 ಪ್ರಮುಖ ನಿಯಮಗಳು -
ಬೇಸಿಗೆಯಲ್ಲಿ ಸೌತೆಕಾಯಿ ತಿನ್ನಲು ಟಾಪ್ 5 ಕಾರಣಗಳು: ಆರೋಗ್ಯಕ್ಕೆ ಅದ್ಭುತ ಲಾಭಗಳು -
ಮೊಡವೆ ಕಲೆಗಳನ್ನು ಸಂಪೂರ್ಣವಾಗಿ ತೆಗೆದುಹಾಕುವ ಸಿಂಪಲ್ ಟ್ರಿಕ್ಸ್ : ಬೇಸಿಗೆಯಲ್ಲಿ ಅನುಸರಿಸಿ ಈ 9 ಟಿಪ್ಸ್ -
ನಿಮ್ಮ ಮನೆ ದಿಕ್ಕು ಸರಿಯೇ? ರಾಶಿ ಪ್ರಕಾರ ವಾಸ್ತು ಸೂಚನೆಗಳು ಇಲ್ಲಿವೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ












Click it and Unblock the Notifications